AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ರಾಜಕೀಯ ಮೇಲಾಟದಲ್ಲಿ ನೆನೆಗುದಿಗೆ ಬಿದ್ದ ಅಂತರಾಷ್ಟ್ರೀಯ ಹೂವು ಮಾರುಕಟ್ಟೆ; ಇಲ್ಲಿದೆ ಮಾಹಿತಿ

ಆ ಜಿಲ್ಲೆಯೊಂದರಲ್ಲೇ 12,500 ಎಕರೆ ಪ್ರದೇಶದಲ್ಲಿ ತರಹೆವಾರಿ ಹೂವುಗಳನ್ನು ಬೆಳೆಯುತ್ತಾರೆ. ಅಲ್ಲಿ ಬೆಳೆದ ಹೂವುಗಳು ದೇಶ, ವಿದೇಶಗಳಲ್ಲಿ ಖ್ಯಾತಿ ಪಡೆದಿದೆ. ಅಲ್ಲಿಗೆ ದೇಶದ ವಿವಿಧ ಭಾಗಗಳಿಂದ ದೊಡ್ಡ ದೊಡ್ಡ ಹೂವಿನ ವರ್ತಕರು ಬರುತ್ತಾರೆ. ಇದರಿಂದ ಕಳೆದ ಬಿಜೆಪಿ ಸರ್ಕಾರ 100 ಕೋಟಿ ರೂಪಾಯಿ ವೆಚ್ಚದಲ್ಲಿ ಅಂತರಾಷ್ಟ್ರೀಯ ಹೂವು ಮಾರುಕಟ್ಟೆ ನಿರ್ಮಾಣಕ್ಕೆ ಮುಂದಾಗಿತ್ತು. ಆದರೆ, ಈಗ ಹಾಲಿ-ಮಾಜಿ ಸಚಿವರುಗಳ ರಾಜಕೀಯ ಮೇಲಾಟದಲ್ಲಿ ಅಂತರಾಷ್ಟ್ರೀಯ ಹೂವು ಮಾರುಕಟ್ಟೆಯ ಕನಸ್ಸು ನೆನೆಗುದಿಗೆ ಬಿದ್ದಿದೆ.

ಚಿಕ್ಕಬಳ್ಳಾಪುರ: ರಾಜಕೀಯ ಮೇಲಾಟದಲ್ಲಿ ನೆನೆಗುದಿಗೆ ಬಿದ್ದ ಅಂತರಾಷ್ಟ್ರೀಯ ಹೂವು ಮಾರುಕಟ್ಟೆ; ಇಲ್ಲಿದೆ ಮಾಹಿತಿ
ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Sep 10, 2023 | 2:20 PM

Share

ಚಿಕ್ಕಬಳ್ಳಾಪುರ, ಸೆ.10: ನಗರದಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಹೂವು (Flowers) ಮಾರಾಟಕ್ಕೆ ಜಾಗ ಸಾಕಾಗುತ್ತಿಲ್ಲ ಎನ್ನುವ ಕಾರಣಕ್ಕೆ ಚಿಕ್ಕಬಳ್ಳಾಪುರ (Chikkaballapur) ನಗರದ ಹೊರವಲಯದಲ್ಲಿ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ 12,500 ಎಕರೆ ಪ್ರದೇಶದಲ್ಲಿ ವಿವಿಧ ಬಗೆಯ ಸೇವಂತಿ, ಗುಲಾಬಿ ಸೇರಿದಂತೆ ಆಕರ್ಷಕ ಕಲರ್‌ಪುಲ್ ಹೂವುಗಳನ್ನು ಬೆಳೆಯಲಾಗುತ್ತದೆ. ಪ್ರತಿದಿನ ಸಾವಿರಾರು ಜನ ರೈತರು ಮಾರುಕಟ್ಟೆಗೆ ಬರುತ್ತಾರೆ. ಇದರಿಂದ ಕಳೆದ ಬಿಜೆಪಿ ಸರ್ಕಾರ 100 ಕೋಟಿ ರೂಪಾಯಿ ವೆಚ್ಚದಲ್ಲಿ ಅಂತರಾಷ್ಟ್ರೀಯ ಹೂವು ಮಾರುಕಟ್ಟೆ ನಿರ್ಮಾಣಕ್ಕೆ ಮುಂದಾಗಿತ್ತು. ಆದರೆ, ಈಗ ರಾಜಕೀಯ ಮೇಲಾಟದಲ್ಲಿ ಹೂವು ವರ್ತಕರುಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ವರ್ತಕರ ಸಂಘದಲ್ಲೇ ಎರಡು ಬಣ

ಇನ್ನು ಹೂವು ವರ್ತಕರ ಸಂಘದಲ್ಲೇ ಎರಡು ಪಕ್ಷ, ಎರಡು ಬಣಗಳಾಗಿವೆ. ತಾತ್ಕಾಲಿಕ ಮಾರುಕಟ್ಟೆಯಲ್ಲೇ ವ್ಯಾಪಾರ ವಹಿವಾಟು ನಡೆಯಲಿ ಎಂದು ಒಂದು ಬಣವಾದರೆ, ಎಪಿಎಂಸಿ ಪ್ರಾಂಗಣದಲ್ಲಿ ನಡೆಯಲಿ ಎಂದು ಮತ್ತೊಂದು ಬಣದವರು ಹೇಳುತ್ತಿದ್ದಾರೆ. ಈ ಮದ್ಯೆ ನಿಗಧಿತ ನೂತನ ಮಾರುಕಟ್ಟೆಯ ಸ್ಥಳ ಬದಲು ಮಾಡಿ ಎಂದು ಇನ್ನೊಂದು ಬಣದವರ ಕೂಗಾಗಿದೆ. ಇದರಿಂದ ಹೂವು ಮಾರುಕಟ್ಟೆಗೆ ನೂರೆಂಟು ವಿಘ್ನ ಆರಂಭವಾಗಿದೆ ಎಂದು ಹೂವು ವರ್ತಕರ ಸಂಘದ ಅಧ್ಯಕ್ಷ ರವೀಂದ್ರ ಹೇಳಿದ್ದಾರೆ.

ಇದನ್ನೂ ಓದಿ:ತಿರುಪತಿ ತಿಮ್ಮಪ್ಪನಿಗೆ 108 ಚಿನ್ನದ ಕಮಲದ ಹೂವುಗಳನ್ನು ದಾನ ಮಾಡಿದ ಭಕ್ತ! ಅವುಗಳ ಬೆಲೆ ಎಷ್ಟು ಗೊತ್ತಾ?

ಈಗಾಗಲೇ ಚಿಕ್ಕಬಳ್ಳಾಪುರ ತಾಲ್ಲೂಕಿನ ಅಗಲಗುರ್ಕಿ ಗ್ರಾಮದ ಬಳಿ ನೂತನ ಹೂವು ಮಾರುಕಟ್ಟೆ ಆರಂಭಿಸಲು 10 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಅಲ್ಲಿ ಕಲ್ಲುಬಂಡೆಗಳಿವೆ ಎನ್ನುವ ನೆಪವೊಡ್ಡಿ ಮತ್ತೊಂದು ಜಾಗಕ್ಕೆ ಹುಡುಕಾಟ ಆರಂಭವಾಗಿದೆ. ರಾಜಕೀಯ ಮೇಲಾಟ ಒಣ ಪ್ರತಿಷ್ಠೆಗೋಸ್ಕರ ಅಂತರಾಷ್ಟ್ರೀಯ ಹೂವು ಮಾರುಕಟ್ಟೆ ಬಲಿಯಾಗುತ್ತಾ ಕಾದುನೋಡಬೇಕು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?