AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ತಿಂಗಳುಗಳಿಂದ ಬಿಡುಗಡೆಯಾಗದ ಕ್ಷೀರಸಿರಿ ಯೋಜನೆ ಪ್ರೋತ್ಸಾಹಧನ: ಧರಣಿಗೆ ಮುಂದಾದ ರೈತರು

ಕರ್ನಾಟಕ ಸರ್ಕಾರದ ಕ್ಷೀರಸಿರಿ ಯೋಜನೆಯಡಿ ಹಾಲು ಉತ್ಪಾದಕರಿಗೆ ನೀಡಬೇಕಾದ 600 ಕೋಟಿ ರೂ. ಪ್ರೋತ್ಸಾಹಧನ ಕಳೆದ ಐದು ತಿಂಗಳುಗಳಿಂದ ಬಾಕಿ ಉಳಿದಿದೆ. ಇದರಿಂದಾಗಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಬೆಂಗಳೂರಿನಲ್ಲಿ ಪ್ರತಿಭಟನೆಗೆ ಸಿದ್ಧಗೊಂಡಿದ್ದಾರೆ. ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡುವ ಯೋಜನೆಯು ಕಾರ್ಯಸಾಧ್ಯವಾಗದೆ ರೈತರಿಗೆ ಆರ್ಥಿಕ ನಷ್ಟವಾಗುತ್ತಿದೆ.

ಐದು ತಿಂಗಳುಗಳಿಂದ ಬಿಡುಗಡೆಯಾಗದ ಕ್ಷೀರಸಿರಿ ಯೋಜನೆ ಪ್ರೋತ್ಸಾಹಧನ: ಧರಣಿಗೆ ಮುಂದಾದ ರೈತರು
ಐದು ತಿಂಗಳುಗಳಿಂದ ಬಿಡುಗಡೆಯಾಗದ ಕ್ಷೀರಸಿರಿ ಯೋಜನೆ ಪ್ರೋತ್ಸಾಹಧನ: ಧರಣಿಗೆ ಮುಂದಾದ ರೈತರು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Feb 08, 2025 | 6:31 PM

Share

ಚಿಕ್ಕಬಳ್ಳಾಪುರ, ಫೆಬ್ರವರಿ 08: ಕರ್ನಾಟಕದಲ್ಲಿ ಹೈನೋದ್ಯಮಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ, ರಾಜ್ಯ ಸರ್ಕಾರ ಗುಣಮಟ್ಟದ ಲೀಟರ್ ಹಾಲಿಗೆ (milk) ತಲಾ 5 ರೂಪಾಯಿ ಪ್ರೋತ್ಸಾಹಧನ ನೀಡುತ್ತಿದೆ. ಆದರೆ ಕಳೆದ ಐದು ತಿಂಗಳುಗಳಿಂದ ರೈತರಿಗೆ ನೀಡಬೇಕಾದ ಕ್ಷೀರಸಿರಿ ಯೋಜನೆಯ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ. ಇದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳ ರೈತರು ಹೈನೋದ್ಯಮವನ್ನೇ ಜೀವಾಳ ಮಾಡಿಕೊಂಡಿದ್ದಾರೆ.  ಅಷ್ಟೋ ಇಷ್ಟೋ ಹನಿ ಹನಿ ನೀರನ್ನೆ ಬಳಸಿಕೊಂಡು ಇರುವ ಭೂಮಿಯಲ್ಲಿ ಹುಲ್ಲು ಬೆಳೆದು ಹಸುಗಳನ್ನು ಸಾಕುತ್ತಿದ್ದಾರೆ. ಆದರೆ ಒಂದು ಲೀಟರ್ ಹಾಲು ಉತ್ಪಾದಿಸಲು 30 ರೂ. ಖರ್ಚು ಬರುತ್ತೆ ಅನ್ನೊ ರೈತರ ವಾದಕ್ಕೆ, ರಾಜ್ಯ ಸರ್ಕಾರ ಕ್ಷೀರಸಿರಿ ಯೋಜನೆಯಡಿ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಹಣವನ್ನು ಪ್ರೋತ್ಸಾಹಧನವಾಗಿ ನೀಡುತ್ತಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹಾಲು ಉತ್ಪಾದನೆಯಲ್ಲಿ ಕುಂಠಿತ: ಹೈನೋದ್ಯಮದಿಂದ ವಿಮುಖರಾಗುತ್ತಿದ್ದಾರಾ ರೈತರು?

ಆದರೆ ಗ್ಯಾರಂಟಿ ಯೋಜನೆಗಳ ಪರಿಣಾಮ ಕಳೆದ ಐದು ತಿಂಗಳುಗಳಿಂದ ಕ್ಷೀರಸಿರಿ ಯೋಜನೆಯ 600 ಕೋಟಿ ರೂ. ಬಾಕಿ ಹಣವನ್ನು ಬಿಡುಗಡೆ ಮಾಡಿಲ್ಲ. ಇದರಿಂದ ರೈತರು ತಕ್ಷಣ ಕ್ಷೀರಸಿರಿ ಯೋಜನೆಯ 600 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದ್ಯಂತ ಇರುವ 16 ಹಾಲು ಒಕ್ಕೂಟಗಳ ಪರವಾಗಿ, ರಾಜ್ಯ ಸರ್ಕಾರ ಪ್ರತಿ ತಿಂಗಳು 120 ಕೋಟಿ ರೂ. ಪ್ರೋತ್ಸಾಹಧನ ನೀಡುತ್ತಿದೆ. ಕಳೆದ 5 ತಿಂಗಳುಗಳ ಬಾಕಿ ಹಣ 600 ಕೋಟಿ ರೂಪಾಯಿಗಳಲ್ಲಿ ಇದುವರೆಗೂ 147 ಕೋಟಿ ರೂಪಾಯಿ ಮಾತ್ರ ಬಂದಿದೆ. ಇನ್ನೂಳಿದ ಹಣ ಮಂಜೂರು ಮಾಡಿಲ್ಲ. ಹೀಗಾಹಿ ರೈತರು ಇದೆ ತಿಂಗಳು 10ರಂದು ಬೆಂಗಳೂರಿನ ಕೆ.ಎಂ.ಎಪ್ ಡೈರಿ ಮುಂದೆ ಧರಣಿ ಮಾಡಲು ಸನ್ನದ್ದರಾಗಿದ್ದಾರೆ.

ಇದನ್ನೂ ಓದಿ: ಗೋಡೌನ್​ನಲ್ಲಿ ಕೊಳೆಯುತ್ತಿದೆ ಕೋಮುಲ್​ನ ಹಾಲಿನ ಪೌಡರ್ ಮತ್ತು ಬೆಣ್ಣೆ

ಹಾಲಿಗೆ ಪ್ರೋತ್ಸಾಹಧನ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ, ಸಕಾಲಕ್ಕೆ ಕ್ಷೀರಸಿರಿ ಯೋಜನೆಯ ಧನಸಹಾಯ ಬಿಡುಗಡೆ ಮಾಡುತ್ತಿಲ್ಲ. ಹಾಗಾಗಿ ರೈತರು ಆಕ್ರೋಶವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಕ್ಷೀರಸಿರಿ ಯೋಜನೆಯ ಪ್ರೋತ್ಸಾಹಧನ ಬಿಡುಗಡೆ ಮಾಡುತ್ತಾ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?