AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಅಧಿಕಾರಿಗಳ ನಿರ್ಲಕ್ಷ್ಯ; ರೈತರಿಗೆ ಬೆಳೆವಿಮೆ ನೀಡದೇ ದೋಖಾ!

ಬೆಳೆವಿಮೆಗೆ ಸಂಬಂಧಪಟ್ಟಂತೆ ಸ್ಥಳೀಯ ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲನೆ ನಡೆಸಿ, ನೀತಿ ನಿಯಮಗಳ ಅನುಸಾರ ಸರ್ವೆ ನಡೆಸದೇ ತಪ್ಪಾಗಿ ವರದಿ ನೀಡಿದ ಕಾರಣ, ನೂರಾರು ಜನ ರೈತರು ಬೆಳೆವಿಮೆಯಿಂದ ವಂಚಿತರಾದ ಘಟನೆ ಗೌರಿಬಿದನೂರು ತಾಲ್ಲೂಕಿನಲ್ಲಿ ನಡೆದಿದೆ. ಈ ಹಿನ್ನಲೆ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಚಿಕ್ಕಬಳ್ಳಾಪುರ: ಅಧಿಕಾರಿಗಳ ನಿರ್ಲಕ್ಷ್ಯ; ರೈತರಿಗೆ ಬೆಳೆವಿಮೆ ನೀಡದೇ ದೋಖಾ!
ಗೌರಿಬಿದನೂರು ರೈತರಿಗೆ ಬೆಳೆವಿಮೆ ನೀಡದೇ ದೋಖಾ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:May 05, 2024 | 3:00 PM

Share

ಚಿಕ್ಕಬಳ್ಳಾಪುರ, ಮೇ.05: ಮೊದಲೇ ಬರಗಾಲದಿಂದ ಕಂಗಾಲಾಗಿರುವ ರೈತರಿಗೆ, ಬೆಳೆವಿಮೆ ನೀಡದೇ ದೋಖಾ ಮಾಡಿದ್ದು, ಈ ಹಿನ್ನಲೆ ಗೌರಿಬಿದನೂರು(Gauribidanur) ತಾಲ್ಲೂಕು ಪಂಚಾಯತಿ ಕಛೇರಿ ಮುಂದೆ ರೈತರು ಧರಣಿ ನಡೆಸುತ್ತಿದ್ದಾರೆ. ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಇಡಗೂರು, ಸೊಣಗಾನಹಳ್ಳಿ, ಬೇವಿನಹಳ್ಳಿ, ಅಲೀಪುರ, ಜಿ.ಬೊಮ್ಮಸಂದ್ರ, ಗಂಗಸಂದ್ರ, ಕಲ್ಲಿನಾಯಕನಹಳ್ಳಿ, ಮಿಣಕಿನಗುರ್ಕಿ, ಅಲಕಾಪುರ ಸೇರಿದಂತೆ ವಿವಿಧ ಗ್ರಾಮಪಂಚಾಯತಿಗಳ ರೈತರು ಬೆಳೆವಿಮೆ ನೋಂದಣಿ ಮಾಡಿಸಿದ್ದರು. ಆದರೆ, ಸ್ಥಳೀಯ ಪಂಚಾಯ್ತಿ ಅಧಿಕಾರಿಗಳು ಸಮರ್ಪಕವಾಗಿ ವರದಿ ತಯಾರಿಸಿ, ಕೃಷಿ ಇಲಾಖೆಗೆ ನೀಡದ ಕಾರಣ ಈಗ ರೈತರು ಬೆಳೆವಿಮೆಯಿಂದ ವಂಚಿತರಾಗಿದ್ದಾರೆ.

ಇನ್ನು ರೈತರು ಪ್ರತಿಭಟನೆ ನಡೆಸುತ್ತಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಗೌರಿಬಿದನೂರು ತಹಶೀಲ್ದಾರ್ ಮಹೇಶ್‍ಪತ್ರಿ ಅವರು ಮಾತನಾಡಿ, ‘ಸ್ಥಳೀಯ ಅಧಿಕಾರಿಗಳ ಕರ್ತವ್ಯಲೋಪದಿಂದ ವರದಿಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಜಿಲ್ಲಾಧಿಕಾರಿಗಳ ಮದ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ:ಬಿರುಬಿಸಿಲಿಗೆ ಬೆಳೆನಾಶದ ಭಯ; ರೈತರು ಬೆಳೆವಿಮೆ ಯೋಜನೆಯ ಲಾಭ ಪಡೆಯುವುದು ಹೇಗೆ? ಇಲ್ಲಿದೆ ಡೀಟೇಲ್ಸ್

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬೆಳೆವಿಮೆ ಮಾಡಿಸಿಕೊಳ್ಳುವಂತೆ ರೈತರಿಗೆ ಮಾಹಿತಿ ನೀಡುತ್ತಾರೆ. ಆದರೆ, ಸ್ಥಳೀಯ ಅಧಿಕಾರಿಗಳ ತಪ್ಪು ವರದಿಯಿಂದ ಸಾವಿರಾರು ಜನ ರೈತರು ಬೆಳೆವಿಮೆಯಿಂದ ವಂಚಿತರಾಗಿದ್ದಾರೆ. ಕೆಲವು ವಿಮೆ ಕಂಪನಿಗಳು, ಕೆಲವು ಲಂಚಕೋರ ಅಧಿಕಾರಿಗಳ ಜೊತೆ ಶಾಮೀಲಾಗಿ ತಪ್ಪು ವರದಿ ಪಡೆದು, ರೈತರಿಗೆ ವಂಚನೆ ಎಸೆಗಿದ್ದಾರೆ ಎನ್ನುವ ಆರೋಪ ಕೂಡ ಕಂಡುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Sun, 5 May 24

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ