AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಹಾಡಹಗಲೆ ಜ್ಯೂವೆಲರಿ ಅಂಗಡಿಗೆ ನುಗ್ಗಿದ ಕಳ್ಳನೊಬ್ಬ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ್ದು ಹೇಗೆ?

Chikkaballapur: ಬೆಳಿಗ್ಗೆಯಿಂದ ವ್ಯಾಪಾರ ಮಾಡಿದ್ದ ಅಂಗಡಿಯ ಮಾಲಿಕರೊಬ್ಬರು ಊಟಕ್ಕೆ ಅಂತಾ ಮನೆಗೆ ಹೋಗಿ ವಾಪಸ್ ಬರುವುದರೊಳಗೆ, ಹಾಡಹಗಲೆ ಚಿನ್ನಾಭರಣಗಳ ಕಳ್ಳತನ ಮಾಡಿರುವುದರ ಹಿಂದೆ ಅಂಗಡಿಯ ಕಾರ್ಮಿಕರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಹಾಡಹಗಲೆ ಜ್ಯೂವೆಲರಿ ಅಂಗಡಿಗೆ ನುಗ್ಗಿದ ಕಳ್ಳನೊಬ್ಬ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ್ದು ಹೇಗೆ?
ಹಾಡಹಗಲೆ ಜ್ಯೂವೆಲರಿ ಅಂಗಡಿಗೆ ನುಗ್ಗಿದ ಕಳ್ಳ ಚಿನ್ನಾಭರಣ ದೋಚಿದ
TV9 Web
| Edited By: |

Updated on: Feb 10, 2023 | 1:24 PM

Share

ಜನನಿಬಿಡ ಪ್ರದೇಶದಲ್ಲಿರುವ ಜ್ಯೂವೆಲರ್ಸ್ ಶಾಪ್ (Jewellery shop) ಗೆ ನುಗ್ಗಿದ ಒಬ್ಬನೇ ಕಳ್ಳ ಏಕಾಂಗಿಯಾಗಿ ಹಾಡಹಗಲೆ ಅಂಗಡಿಯಲ್ಲಿದ್ದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಎಸ್ಕೇಪ್ ಆಗಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ (Burglary). ಅಷ್ಟಕ್ಕೂ ಅದೆಲ್ಲಿ ಅಂತೀರಾ, ಈ ವರದಿ ನೋಡಿ! ಬಾಗಿಲು ಮುಚ್ಚಿದ್ದ ಜ್ಯೂವೆಲರ್ಸ್ ಶಾಪ್ ನ ಶೆಟರ್ ಎತ್ತಿ ಒಳಬಂದ ಅಸಾಮಿಯೊಬ್ಬ… ಹಾಡಹಗಲೆ ಜ್ಯೂವೆಲರಿ ಅಂಗಡಿಯ ಡ್ರಾಯರ್ ಗೆ ಕೈ ಹಾಕಿ ಅದರಲ್ಲಿದ್ದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು (Gold Ornaments) ಕದ್ದು ಪರಾರಿಯಾಗಿರುವುದು ಚಿಕ್ಕಬಳ್ಳಾಪುರ ನಗರದ (Chikkaballapur) ಗಂಗಮ್ಮ ಗುಡಿ ರಸ್ತೆಯಲ್ಲಿರುವ ಗಣೇಶ್ ಜ್ಯೂವೆಲರ್ಸ್ ಅಂಬಗಡಿಯಲ್ಲಿ. ಹೌದು ಅಂಗಡಿಯ ಮಾಲಿಕ ಕೆ.ಆರ್. ಶ್ರೀಧರ್, ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಊಟಕ್ಕೆ ಹೋಗಲು ಅಂಗಡಿಯ ಬೀಗ ಹಾಕಿಸಿ, ಬೀಗ ತೆಗೆದುಕೊಂಡು ಮನೆಗೆ ಹೋಗಿದ್ದಾನೆ. ವಾಪಸ್ ಬಂದು ನೋಡುವಷ್ಟರಲ್ಲಿ ಮಾಯದ ಹಾಗೆ ಅಂಗಡಿಯಲ್ಲಿದ್ದ ಚಿನ್ನಾಭರಣಗಳು ಕಳ್ಳತನ ಆಗಿರುವುದು ಗೊತ್ತಾಗಿದೆ.

ಇನ್ನು ಅಂಗಡಿಯ ಸ್ಟಾಕ್ ಬಾಕ್ಸ್ ಗಳ ಡ್ರಾಯರ್ ನಲ್ಲಿದ್ದ 4 ಬಂಗಾರದ ಐಟಂ ಬಾಕ್ಸ್ ಕಳುವಾಗಿವೆ. ಅದರಲ್ಲಿ ಸುಮಾರು 9,79,700 ರೂಪಾಯಿ ಮೌಲ್ಯದ 202 ಗ್ರಾಂ ತೂಕದ ಬಂಗಾರದ ಫ್ಯಾನ್ಸಿ ವಾಲೆಗಳು, 5,33,500 ರೂಪಾಯಿ ಮೌಲ್ಯದ 110 ಗ್ರಾಂ ತೂಕದ ಬಂಗಾರದ ಉಂಗುರಗಳು, 2,81,300 ರೂಪಾಯಿ ಮೌಲ್ಯದ 58 ಗ್ರಾಂ ತೂಕದ ಮಕ್ಕಳ ಬಂಗಾರದ ಕೈ ಚೈನುಗಳು, 2,52,200 ರೂಪಾಯಿ ಮೌಲ್ಯದ 52 ಗ್ರಾಂ ತೂಕದ ಬಂಗಾರದ ಸಾದಾ ಓಲೆಗಳು, 2,52,200 ರೂಪಾಯಿ ಮೌಲ್ಯದ ಚಿನ್ನಾಭರಣಗಳು ಸೇರಿದಂತೆ 20,46,700 ಮೌಲ್ಯದ ಚಿನ್ನಾಭರಣಗಳ ಕಳ್ಳತನ ಮಾಡಲಾಗಿದೆ. ಇನ್ನು, ಕಳ್ಳ ಅಂಗಡಿಯ ಒಳ ನುಗ್ಗುವ ದೃಶ್ಯವನ್ನು ಅಂಗಡಿಯ ಗ್ರಾಹಕರೊಬ್ಬರು ನೋಡಿದ್ದಾರೆ.

ಬೆಳಿಗ್ಗೆಯಿಂದ ವ್ಯಾಪಾರ ಮಾಡಿದ್ದ ಅಂಗಡಿಯ ಮಾಲಿಕರೊಬ್ಬರು ಊಟಕ್ಕೆ ಅಂತಾ ಮನೆಗೆ ಹೋಗಿ ವಾಪಸ್ ಬರುವುದರೊಳಗೆ, ಹಾಡಹಗಲೆ ಚಿನ್ನಾಭರಣಗಳ ಕಳ್ಳತನ ಮಾಡಿರುವುದರ ಹಿಂದೆ ಅಂಗಡಿಯ ಕಾರ್ಮಿಕರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ವರದಿ: ಭೀಮಪ್ಪ ಪಾಟೀಲ, ಟಿವಿ9, ಚಿಕ್ಕಬಳ್ಳಾಪುರ

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್