Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂತಾಮಣಿ: ಮಹಾಮಳೆಯಿಂದ ಕೋಡಿ ಹೋದ ಕನ್ನಂಪಲ್ಲಿ ಕೆರೆ ಡಬಲ್ ಖುಷಿಯನ್ನೂ ತಂದಿತು! ಏನದು?

Kannampalli kere: ಚಿಂತಾಮಣಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಇರುತ್ತದೆ. 2000 ಅಡಿ ಆಳ ಕೊರೆದ್ರೂ... ಅಂತರ್ಜಲ ಸಿಗಲ್ಲ. ಅಂಥದರಲ್ಲಿ ಇತ್ತೀಚೆಗೆ ಸುರಿದ ಮಳೆ ಕನ್ನಂಪಲ್ಲಿ ಕೆರೆ ತುಂಬುವಂತೆ ಮಾಡಿದ್ದು, ಜನರಲ್ಲಿ ಒಂದೆಡೆ ಹರ್ಷ ಮತ್ತೊಂದೆಡೆ ಹಿಂದೂ ಮುಸ್ಲಿಂ ಭಾವೈಕ್ಯೆತೆಗೆ ಸಾಕ್ಷಿಯಾಗಿದ್ದು ಸಂತೋಷದ ವಿಷಯವೇ ಸರಿ.

ಚಿಂತಾಮಣಿ: ಮಹಾಮಳೆಯಿಂದ ಕೋಡಿ ಹೋದ ಕನ್ನಂಪಲ್ಲಿ ಕೆರೆ ಡಬಲ್ ಖುಷಿಯನ್ನೂ ತಂದಿತು! ಏನದು?
ಜನರ ಜೀವನಾಡಿ ಕೆರೆಗೆ ಬಾಗಿನ ಅರ್ಪಣೆ - ಹಿಂದು ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಚಿಂತಾಮಣಿಯ ಕನ್ನಂಪಲ್ಲಿ ಕೆರೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 08, 2022 | 5:22 PM

ಅ ಒಂದು ಕೆರೆ ಸುಮಾರು ಒಂದು ಲಕ್ಷ ಜನರ ದಣಿವಾರಿಸುವ ಜೀವನಾಡಿ. ಕೆರೆಯ ಒಡಲು ತುಂಬಿದಾಗಲಷ್ಟೇ ನಗರದ ಜನತೆಯ ದಾಹ ನೀಗುವುದು. ಇತ್ತೀಚಿಗೆ ಸುರಿದ ಭಾರಿ ಮಳೆಗೆ ಆ ಕೆರೆ ತುಂಬಿ ಕೋಡಿ ಹೋಗಿದೆ. ಇದ್ರಿಂದ ಆ ಕೆರೆಗೆ ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿ ಎಂಬಂತೆ ಶ್ರದ್ದಾಭಕ್ತಿಯಿಂದ ಎರಡೂ ಸಮುದಾಯದ ಪುರೋಹಿತರು ಬಾಗಿನ ಅರ್ಪಿಸಿದ್ದಾರೆ. ಅಷ್ಟಕ್ಕೂ ಅದು ಎಲ್ಲಿ ಅಂದ್ರಾ ಈ ಸ್ಟೋರಿ ನೋಡಿ…

ಮಳೆ ನೀರಿಗೆ ಕೆರೆ ಒಡಲು ತುಂಬಿಕೊಂಡು ನಳನಳಿಸುತ್ತಿದೆ. ಶ್ರದ್ದಾ ಭಕ್ತಿಯಿಂದ ಗಂಗಾ ಮಾತೆಗೆ ಬಾಗಿನ ಅರ್ಪಿಸುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ (chintamani) ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಾರೆಡ್ಡಿ, ಬಾಗಿನ (bagina) ಕಾರ್ಯಕ್ರಮ ವೀಕ್ಷಿಸುತ್ತಿರುವ ನೂರಾರು ಕಾರ್ಯಾಕರ್ತರು. ಈ ದೃಶ್ಯಗಳು ಕಂಡುಬಂದಿದ್ದು ಚಿಂತಾಮಣಿ ನಗರದ ಕನ್ನಂಪಲ್ಲಿ ಕೆರೆಯಲ್ಲಿ (Kannampalli kere).

ಕೆಲ ದಿನಗಳ ಹಿಂದೆಯಷ್ಟೇ ಬತ್ತಿ ಬೆಂಗಾಡಾಗಿತ್ತು ಈ ವಿಶಾಲ ಕೆರೆ. ಇದರಿಂದ ನಗರದ ಜನತೆ ಟ್ಯಾಂಕರ್ ನೀರು ಕುಡಿದು ಅರ್ಧಂಬರ್ಧ ದಾಹ ನೀಗಿಸಿಕೊಳ್ಳುವ ಅನಿವಾರ್ಯತೆ ಎದುರಿಸುತಿದ್ರು. ಆದ್ರೆ ಇತ್ತೀಚೆಗೆ ಧೋ ಎಂದು ಸುರಿದ ಮಹಾಮಳೆಗೆ ಕೆರೆ ಕೋಡಿ ಹೋಗಿದೆ! ಇದ್ರಿಂದ ನಗರದ ಜನತೆಗೆ ಕೆಲವು ತಿಂಗಳ ನಂತರ ಕೆರೆ ನೀರು ಕುಡಿಯುವ ಯೋಗ ಬಂದಿದೆ. ಇದ್ರಿಂದ ಸಂತಸಗೊಂಡ ಸ್ಥಳೀಯ ಶಾಸಕ ಕೃಷ್ಣಾರೆಡ್ಡಿ ಕೆರೆಗೆ ಬಾಗಿನ ಅರ್ಪಿಸಿದ್ರು.

ಇನ್ನು ಚಿಂತಾಮಣಿ ತಾಲ್ಲೂಕಿನ ಕೈವಾರ ಪಕ್ಕದ ಕೊಳಾಲಮ್ಮ ದೇವಿಯ ಉತ್ಸವ ಮೂರ್ತಿಯನ್ನು ತಂದು, ಕನ್ನಂಪಲ್ಲಿ ಕೆರೆಯಲ್ಲಿ ಇರಿಸಿ, ಹೋಮ ಹವನಗಳನ್ನು ಮಾಡಿ, ಹಿಂದೂ ಪುರೋಹಿತರು ಹಿಂದೂ ಶಾಸ್ತ್ರದ ಪ್ರಕಾರ ಪೂಜೆ ಸಲ್ಲಿಸಿದ್ದರೆ… ಮುಸ್ಲಿಂ ಸಮುದಾಯದಿಂದ ಮುಸ್ಲಿಂ ಹಜರತ್ ಗಳು ಭಕ್ತಿಭಾವಗಳಿಂದ ಪ್ರಾರ್ಥನೆ ಮಾಡಿಸಿ, ಉತ್ಸವ ಮೂರ್ತಿಯನ್ನು ಕರೆಯಲ್ಲಿ ತೇಲಿಬಿಟ್ಟು ದೇವರಿಗೆ ಕೃತಜ್ಞತೆ ಅರ್ಪಿಸಿದರು.

ಒಟ್ನಲ್ಲಿ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಆಗಾಗ ಹನಿ ಹನಿ ಕುಡಿಯುವ ನೀರಿಗೆ ಹಾಹಾಕಾರ ಇರುತ್ತದೆ. ಎರಡು ಸಾವಿರ ಅಡಿ ಆಳ ಕೊರೆದ್ರೂ… ಅಂತರ್ಜಲ ಸಿಗಲ್ಲ. ಅಂಥದರಲ್ಲಿ ಇತ್ತೀಚೆಗೆ ಸುರಿದ ಮಳೆ ಕನ್ನಂಪಲ್ಲಿ ಕೆರೆ ತುಂಬುವಂತೆ ಮಾಡಿದ್ದು, ಜನರಲ್ಲಿ ಒಂದೆಡೆ ಹರ್ಷ ಮತ್ತೊಂದೆಡೆ ಹಿಂದೂ ಮುಸ್ಲಿಂ ಭಾವೈಕ್ಯೆತೆಗೆ ಸಾಕ್ಷಿಯಾಗಿದ್ದು ಸಂತೋಷದ ವಿಷಯವೇ ಸರಿ.

ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ