AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಶಾ ಫೌಂಡೇಶನ್​ ವತಿಯಿಂದ ಚಿಕ್ಕಬಳ್ಳಾಪುರ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆಗೆ ತಡೆ ನೀಡಿದ ಹೈಕೋರ್ಟ್, ಉದ್ಘಾಟನೆಗೆ ಉಪರಾಷ್ಟ್ರಪತಿ ಬರುವುದು ಡೌಟ್

ಇದೇ ಜನವರಿ 15 ಯೋಗೇಶ್ವರ ಲಿಂಗ ಸ್ಥಾಪನೆಗೆ ಉದ್ದೇಶಿಸಲಾಗಿತ್ತು. ಇದೀಗ ಯಥಾಸ್ಥಿತಿ ಕಾಯ್ದುಕೊಳ್ಳಲು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ನ್ಯಾಯ ಪೀಠ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಉದ್ಘಾಟನೆಗೆ ಉಪರಾಷ್ಟ್ರಪತಿ ಬರುವುದು ಅನುಮಾನವಾಗಿದೆ.

ಇಶಾ ಫೌಂಡೇಶನ್​ ವತಿಯಿಂದ ಚಿಕ್ಕಬಳ್ಳಾಪುರ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆಗೆ ತಡೆ ನೀಡಿದ ಹೈಕೋರ್ಟ್, ಉದ್ಘಾಟನೆಗೆ ಉಪರಾಷ್ಟ್ರಪತಿ ಬರುವುದು ಡೌಟ್
ಚಿಕ್ಕಬಳ್ಳಾಪುರ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆಗೆ ತಡೆ ನೀಡಿದ ಹೈಕೋರ್ಟ್
TV9 Web
| Edited By: |

Updated on:Jan 11, 2023 | 1:20 PM

Share

ಚಿಕ್ಕಬಳ್ಳಾಪುರದಲ್ಲಿ ಇಶಾ ಫೌಂಡೇಶನ್​ ವತಿಯಿಂದ ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಇಶಾ ಯೋಗ ಕೇಂದ್ರಕ್ಕೆ ಹಿನ್ನಡೆಯುಂಟಾಗಿದೆ. ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಸರ್ಕಾರ ಮತ್ತು ಇಶಾ ಯೋಗ ಕೇಂದ್ರ ಸೇರಿ 16 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಆದಿಯೋಗಿ ಪ್ರತಿಮೆ ಸ್ಥಾಪನೆ ಸ್ಥಳವು ಪರಿಸರ ಸೂಕ್ಷ್ಮ ವಲಯವಾಗಿದ್ದು, ಅದನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಸರಿಯಲ್ಲ ಎಂದು ಅರ್ಜಿದಾರರ ಪರ ವಕೀಲ ಎಂ. ಶಿವಪ್ರಕಾಶ್ ಅವರು ವಾದ ಮಂಡಿಸಿದ್ದಾರೆ.

ಆದಿಯೋಗಿ ಪ್ರತಿಮೆ ಸ್ಥಾಪನೆಗಾಗಿ ಸರ್ಕಾರ ಕಾನೂನುಬಾಹಿರವಾಗಿ ಜಮೀನು ಮಂಜೂರು ಮಾಡಿದೆ. ನಂದಿ ಬೆಟ್ಟಕ್ಕೆ ಐತಿಹಾಸಿಕ ಮಹತ್ವವಿದೆ ಎಂದು ವಾದ ಮಂಡಿಸಲಾಗಿದೆ. ಪರಿಸರದ ಮೇಲೆ ಪರಿಣಾಮ ಬೀರಬಹುದೆಂಬುದನ್ನು ಒಪ್ಪಬಹುದು ಎಂದು ಸರ್ಕಾರದ‌ ಅಧಿಸೂಚನೆಯನ್ನು ಪ್ರಶ್ನಿಸಲು ಅವಕಾಶ ನೀಡಿದ ಹೈಕೋರ್ಟ್, ಯಥಾಸ್ಥಿತಿಗೆ ಆದೇಶಿಸಿದೆ.

Also Read: Sadhuguru Jaggi Vasudev: ಇಶಾ ಫೌಂಡೇಷನ್ ತಮಿಳುನಾಡಿನಿಂದ ಚಿಕ್ಕಬಳ್ಳಾಪುರಕ್ಕೆ ಶಿಫ್ಟ್ ಆಗುತ್ತಾ? ಸ್ಥಳ ಮಹತ್ವ ಏನು?

ಇದೇ ಜನವರಿ 15 ಯೋಗೇಶ್ವರ ಲಿಂಗ ಸ್ಥಾಪನೆಗೆ ಉದ್ದೇಶಿಸಲಾಗಿತ್ತು. ಇದೀಗ ಯಥಾಸ್ಥಿತಿ ಕಾಯ್ದುಕೊಳ್ಳಲು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ನ್ಯಾಯ ಪೀಠ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಉದ್ಘಾಟನೆಗೆ ಉಪರಾಷ್ಟ್ರಪತಿ ಬರುವುದು ಅನುಮಾನವಾಗಿದೆ.

ಜನವರಿ 15 ರಂದು ಆದಿಯೋಗಿ ಮೂರ್ತಿ ಉದ್ಘಾಟನೆ:

ಇಶಾ ಫೌಂಡೇಷನ್ ಸಂಸ್ಥಾಪಕ ಜಗ್ಗಿ ವಾಸುದೇವ್ ಈ ಹಿಂದೆ ಹೇಳಿದ್ದಂತೆ ಆಶ್ರಮದ ನಿರ್ಮಾಣ ಕಾಮಗಾರಿ ಮುಂದುವರೆದಿದ್ದು ಆಶ್ರಮದಲ್ಲಿ 112 ಅಡಿಗಳ ಆದಿಯೋಗಿ ಮೂರ್ತಿ ಉದ್ಘಾಟನೆಗೆ ಸನ್ನದ್ದಾಗಿದೆ. ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ|| ಕೆ. ಸುಧಾಕರ್ ಸೇರಿದಂತೆ ಗಣ್ಯಾತಿಗಣ್ಯರು ಆಶ್ರಮಕ್ಕೆ ಆಗಮಿಸಿ ಜನವರಿ 15ರಂದು ಸಂಜೆ ಆದಿಯೋಗಿ ಮೂರ್ತಿ ಉದ್ಘಾಟನೆ ಮಾಡಲಿದ್ದಾರೆ.

Published On - 1:15 pm, Wed, 11 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ