AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಕ್ಕಲಮಡಗು ಜಲಾಶಯದ ಕಟ್ಟೆಯಲ್ಲಿ ಬಿರುಕು, ಆತಂಕದಲ್ಲಿ ಜನ!

ಅಲ್ಲೊಂದು ಕುಡಿಯುವ ನೀರಿನ ಜಲಾಶಯವಿದೆ. ಆ ಜಲಾಶಯವನ್ನು ನಂಬಿಕೊಂಡು ಎರಡು ಅವಳಿ ನಗರಗಳ ಜನ ನೆಮ್ಮದಿಯಾಗಿ ನೀರು ಕುಡಿಯುತ್ತಿದ್ದಾರೆ. ಆದ್ರೆ, ಈಗ ಅದೇ ಜಲಾಶಯದ ಕಟ್ಟೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಅಲ್ಲಿಯ ಜನರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನಲೆ ಇಂದು(ಜೂ.12) ವಿಜ್ಞಾನಿಗಳ ತಂಡ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಷ್ಟಕ್ಕೂ ಅದ್ಯಾವ ಜಲಾಶಯ? ಅಲ್ಲಿ ಆಗಿರುವುದಾದ್ರು ಏನ್ ಅಂತೀರಾ? ಈ ಸ್ಟೋರಿ ಓದಿ.

ಜಕ್ಕಲಮಡಗು ಜಲಾಶಯದ ಕಟ್ಟೆಯಲ್ಲಿ ಬಿರುಕು, ಆತಂಕದಲ್ಲಿ ಜನ!
ಜಕ್ಕಲಮಡಗು ಜಲಾಶಯದ ಕಟ್ಟೆಯಲ್ಲಿ ಬಿರುಕು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 12, 2024 | 3:23 PM

Share

ಚಿಕ್ಕಬಳ್ಳಾಪುರ, ಜೂ.12: ಜಕ್ಕಲಮಡಗು ಜಲಾಶಯ(Jakkalamadagu Dam), ಚಿಕ್ಕಬಳ್ಳಾಪುರ(Chikkaballapur) ತಾಲೂಕಿನ ಜಕ್ಕಲಮಡಗು ಗ್ರಾಮದ ಬಳಿ ಈ ಜಲಾಶಯವಿದೆ. ಇದೇ ಜಲಾಶಯದ ನೀರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಫುರ ನಗರ ಹಾಗೂ ಚಿಕ್ಕಬಳ್ಳಾಪುರ ನಗರದ ಜನ ಕುಡಿಯುತ್ತಿದ್ದಾರೆ. ಅವಳಿ ಜಿಲ್ಲೆಗಳ ಜನರಿಗೆ ಜಕ್ಕಲಮಡಗು ವರದಾನವಾಗಿದ್ದು, ಪ್ರಸ್ತುತ ಜಲಾಶಯದಲ್ಲಿ 16 ಮೀಟರ್ ಎತ್ತರದಷ್ಟು ನೀರಿದೆ. ಆದ್ರೆ, ಇದೆ ಜಲಾಶಯದ ಕಟ್ಟೆಯ ಮೇಲ್ಮೈ 50 ಮೀಟರ್​​ನಷ್ಟು ದೂರ ಬಿರುಕು ಕಾಣಿಸಿಕೊಂಡಿದ್ದು, ನಗರಸಭೆ ಅಧಿಕಾರಿಗಳು, ನಗರ ನೀರು ಸರಬರಾಜು ಅಧಿಕಾರಿಗಳು ಹಾಗೂ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಇನ್ನು ಜಕ್ಕಲಮಡಗು ಜಲಾಶಯದ ಕಟ್ಟೆಯ ಮೇಲ್ಮೈ 50 ಮೀಟರ್​ನಷ್ಟು ದೂರ ಬಿರುಕು ಕಾಣಿಸಿಕೊಂಡಿರುವ ಕಾರಣ ಇಂದು(ಜೂ.12) ನಗರ ನೀರು ಸರಬರಾಜು ಇಲಾಖೆಯ ಹಿರಿಯ ಇಂಜಿನಿಯರ್​ಗಳು , ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ವಿಭಾಗದ ಜಿಯೋ ಪಿಜಿಕ್ಸ್ ವಿಭಾಗದ ವಿಜ್ಞಾನಿಗಳು ಸೇರಿದಂತೆ ನಗರಸಭೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ಕರಗ ಹೊತ್ತ ಮಹಿಳೆ; ಪಂಚ ರಾಜ್ಯಗಳ ಜನಪದ ಕಲೆಗಳ ಸಮಾಗಮ!

ಬಳಿಕ ಮಾತನಾಡಿದ ವಿಜ್ಞಾನಿಗಳು, ‘ಜಕ್ಕಲಮಡಗು ಜಲಾಶಯದ ಸುತ್ತಮುತ್ತ 5 ಕಿ.ಮೀಟರ್ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಅದಕ್ಕೂ ಇದಕ್ಕೂ ಸಂಬಂಧ ಇಲ್ಲ. ಮಣ್ಣಿನ ಗುಣಮಟ್ಟ ಕಡಿಮೆ ಇದ್ದು, ಮಳೆಯ ನೀರು ಕಟ್ಟೆಯ ಮೇಲ್ಮೈ ಬಿದ್ದಾಗ ನೀರು ಕಟ್ಟೆಯಲ್ಲಿ ಇಂಗಿ ಬಿರುಕು ಉಂಟಾಗಿದೆ. ಸರಿಪಡಿಸಬಹುದು ಎಂದು ತಿಳಿಸಿದರು. ದೊಡ್ಡಬಳ್ಳಾಫುರ ಹಾಗೂ ಚಿಕ್ಕಬಳ್ಳಾಪುರ ಅವಳಿ ನಗರಗಳ ಜನರ ಕುಡಿಯುವ ನೀರಿ ಮೂಲವಾಗಿರುವ ಜಕ್ಕಲಮಡಗು ಜಲಾಶಯವನ್ನು ರಕ್ಷಣೆ ಮಾಡುವ ಜವಾಬ್ದಾರಿ ಎರಡು ನಗರಸಭೆ ಹಾಗೂ ಎರಡು ಜಿಲ್ಲಾಡಳಿತಗಳು ಹೊಣೆಯಾಗಿದ್ದು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳಿಯರು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ