AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಚಳಿಗಾಲದಲ್ಲಿ ನುಗ್ಗೆಕಾಯಿಗೆ ಹೆಚ್ಚಿದ ಬೇಡಿಕೆ; ಕೆಜಿಗೆ 400 ರೂಪಾಯಿ ನಿಗದಿ!

ಬೇಡಿಕೆಯ ಅನುಸಾರವಾಗಿ ಈಗ ಮಹಾರಾಷ್ಟ್ರದಿಂದ ನುಗ್ಗೆಕಾಯಿ ತರಿಸಿ ವರ್ತಕರು ಮಾರಾಟ ಮಾಡುತ್ತಿದ್ದಾರೆ. ಆದ್ದರಿಂದ ಕೆಜಿ ನುಗ್ಗೆಕಾಯಿಗೆ 400 ರೂಪಾಯಿ ನಿಗದಿಯಾಗಿದೆ. ಆದರೂ ಗ್ರಾಹಕರು ಮುಗಿಬಿದ್ದು ನುಗ್ಗೆಕಾಯಿ ಖರೀದಿ ಮಾಡುತ್ತಿದ್ದಾರೆ.

ಚಿಕ್ಕಬಳ್ಳಾಪುರ: ಚಳಿಗಾಲದಲ್ಲಿ ನುಗ್ಗೆಕಾಯಿಗೆ ಹೆಚ್ಚಿದ ಬೇಡಿಕೆ; ಕೆಜಿಗೆ 400 ರೂಪಾಯಿ ನಿಗದಿ!
ನುಗ್ಗೆಕಾಯಿ
Follow us
TV9 Web
| Updated By: preethi shettigar

Updated on:Dec 07, 2021 | 1:20 PM

ಚಿಕ್ಕಬಳ್ಳಾಫುರ: ನುಗ್ಗೆಕಾಯಿಗೂ ಚಳಿಗಾಲಕ್ಕೂ ಅದೇನೋ ಒಂಥರ ನಂಟು. ಚಳಿಗಾಲದಲ್ಲಿ ನುಗ್ಗೆಕಾಯಿ (Moringa) ಸಾಂಬರ್ ತಿನ್ನಬೇಕು ಎಂಬುವುದು ಹಲವರ ಬಯಕೆ. ಏಕೆಂದರೆ ಚಳಿಗೆ ನುಗ್ಗೆಕಾಯಿ ಹೇಳಿ ಮಾಡಿಸಿದ ತರಕಾರಿ. ಆದರೆ ನುಗ್ಗೆಕಾಯಿ ಮಾರುಕಟ್ಟೆಯಲ್ಲಿ ನುಗ್ಗೆಕಾಯಿ ಸಿಗುತ್ತಿಲ್ಲ. ಹೀಗಾಗಿ ಬೇಡಿಕೆಯ ಅನುಸಾರವಾಗಿ ಈಗ ಮಹಾರಾಷ್ಟ್ರದಿಂದ ನುಗ್ಗೆಕಾಯಿ ತರಿಸಿ ವರ್ತಕರು ಮಾರಾಟ ಮಾಡುತ್ತಿದ್ದಾರೆ. ಆದ್ದರಿಂದ ಕೆಜಿ ನುಗ್ಗೆಕಾಯಿಗೆ 400 ರೂಪಾಯಿ ನಿಗದಿಯಾಗಿದೆ. ಆದರೂ ಗ್ರಾಹಕರು ಮುಗಿಬಿದ್ದು ನುಗ್ಗೆಕಾಯಿ ಖರೀದಿ ಮಾಡುತ್ತಿದ್ದಾರೆ.

ಇತ್ತೀಚೆಗೆ ಸುರಿದ ಮಳೆಗೆ ನುಗ್ಗೆಕಾಯಿ ಗಿಡಗಳು ಹಾಳಾಗಿವೆ. ಆದರೆ ಈಗ ಮದುವೆ ಸೀಜನ್ ಹೀಗಾಗಿ ಮದುವೆ ಊಟದಲ್ಲಿ ನುಗ್ಗೆಕಾಯಿ ಸಾಂಬರ್ ಬೇಕೆ ಬೇಕು. ಈ ಕಾರಣಕ್ಕೆ ಕೈಯಲ್ಲಿ ಹಣ ಹಿಡಿದು ನುಗ್ಗೆಕಾಯಿಗೆ ಗ್ರಾಹಕರು ಪರದಾಡುತ್ತಿದ್ದಾರೆ. ಗೌರಿಬಿದನೂರಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ನುಗ್ಗೆಕಾಯಿ ಖರೀದಿ ಮಾಡಿದ ಗ್ರಾಹಕ ರವಿ ಎನ್ನುವವರು ಈ ಕುರಿತು ಮಾತನಾಡಿದ್ದು, ಹಣ ಹಿಡಿದು ಮಾರುಕಟ್ಟೆಗೆ ತಿರುಗಾಡಿದರೂ ನುಗ್ಗೆಕಾಯಿ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

ತರಕಾರಿ ಬೆಲೆ ಹೆಚ್ಚಳಕ್ಕೆ ಮಳೆಯೇ ಕಾರಣ ಪ್ರಾಥಮಿಕ ಅಂದಾಜಿನ ಪ್ರಕಾರ, ಐದು ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು, 30,114 ಹೆಕ್ಟೇರ್ ತೋಟಗಾರಿಕಾ ಬೆಳೆ ನಷ್ಟವಾಗಿದೆ.

ಗದಗ ಉತ್ತರ ಕರ್ನಾಟಕ ಜಿಲ್ಲೆಯ ಗದಗದಲ್ಲಿ, ಆರಂಭಿಕ ಅಂದಾಜಿನ ಪ್ರಕಾರ 2,200 ಹೆಕ್ಟೇರ್ ಬೆಳೆಗಳು ಮತ್ತು 1,300 ಹೆಕ್ಟೇರ್ ತೋಟಗಾರಿಕಾ ಉತ್ಪನ್ನಗಳಿಗೆ ನಷ್ಟವಾಗಿದೆ. ಈರುಳ್ಳಿ, ಮೆಣಸಿನಕಾಯಿ, ಬಾಳೆ, ಮೆಕ್ಕೆ ಜೋಳ ಬೆಳೆಗಳು ಮಳೆಯಿಂದ ಹಾನಿಗೀಡಾಗಿವೆ.

ಧಾರವಾಡ ಜಿಲ್ಲೆಯ ಅಧಿಕಾರಿಗಳು ನಡೆಸಿದ ಪ್ರಾಥಮಿಕ ಸಮೀಕ್ಷೆ ಪ್ರಕಾರ ಇದುವರೆಗೆ 21,344 ಹೆಕ್ಟೇರ್ ಕೃಷಿ ಬೆಳೆ ಹಾಗೂ 8,759 ತೋಟಗಾರಿಕೆ ಬೆಳೆಗಳು ನಾಶವಾಗಿವೆ. ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿಯ ಅಂದಾಜು ನಡೆಸುತ್ತಿದ್ದಾರೆ. ಹಾನಿಗೊಳಗಾದ ಬೆಳೆಗಳಲ್ಲಿ ಗೋಧಿ, ಮೆಕ್ಕೆ ಜೋಳ, ಸೋಯಾ, ಹತ್ತಿ ಇತರವು ಸೇರಿವೆ.

ತುಮಕೂರು ತುಮಕೂರು ಜಿಲ್ಲೆಯಲ್ಲೂ ಧಾರಾಕಾರ ಮಳೆಯಿಂದಾಗಿ ರೈತರು ನಷ್ಟ ಅನುಭವಿಸಿದ್ದಾರೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಸುಮಾರು 60,000 ಹೆಕ್ಟೇರ್ ಬೆಳೆ ಹಾನಿಯಾಗಿದೆ. ರಾಗಿ, ನೆಲಗಡಲೆ, ತೊಗರಿ ಬೇಳೆ ನಾಶವಾಗಿದೆ.

ಕೊಪ್ಪಳ ಕೊಪ್ಪಳ ಜಿಲ್ಲೆಯನ್ನು ಭತ್ತದ ನಾಡು ಎಂದು ಕರೆಯಲಾಗುತ್ತದೆ. ಆದರೆ ಮಳೆಯಿಂದ ಸಾವಿರಾರು ಭತ್ತ ಬೆಳೆಗಾರರು ಬೆಳೆ ಕಳೆದುಕೊಂಡಿದ್ದು, ಸರಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ. ಕೊಪ್ಪಳದಲ್ಲಿ 2,500 ಹೆಕ್ಟೇರ್ ಕೃಷಿ ಭೂಮಿ ನಾಶವಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದೆರಡು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ವ್ಯಾಪಕ ಬೆಳೆ ನಾಶವಾಗಿದೆ. ಒಟ್ಟು 6 ಮಂದಿ ಪ್ರಾಣ ಕಳೆದುಕೊಂಡಿದ್ದು, ನೂರಾರು ಹೆಕ್ಟೇರ್ ಬೆಳೆ ಜಲಾವೃತವಾಗಿದೆ. ಆಲಗಟ್ಟಿ ಗ್ರಾಮದಲ್ಲಿ 300 ಎಕರೆ ತೋಟಗಾರಿಕೆ ಬೆಳೆಗಳು ಜಲಾವೃತವಾಗಿದೆ. ಕಳೆದ ವರ್ಷ ನಿರ್ಮಿಸಿದ ಅವೈಜ್ಞಾನಿಕ ಚೆಕ್ ಡ್ಯಾಂಗಳೇ ನಷ್ಟಕ್ಕೆ ಕಾರಣ ಎಂದು ರೈತರು ಆರೋಪಿಸಿದ್ದಾರೆ.

ಹಾವೇರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿ ನ.1ರಿಂದ ಇಲ್ಲಿಯವರೆಗೆ 18,444 ಹೆಕ್ಟೇರ್ ಬೆಳೆ ನಾಶವಾಗಿದ್ದು, ಹತ್ತಿ, ಸೋಯಾಬೀನ್, ಶೇಂಗಾ ಸೇರಿದಂತೆ ಇತರೆ ಬೆಳೆಗಳು ನಾಶವಾಗಿವೆ. ಸರಕಾರ ಮಧ್ಯಂತರ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 34,454 ಹೆಕ್ಟೇರ್ ಬೆಳೆ ನಾಶವಾಗಿದೆ. ರಾಗಿ, ಟೊಮೆಟೋ ಸೇರಿದಂತೆ ಇತರೆ ಬೆಳೆಗಳು ನಾಶವಾಗಿವೆ. ಕೋಲಾರ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಆರು ಎಕರೆ ಟೊಮೆಟೋ ಬೆಳೆ ನಾಶವಾಗಿದೆ.

ಇದನ್ನೂ ಓದಿ:

ತರಕಾರಿ ಬೆಲೆ ಗಗನಕ್ಕೆ: ದಲ್ಲಾಳಿಗಳ ಶೋಷಣೆ ನಿಲ್ಲದ ಹೊರತು ರೈತ ಸಮುದಾಯದ ಬವಣೆ ತಪ್ಪಲಾರದು!

ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ, ಪ್ಯಾಕೆಟ್ ಒಂದರಲ್ಲಿ 2 ಟೊಮೆಟೋ ಮಾರಾಟ!

Published On - 10:47 am, Tue, 7 December 21

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ