AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೆಕಿಂಗ್​ಗೆ ಬಂದು ದುರ್ಗಮ ಕಮರಿಗೆ ಜಾರಿಬಿದ್ದ ಯುವಕ: ರಕ್ಷಣೆಗೆ ಬಂತು ವಾಯುಪಡೆ ಹೆಲಿಕಾಪ್ಟರ್

ಟ್ರಕ್ಕಿಂಗ್​ಗೆ ಎಂದು ಬಂದಿದ್ದ ಯುವಕ ದುರ್ಗಮ ಪ್ರದೇಶಕ್ಕೆ ಜಾರಿ‌ ಬಿದ್ದ ಘಟನೆ ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ಬ್ರಹ್ಮಗಿರಿ ಬೆಟ್ಟದಲ್ಲಿ ನಡೆದಿದೆ.

ಟ್ರೆಕಿಂಗ್​ಗೆ ಬಂದು ದುರ್ಗಮ ಕಮರಿಗೆ ಜಾರಿಬಿದ್ದ ಯುವಕ: ರಕ್ಷಣೆಗೆ ಬಂತು ವಾಯುಪಡೆ ಹೆಲಿಕಾಪ್ಟರ್
ನಂದಿಬೆಟ್ಟದಲ್ಲಿ ಕಮರಿಗೆ ಸಿಲುಕಿದ್ದ ನಿಶಾಂತ್ ಗುಲ್ಲಾ
TV9 Web
| Edited By: |

Updated on: Feb 20, 2022 | 7:40 PM

Share

ಚಿಕ್ಕಬಳ್ಳಾಪುರ: ಟ್ರಕ್ಕಿಂಗ್​ಗೆ ಎಂದು ಬಂದಿದ್ದ ಯುವಕ ದುರ್ಗಮ ಪ್ರದೇಶಕ್ಕೆ ಜಾರಿ‌ ಬಿದ್ದ ಘಟನೆ ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ಬ್ರಹ್ಮಗಿರಿ ಬೆಟ್ಟದಲ್ಲಿ ನಡೆದಿದೆ. ಯುವಕನನ್ನು ನಿಶಾಂತ್ ಗುಲ್ಲಾ ಎಂದು ಗುರುತಿಸಲಾಗಿದೆ. ಪ್ರಾಣರಕ್ಷಣೆಗೆ ಮೊರೆ ಇಡುತ್ತಿದ್ದ ನಿಶಾಂತ್ ಅವರನ್ನು ಹೆಲಿಕಾಪ್ಟರ್‌ ಸಹಾಯದಿಂದ ರಕ್ಷಿಸಲಾಯಿತು. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಹೆಲಿಕಾಪ್ಟರ್​ನಿಂದ ಹಗ್ಗ ಬಿಟ್ಟು ಯುವಕನನ್ನು ಮೇಲೆತ್ತಲು ಪ್ರಯತ್ನಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಥಳದಲ್ಲಿಯೇ ಉಪಸ್ಥಿತರಿದ್ದು, ಉಸ್ತುವಾರಿ ವಹಿಸಿದ್ದರು. ನಂದಿಗಿರಿಧಾಮದ ಬಳಿ ಟ್ರಕ್ಕಿಂಗ್ ವೇಳೆ ಯುವಕ ಕಾಲುಜಾರಿ ಕಮರಿಗೆ ಬಿದ್ದಿದ್ದ. ಯುವಕನ ರಕ್ಷಣೆಗೆ ಹೆಲಿಕಾಪ್ಟರ್ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ. ಒಂದೆಡೆ ಕಲ್ಲುಬಂಡೆಗಳು ಮತ್ತೊಂದೆಡೆ ಗಿಡಮರಗಳು ಇರುವುದರಿಂದ ಹೆಲಿಕಾಪ್ಟರ್ ಯುವಕನ ಸಮೀಪ ಲ್ಯಾಂಡ್ ಆಗಲು ಸಾಧ್ಯವಾಗಲಿಲ್ಲ. ಯುವಕ ಎಲ್ಲಿದ್ದಾನೆ ಎನ್ನುವುದನ್ನು ನಿರ್ದಿಷ್ಟವಾಗಿ ಪತ್ತೆಹಚ್ಚಲಾಗಿದ್ದು ಹೆಲಿಕಾಪ್ಟರ್​ನಿಂದ ಹಗ್ಗ ಬಿಟ್ಟು ಮೇಲೆ ಎತ್ತಲು ಅಧಿಕಾರಿಗಳು ಚಿಂತನೆ ನಡೆಸಿದರು.

ಕೊನಗೆ ಹಗ್ಗದ ಸಹಾಯದಿಂದ ನಿಶಾಂತ್ ಗುಲ್ಲಾ ಸಿಬ್ಬಂದಿ ಮೇಲಕ್ಕೆ ಎತ್ತಿದರು. ರಕ್ಷಣಾ ಕಾರ್ಯಾಚರಣೆಗಾಗಿ ಬೆಂಗಳೂರಿನ ಯಲಹಂಕದಿಂದ ವಾಯುಪಡೆಯ ಹೆಲಿಕಾಪ್ಟರ್ ಬಂದಿತ್ತು. ನಿಶಾಂತ್​ನನ್ನು ನೇರವಾಗಿ ಯಲಹಂಕ ವಾಯುನೆಲೆಗೆ ಸ್ಥಳಾಂತರಿಸಿ, ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ಯಲು ಌಂಬುಲೆನ್ಸ್​ ಸಿದ್ಧವಾಗಿದೆ.

ಟ್ರಕಿಂಗ್​ಗೆ ಕಡಿವಾಣ: ಎಸ್​ಪಿ

ಟ್ರಕಿಂಗ್ ಮಾಡಲೆಂದು ನಂದಿಬೆಟ್ಟಕ್ಕೆ ಜನರು ಬರುತ್ತಿರುತ್ತಾರೆ. ಅಂಥವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುತ್ತೇವೆ. ದುರ್ಗಮ ಪ್ರದೇಶಕ್ಕೆ ಬಿದ್ದಿದ್ದ ನಿಶಾಂತ್​ನನ್ನು ರಕ್ಷಣೆ ಮಾಡಿದ್ದೇವೆ. ದೆಹಲಿ ಮೂಲದ ನಿಶಾಂತ್ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ನಾನು ಒಬ್ಬನೇ ಟ್ರಕ್ಕಿಂಗ್​ಗೆ ಬಂದಿದ್ದೆ ಎಂದು ಮಾಹಿತಿ ನೀಡಿದ್ದಾನೆ. ಸುಮಾರು 200 ಅಡಿ ಕೆಳಗೆ ಬಿದ್ದಿದ್ದ ನಿಶಾಂತ್​ನನ್ನು ರಕ್ಷಿಸಿದ್ದೇವೆ ಎಂದು ಚಿಕ್ಕಬಳ್ಳಾಪುರದ ಎಸ್​ಪಿ ಜಿ.ಕೆ.ಮಿಥುನ್ ಕುಮಾರ್​ ಹೇಳಿದರು.

ಇದನ್ನೂ ಓದಿ: ನಂದಿಬೆಟ್ಟದ ಮೇಲಿನ ವಾತಾವರಣ, ಮಂಜು ಮತ್ತು ಕುಳಿರ್ಗಾಳಿ ನಿಮ್ಮನ್ನು ಮತ್ತೊಂದು ಲೋಕಕ್ಕೆ ಕರೆದೊಯ್ಯುವುದು ನಿಸ್ಸಂಶಯ!

ಇದನ್ನೂ ಓದಿ: ಪ್ರೇಮಿಗಳ ದಿನದಂದು ನಂದಿಗಿರಿಧಾಮದ ಕುಳಿರ್ಗಾಳಿಯಲ್ಲಿ ಪ್ರೇಮಿಗಳ ಪ್ರೇಮ ನಿವೇದನೆ, ಪಿಸುಮಾತು ಮತ್ತು ಬಿಸಿಯಪ್ಪುಗೆ!

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು