AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಜಿಲ್ಲೆಗೆ ವರದಾನವಾದ ಸಚಿವ ಸಂಪುಟ ಸಭೆ: ಸಿಕ್ತು ಭರಪೂರ ಯೋಜನೆಗಳು

ಜುಲೈ 2ರಂದು ನಂದಿಗಿರಿಧಾಮದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಭರ್ಜರಿ ಕೊಡುಗೆ ನೀಡಲಾಗಿದೆ. 141 ಕೋಟಿ ರೂ. ವೆಚ್ಚದ ಅಂತಾರಾಷ್ಟ್ರೀಯ ಮಟ್ಟದ ಹೈ-ಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಅದೇ ರೀತಿ ಬೇರೆ ಬೇರೆ ಯೋಜನೆಗಳನ್ನು ನೀಡಲಾಗಿದೆ. ಇಲ್ಲಿದೆ ಮಾಹಿತಿ.

ಚಿಕ್ಕಬಳ್ಳಾಪುರ ಜಿಲ್ಲೆಗೆ ವರದಾನವಾದ ಸಚಿವ ಸಂಪುಟ ಸಭೆ: ಸಿಕ್ತು ಭರಪೂರ ಯೋಜನೆಗಳು
ಸಚಿವ ಸಂಪುಟ ಸಭೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 04, 2025 | 8:42 AM

Share

ಚಿಕ್ಕಬಳ್ಳಾಪುರ, ಜುಲೈ 04: ಪ್ರೇಮಿಗಳ ಪಾಲಿನ ಪ್ರೇಮಧಾಮ, ಪ್ರವಾಸಿ ತಾಣ ನಂದಿಗಿರಿಧಾಮದಲ್ಲಿ ಜುಲೈ 2ರಂದು ರಾಜ್ಯ ಸರ್ಕಾರದ 14ನೇ ಸಚಿವ ಸಂಪುಟ ಸಭೆ (cabinet meeting) ನಡೆದಿದೆ. ಇದೇ ಸಚಿವ ಸಂಪುಟ ಸಭೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಗೆ ವರದಾನವಾಗಿದ್ದು, 141 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೈ-ಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣ ಸೇರಿದಂತೆ ಇತರೆ ಭರಪೂರ ಯೋಜನೆಗಳು ದೊರೆತಿವೆ.

ಚಿಕ್ಕಬಳ್ಳಾಪುರಕ್ಕೆ ಸಿಕ್ಕಿದ್ದೇನು?

ಸಾಕಷ್ಟು ಗಮನ ಸೆಳೆದಿದ್ದ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ನಡೆದ ರಾಜ್ಯ ಸರ್ಕಾರದ 14ನೇ ವಿಶೇಷ ಸಚಿವ ಸಂಪುಟ ಸಭೆ ಜಿಲ್ಲೆಗೆ ವರದಾನವಾಗಿದೆ. ಫಲಪುಷ್ಪಗಿರಿಧಾಮಗಳ ನಗರಿ ಎಂಬ ಖ್ಯಾತಿಯ ಚಿಕ್ಕಬಳ್ಳಾಪುರದಲ್ಲಿ 141 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೈ-ಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಹೀಗಾಗಿ ಜಿಲ್ಲೆಯ ಹೂ ಬೆಳಗಾರರಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: ಕಾರ್ಮಿಕರಿಗೆ ಗುಡ್ ನ್ಯೂಸ್: ಪ್ರೇಮಿಗಳ ಹಾಟ್​ ಸ್ಪಾಟ್​ ನಂದಿ ಬೆಟ್ಟಕ್ಕೂ ಭರ್ಜರಿ ಕೊಡುಗೆ : ಸಂಪುಟ ಸಭೆಯ ಮುಖ್ಯಾಂಶಗಳು

ಇದನ್ನೂ ಓದಿ
Image
ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾದ ಪೊಲೀಸ್ ಆಫೀಸರ್
Image
ಐದು ವರ್ಷ ಸಿಎಂ ಎಂಬ ಸಿದ್ದು ಹೇಳಿಕೆಗೆ ಡಿಕೆ ಶಿವಕುಮಾರ್ ಮೊದಲ ಪ್ರತಿಕ್ರಿಯೆ
Image
ಬೇರೆ ಮಾರ್ಗವಿಲ್ಲ, ಸಿದ್ದರಾಮಯ್ಯರನ್ನು ಬೆಂಬಲಿಸುತ್ತೇನೆ: ಡಿಕೆ ಶಿವಕುಮಾರ್
Image
5 ವರ್ಷಗಳ ಕಾಲ ನಾನೇ ಸಿಎಂ: ಇರಲ್ಲ ಅನ್ನೋಕೆ ಅಶೋಕ್​ ಏನು ಹೈಕಮಾಂಡಾ? ಸಿಎಂ

ಈ ಮೊದಲು ಪಿ.ಪಿ. ಮಾದರಿಯಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ಘೋಷಣೆ ಮಾಡಲಾಗಿತ್ತು. ಆದರೆ ಜಿಲ್ಲೆಯ ಶಾಸಕರು ಖಾಸಗಿ ಸಹಬಾಗಿತ್ವ ಬದಲು ನೇರವಾಗಿ ಸರ್ಕಾರದಿಂದಲೇ ನಿರ್ಮಾಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಒತ್ತಾಯ ಮಾಡಿದರು. ಇದರಿಂದ ನಂದಿಗಿರಿಧಾಮದಲ್ಲಿ ನಡೆದ ಸಚಿವ ಸಂಪುಟದಲ್ಲಿ ಅಸ್ತು ಎನ್ನಲಾಗಿದೆ. ಈ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಸಂತಸ ವ್ಯಕ್ತಪಡಿಸಿದ್ದಾರೆ.

50 ಕೋಟಿ ರೂ ವಿಶೇಷ ಪ್ಯಾಕೆಜ್ 

ಇನ್ನೂ ನಂದಿಬೆಟ್ಟದಲ್ಲಿ ಅಭಿವೃದ್ದಿ ಕಾಮಗಾರಿಗಳಿಗಾಗಿ 50 ಕೋಟಿ ರೂ.ಗಳ ವಿಶೇಷ ಪ್ಯಾಕೆಜ್ ಘೋಷಣೆ ಮಾಡಲಾಗಿದೆ. ಇದಲ್ಲದೇ ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜಿಗೆ 11 ಕೋಟಿ ರೂ. ವೆಚ್ಚದಲ್ಲಿ ಎಂಆರ್​ಐ ಸ್ಕ್ಯಾನಿಂಗ್ ಯಂತ್ರ ಅಳವಡಿಕೆಗೆ ಅನುಮತಿ ನೀಡಲಾಗಿದ್ದು, ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಅಮರಾವತಿ ಬಳಿ ನಿರ್ಮಾಣವಾಗುತ್ತಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಎರಡನೇ ಹಂತದ ಕಾಮಗಾರಿಗೆ 123 ಕೋಟಿ ರೂ. ಮಂಜೂರು ಮಾಡಲಾಗಿದೆ.

ಚಿಂತಾಮಣಿ ತಾಲೂಕು ಹಾಗೂ ಶಿಡ್ಲಘಟ್ಟ ತಾಲೂಕಿನ 119 ಕೆರೆಗಳಿಗೆ 237 ಕೋಟಿ ರೂ. ವೆಚ್ಚದಲ್ಲಿ ಎಚ್ ಎನ್ ವ್ಯಾಲಿ ಸಂಸ್ಕರಿತ ತ್ಯಾಜ್ಯ ನೀರಿನ್ನು ಹರಿಸಲು ಅನುನೋದನೆ ನೀಡಲಾಗಿದೆ. ಚಿಂತಾಮಣಿ ನಗರದ ಜನತೆಗೆ ಕುಡಿಯುವ ನೀರು ಪೂರೈಸಲು ಉದ್ದೇಶಿಸಿರುವ ಭಕ್ತರಹಳ್ಳಿ ಅರಸೀಕೆರೆ ಕೆಳಭಾಗದಲ್ಲಿ ಹೊಸ ಕೆರೆ ನಿರ್ಮಾಣಕ್ಕೆ 36 ಕೋಟಿ ರೂ.ಗೆ ಅಸ್ತು ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿ ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು

ಇಷ್ಟೇ ಇಲ್ಲದೆ ಬಾಗೇಪಲ್ಲಿಯಲ್ಲಿ ಗಂಟ್ಲಮಲ್ಲಮ್ಮ ಡ್ಯಾಂ ನಿರ್ಮಾಣಕ್ಕೆ 189 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇದರಿಂದ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಎತ್ತಿನಹೊಳೆ ಯೋಜನೆ ಸಾಧಕ ಭಾದಕಗಳು ಹಾಗೂ ಎಚ್​ಎನ್ ವ್ಯಾಲಿ ನೀರಿನ ತೃತೀಯ ಹಂತದ ಶುದ್ದೀಕರಣ ಬೇಡ ಎಂದಿರುವುದು ಜಿಲ್ಲೆಯ ನೀರಾವರಿ ಹೋರಾಟಗಾರರ ಅಸಮಾಧಾನಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ