AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಕ್ಕಲಮಡಗು ಜಲಾಶಯದ ಕಟ್ಟೆಯಲ್ಲಿ ಬಿರುಕು, ಆತಂಕದಲ್ಲಿ ಜನ!

ಅಲ್ಲೊಂದು ಕುಡಿಯುವ ನೀರಿನ ಜಲಾಶಯವಿದೆ. ಆ ಜಲಾಶಯವನ್ನು ನಂಬಿಕೊಂಡು ಎರಡು ಅವಳಿ ನಗರಗಳ ಜನ ನೆಮ್ಮದಿಯಾಗಿ ನೀರು ಕುಡಿಯುತ್ತಿದ್ದಾರೆ. ಆದ್ರೆ, ಈಗ ಅದೇ ಜಲಾಶಯದ ಕಟ್ಟೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಅಲ್ಲಿಯ ಜನರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನಲೆ ಇಂದು(ಜೂ.12) ವಿಜ್ಞಾನಿಗಳ ತಂಡ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಷ್ಟಕ್ಕೂ ಅದ್ಯಾವ ಜಲಾಶಯ? ಅಲ್ಲಿ ಆಗಿರುವುದಾದ್ರು ಏನ್ ಅಂತೀರಾ? ಈ ಸ್ಟೋರಿ ಓದಿ.

ಜಕ್ಕಲಮಡಗು ಜಲಾಶಯದ ಕಟ್ಟೆಯಲ್ಲಿ ಬಿರುಕು, ಆತಂಕದಲ್ಲಿ ಜನ!
ಜಕ್ಕಲಮಡಗು ಜಲಾಶಯದ ಕಟ್ಟೆಯಲ್ಲಿ ಬಿರುಕು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jun 12, 2024 | 3:23 PM

Share

ಚಿಕ್ಕಬಳ್ಳಾಪುರ, ಜೂ.12: ಜಕ್ಕಲಮಡಗು ಜಲಾಶಯ(Jakkalamadagu Dam), ಚಿಕ್ಕಬಳ್ಳಾಪುರ(Chikkaballapur) ತಾಲೂಕಿನ ಜಕ್ಕಲಮಡಗು ಗ್ರಾಮದ ಬಳಿ ಈ ಜಲಾಶಯವಿದೆ. ಇದೇ ಜಲಾಶಯದ ನೀರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಫುರ ನಗರ ಹಾಗೂ ಚಿಕ್ಕಬಳ್ಳಾಪುರ ನಗರದ ಜನ ಕುಡಿಯುತ್ತಿದ್ದಾರೆ. ಅವಳಿ ಜಿಲ್ಲೆಗಳ ಜನರಿಗೆ ಜಕ್ಕಲಮಡಗು ವರದಾನವಾಗಿದ್ದು, ಪ್ರಸ್ತುತ ಜಲಾಶಯದಲ್ಲಿ 16 ಮೀಟರ್ ಎತ್ತರದಷ್ಟು ನೀರಿದೆ. ಆದ್ರೆ, ಇದೆ ಜಲಾಶಯದ ಕಟ್ಟೆಯ ಮೇಲ್ಮೈ 50 ಮೀಟರ್​​ನಷ್ಟು ದೂರ ಬಿರುಕು ಕಾಣಿಸಿಕೊಂಡಿದ್ದು, ನಗರಸಭೆ ಅಧಿಕಾರಿಗಳು, ನಗರ ನೀರು ಸರಬರಾಜು ಅಧಿಕಾರಿಗಳು ಹಾಗೂ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಇನ್ನು ಜಕ್ಕಲಮಡಗು ಜಲಾಶಯದ ಕಟ್ಟೆಯ ಮೇಲ್ಮೈ 50 ಮೀಟರ್​ನಷ್ಟು ದೂರ ಬಿರುಕು ಕಾಣಿಸಿಕೊಂಡಿರುವ ಕಾರಣ ಇಂದು(ಜೂ.12) ನಗರ ನೀರು ಸರಬರಾಜು ಇಲಾಖೆಯ ಹಿರಿಯ ಇಂಜಿನಿಯರ್​ಗಳು , ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ವಿಭಾಗದ ಜಿಯೋ ಪಿಜಿಕ್ಸ್ ವಿಭಾಗದ ವಿಜ್ಞಾನಿಗಳು ಸೇರಿದಂತೆ ನಗರಸಭೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ಕರಗ ಹೊತ್ತ ಮಹಿಳೆ; ಪಂಚ ರಾಜ್ಯಗಳ ಜನಪದ ಕಲೆಗಳ ಸಮಾಗಮ!

ಬಳಿಕ ಮಾತನಾಡಿದ ವಿಜ್ಞಾನಿಗಳು, ‘ಜಕ್ಕಲಮಡಗು ಜಲಾಶಯದ ಸುತ್ತಮುತ್ತ 5 ಕಿ.ಮೀಟರ್ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಅದಕ್ಕೂ ಇದಕ್ಕೂ ಸಂಬಂಧ ಇಲ್ಲ. ಮಣ್ಣಿನ ಗುಣಮಟ್ಟ ಕಡಿಮೆ ಇದ್ದು, ಮಳೆಯ ನೀರು ಕಟ್ಟೆಯ ಮೇಲ್ಮೈ ಬಿದ್ದಾಗ ನೀರು ಕಟ್ಟೆಯಲ್ಲಿ ಇಂಗಿ ಬಿರುಕು ಉಂಟಾಗಿದೆ. ಸರಿಪಡಿಸಬಹುದು ಎಂದು ತಿಳಿಸಿದರು. ದೊಡ್ಡಬಳ್ಳಾಫುರ ಹಾಗೂ ಚಿಕ್ಕಬಳ್ಳಾಪುರ ಅವಳಿ ನಗರಗಳ ಜನರ ಕುಡಿಯುವ ನೀರಿ ಮೂಲವಾಗಿರುವ ಜಕ್ಕಲಮಡಗು ಜಲಾಶಯವನ್ನು ರಕ್ಷಣೆ ಮಾಡುವ ಜವಾಬ್ದಾರಿ ಎರಡು ನಗರಸಭೆ ಹಾಗೂ ಎರಡು ಜಿಲ್ಲಾಡಳಿತಗಳು ಹೊಣೆಯಾಗಿದ್ದು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳಿಯರು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ