AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಯ ಅಗಲಿಕೆ ನೋವಿನಲ್ಲಿ ಆಕೆಯ ಸಮಾಧಿ ಪೂಜೆ ಮಾಡಿ, ಅಲ್ಲೇ ಮರಕ್ಕೆ ನೇಣು ಬಿಗಿದುಕೊಂಡ ಗಂಡ

38 ವರ್ಷದ ಗುರುಮೂರ್ತಿ ಅವರು ತಮ್ಮ ಪತ್ನಿ ಮೌನಿಕಾಳ ಸಮಾಧಿಗೆ ಪೂಜೆ ‌ಮಾಡಿ, ನಂತರ ಅಲ್ಲೇ ಇದ್ದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹೆಂಡತಿಯ ಅಗಲಿಕೆ ನೋವಿನಲ್ಲಿ ಆಕೆಯ ಸಮಾಧಿ ಪೂಜೆ ಮಾಡಿ, ಅಲ್ಲೇ ಮರಕ್ಕೆ ನೇಣು ಬಿಗಿದುಕೊಂಡ ಗಂಡ
ಹೆಂಡತಿ ಸಾವಿನ ನೋವಿನಲ್ಲಿ ಆಕೆಯ ಸಮಾಧಿ ಬಳಿಯೇ ಆತ್ಮಹತ್ಯೆಗೆ ಶರಣಾದ‌ ಪತಿರಾಯ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Dec 18, 2023 | 5:47 PM

Share

ಚಿಕ್ಕಬಳ್ಳಾಪುರ, ಡಿಸೆಂಬರ್​ 18: ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಆತನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಪತ್ನಿ (wife) ಮೃತಪಟ್ಟ ವರ್ಷದ ನಂತರ ಆಕೆಯ ಪತಿಯೂ (husband), ಸ್ಮಶಾನದ ಬಳಿ ತೆರಳಿ ಆಕೆಯ ಸಮಾಧಿ ಪಕ್ಕದಲ್ಲೇ ಆಕೆಯದ್ದೇ ಸೀರೆಯನ್ನು ಬಳಸಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾಯಕ,  ನೋವಿನ ಘಟನೆ ನಡೆದಿದೆ. ಅಷ್ಟಕ್ಕೂ ಅದು ಎಲ್ಲಿ ಅಂತೀರಾ.. ಈ ವರದಿ ನೋಡಿ.

ಬರೋಬ್ಬರಿ 13 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ನಿವಾಸಿಗಳಾದ (Bagepalli, Chikkaballapur) ಗುರುಮೂರ್ತಿ (38) ಹಾಗೂ ಮೌನಿಕ, ಪರಸ್ಪರ ಒಬ್ಬರಿಗೊಬ್ಬರು ಇಷ್ಟಪಟ್ಟು ಅದ್ದೂರಿಯಾಗಿ ಮದುವೆ ಮಾಡಿಕೊಂಡಿದ್ದರು. ದಂಪತಿಗೆ ಒಂದು ಸುಂದರವಾದ ಹೆಣ್ಣು ಮಗುವಿತ್ತು. ಆದರೆ ಕಳೆದ ವರ್ಷ ನವೆಂಬರ್ 22 ರಂದು ಮೌನಿಕ ಖಿನ್ನತೆಯಿಂದ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಒಂದು ವರ್ಷದ ನಂತರ ಆಕೆಯ ಗಂಡ ಗುರುಮೂರ್ತಿ ಸಹ ಪತ್ನಿಯ ಹಾದಿ ಹಿಡಿದಿದ್ದು, ಪತ್ನಿಯ ಸಮಾಧಿ ಬಳಿ ಇದ್ದ ಬೇವಿನ ಮರಕ್ಕೆ ಪತ್ನಿಯ ಸೀರೆ ಬಳಸಿ ನೇಣಿಗೆ ಶರಣಾಗಿದ್ದಾನೆ.

ಇನ್ನು ಮೃತ ಗುರುಮೂರ್ತಿ ಕಾರು ಚಾಲಕನಾಗಿದ್ದ. ಪತ್ನಿ ಮೃತಪಟ್ಟ ನಂತರ ಆತನ ಮಗಳನ್ನು ಪತ್ನಿಯ ತವರುಮನೆಯವರು ಕರೆದುಕೊಂಡು ಹೋಗಿದ್ದರು. ಇತ್ತ ಒಬ್ಬಂಟಿಯಾಗಿದ್ದ ಗುರುಮೂರ್ತಿ ಇತ್ತೀಚಿಗೆ ಅಣ್ಣ ಸುಬ್ಬು ಮನೆಯಲ್ಲಿ ವಾಸವಾಗಿದ್ದ. ಇಂದು ಬೆಳಿಗ್ಗೆ 6 ಗಂಟೆಗೆ ವಾಕಿಂಗ್ ಹೋಗಿ ಬರುವುದಾಗಿ ಹೇಳಿ ಹೋದವನು ಸ್ಮಶಾನದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಇದನ್ನೂ ಓದಿ: ತಂದೆಯನ್ನೇ ನೋಡದ ಮಗಳಿಗೆ ತ್ಯಾಗಮಯಿ ತಾಯಿ ಎಲ್ಲವನ್ನೂ ಧಾರೆಯೆದಿದ್ದರು! ಆದರೆ ವಿಧಿಯಾಟ… ಮಿಸ್ ಮಾಡದೆ ಓದಿ

ಅನೋನ್ಯವಾಗಿದ್ದ ದಂಪತಿಯಲ್ಲಿ ಆಕೆ ಸಾವಿನ ಮನೆ ಸೇರಿ, ಗಂಡನನ್ನು ಒಬ್ಬೊಂಟಿ ಮಾಡಿದ್ದರೆ, ಇತ್ತ ಇದ್ದ ಮಗಳ ಮುಖವನ್ನು ನೋಡಿ ಬಾಳಿ ಬದುಕಬೇಕಾದ ವ್ಯಕ್ತಿ ಮಗಳನ್ನು ಒಬ್ಬಂಟಿ ಮಾಡಿ ಪತ್ನಿಯ ಸಮಾಧಿ ಬಳಿಯೇ ಆತ್ಮಹತ್ಯೆಗೆ ಶರಣಾಗಿದ್ದು ದುರದೃಷ್ಟಕರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:53 am, Mon, 18 December 23

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್