AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್​ ಮೇಲೆ ಮುನಿಸಿಕೊಂಡ ಮದ್ಯ ಪ್ರಿಯರು: ಹಾಟ್ ಡ್ರಿಂಕ್ಸ್​ಗೆ ಮೊರೆ

ಕರ್ನಾಟಕ ಸರ್ಕಾರ ಬಿಯರ್ ಬೆಲೆ ಏರಿಕೆಯಿಂದಾಗಿ ಬಿಯರ್ ಮಾರಾಟದಲ್ಲಿ ಗಣನೀಯ ಇಳಿಕೆಯಾಗಿದೆ. ಜನವರಿ 20, 2025ರಿಂದ ಜಾರಿಗೆ ಬಂದ ಹೊಸ ಅಬಕಾರಿ ನಿಯಮಗಳಿಂದ ಬಿಯರ್ ಬೆಲೆ ಶೇಕಡ 12 ರಿಂದ 20ರಷ್ಟು ಏರಿಕೆ ಮಾಡಲಾಗಿತ್ತು. ಇದರಿಂದಾಗಿ ಬಿಯರ್ ಪ್ರಿಯರು ಹೆಚ್ಚು ದುಬಾರಿಯಾದ ಬಿಯರ್ ಬದಲಿಗೆ ಹಾಟ್ ಡ್ರಿಂಕ್ಸ್‌ಗಳತ್ತ ಮುಖ ಮಾಡುತ್ತಿದ್ದಾರೆ.

ಬಿಯರ್​ ಮೇಲೆ ಮುನಿಸಿಕೊಂಡ ಮದ್ಯ ಪ್ರಿಯರು: ಹಾಟ್ ಡ್ರಿಂಕ್ಸ್​ಗೆ ಮೊರೆ
ಬಿಯರ್​ ಮೇಲೆ ಮುನಿಸಿಕೊಂಡ ಮದ್ಯ ಪ್ರಿಯರು: ಹಾಟ್ ಡ್ರಿಂಕ್ಸ್​ಗೆ ಮೊರೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Feb 10, 2025 | 8:07 PM

Share

ಚಿಕ್ಕಬಳ್ಳಾಪುರ, ಫೆಬ್ರವರಿ 10: ಕರ್ನಾಟಕ ಸರ್ಕಾರ ಬಿಯರ್ (Beer) ಬೆಲೆ ಹೆಚ್ಚಳ ಮಾಡಿದ ಹಿನ್ನಲೆ ದುಬಾರಿ ಹಣ ತೆತ್ತು ಬಿಯರ್ ಕುಡಿಯುವುದರ ಬದಲು, ಮದ್ಯ ಪ್ರಿಯರು ಹಾಟ್ ಡ್ರಿಂಕ್ಸ್ ಮೊರೆ ಹೋಗಿದ್ದಾರೆ. ಇದರಿಂದ ಬಿಯರ್ ಮಾರಾಟ ಹಾಗೂ ಬೇಡಿಕೆಯಲ್ಲಿ ಗಣನೀಯವಾಗಿ ಕುಂಠಿತವಾಗಿದ್ದು, ಹಾಟ್ ಡ್ರಿಂಕ್ಸ್ ಬೇಡಿಕೆ ಹೆಚ್ಚಳವಾಗಿದೆ.

ಜನವರಿ 20, 2025ರಂದು ರಾಜ್ಯ ಸರ್ಕಾರ ಕರ್ನಾಟಕ ಅಬಕಾರಿ ನಿಯಮಗಳಲ್ಲಿ ತಿದ್ದುಪಡಿ ತಂದು ಬಿಯರ್ ಬೆಲೆ ಹೆಚ್ಚಳ ಮಾಡಿದೆ. ಹೊಸ ಅಬಕಾರಿ ನಿಯಮಗಳ ಪ್ರಕಾರ ಲೀಟರ್ ಬಿಯರ್ ಮೇಲೆ ಶೇ 12 ರಿಂದ ಶೇ 20ರಷ್ಟು ಬೆಲೆ ಹೆಚ್ಚಳವಾಗಿದೆ. ಇದರ ಪರಿಣಾಮ ಬಿಯರ್ ಪ್ರಿಯರು ದುಬಾರಿ ಬಿಯರ್ ಕುಡಿಯುವುದರ ಬದಲು, ಹಾಟ್ ಡ್ರಿಂಕ್ಸ್ ಮೊರೆ ಹೋಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲಿ ಕಳೆದ ಒಂದು ತಿಂಗಳಲ್ಲಿ ಶೇಕಡ 30 ರಷ್ಟು ಬಿಯರ್ ಬೇಡಿಕೆ ಕುಂಠಿತವಾಗಿದೆ.

ಇದನ್ನೂ ಓದಿ: Beer Price Hike: ಬಿಯರ್ ಪ್ರಿಯರಿಗೆ ಕಹಿ ಸುದ್ದಿ: ಜ. 20ರಿಂದಲೇ ದರ ಏರಿಕೆ

ಇನ್ನೂ ಹೊಸ ಗ್ರಾಹಕರು, ಮೊದಲು ಬಿಯರ್ ಅಭ್ಯಾಸ ಮಾಡಿಕೊಂಡು ನಂತರ ಹಾಟ್ ಡ್ರಿಂಕ್ಸ್ ಸೇವನೆ ಸರ್ವೆ ಸಾಮಾನ್ಯವಾಗಿತ್ತು. ಆದರೆ ಬಿಯರ್ ಖರೀದಿಗೆ ಹೋದ ಅದೇಷ್ಟೊ ಗ್ರಾಹಕರು ಬಿಯರ್ ಬೆಲೆ ಕೇಳಿ ಶಾಕ್ ಆಗುತ್ತಿದ್ದು, ಹಾಟ್ ಡ್ರಿಂಕ್ಸ್ ಖರೀದಿ ಮಾಡ್ತಿರುವ ದೃಶ್ಯಗಳು ಕಂಡು ಬಂತು.

ಸ್ವತಃ ಸರ್ಕಾರಿ ಸ್ವಾಮ್ಯದ ಸಿ.ಎಲ್-11ಸಿ ಲೈಸೇನ್ಸ್ ದಾರ ಎಂ.ಎಸ್.ಐ.ಎಲ್ ಬಾರ್​ನಲ್ಲಿ ಒಂದು ಬಾಟಲ್ ಕೆ.ಪ್ ಬಿಯರ್ ಬೆಲೆ 185 ರೂಪಾಯಿ, ಹಾಗೆ ಟೂಬೊರ್ಗೊ 195 ರೂಪಾಯಿ, ಯು.ಬಿ 160 ರೂಪಾಯಿ, ಬುಲೇಟ್ 150 ರೂಪಾಯಿ, ಬಡ್ ವೈಜರ್245 ರೂಪಾಯಿ, ಕಾಲ್ಸ್ ಬರ್ಗ್ 250 ರೂಪಾಯಿ ಸೇರಿದಂತೆ ಯಾವುದೆ ಬಿಯರ್ ಕೇಳಿದರೂ 150 ರೂಪಾಯಿ ಮೇಲಿದೆ. ಇದಿರಂದ ಬಿಯರ್ ಪ್ರಿಯರು ಬಿಯರ್ ಬಾಟಲ್ ಸಹವಾಸ ಬಿಟ್ಟು ನೈಂಟಿ ಹಾಟ್ ಡ್ರಿಂಕ್ಸ್ ಮೊರೆ ಹೊಗುತ್ತಿದ್ದಾರೆ.

ಇದನ್ನೂ ಓದಿ: ಐದು ತಿಂಗಳುಗಳಿಂದ ಬಿಡುಗಡೆಯಾಗದ ಕ್ಷೀರಸಿರಿ ಯೋಜನೆ ಪ್ರೋತ್ಸಾಹಧನ: ಧರಣಿಗೆ ಮುಂದಾದ ರೈತರು

ಒಟ್ಟಿನಲ್ಲಿ ಬಿಯರ್ ಬೇಡಿಕೆ ಗಮನಿಸಿದ ರಾಜ್ಯ ಸರ್ಕಾರ, ಸ್ವತಃ ಅಬಕಾರಿ ನಿಯಮಗಳಿಗೆ ತಿದ್ದುಪಡಿ ತಂದು ಬಿಯರ್ ಬೆಲೆ ಹೆಚ್ಚಳ ಮಾಡಿದೆ. ಇದರಿಂದ ಬಿಯರ್ ಪ್ರಿಯರು, ಬಿಯರ್ ಮೇಲೆ ಮುನಿಸಿಕೊಳ್ಳುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?