AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಅಧಿಕಾರಿಗಳ ನಿರ್ಲಕ್ಷ್ಯ; ರೈತರಿಗೆ ಬೆಳೆವಿಮೆ ನೀಡದೇ ದೋಖಾ!

ಬೆಳೆವಿಮೆಗೆ ಸಂಬಂಧಪಟ್ಟಂತೆ ಸ್ಥಳೀಯ ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲನೆ ನಡೆಸಿ, ನೀತಿ ನಿಯಮಗಳ ಅನುಸಾರ ಸರ್ವೆ ನಡೆಸದೇ ತಪ್ಪಾಗಿ ವರದಿ ನೀಡಿದ ಕಾರಣ, ನೂರಾರು ಜನ ರೈತರು ಬೆಳೆವಿಮೆಯಿಂದ ವಂಚಿತರಾದ ಘಟನೆ ಗೌರಿಬಿದನೂರು ತಾಲ್ಲೂಕಿನಲ್ಲಿ ನಡೆದಿದೆ. ಈ ಹಿನ್ನಲೆ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಚಿಕ್ಕಬಳ್ಳಾಪುರ: ಅಧಿಕಾರಿಗಳ ನಿರ್ಲಕ್ಷ್ಯ; ರೈತರಿಗೆ ಬೆಳೆವಿಮೆ ನೀಡದೇ ದೋಖಾ!
ಗೌರಿಬಿದನೂರು ರೈತರಿಗೆ ಬೆಳೆವಿಮೆ ನೀಡದೇ ದೋಖಾ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:May 05, 2024 | 3:00 PM

ಚಿಕ್ಕಬಳ್ಳಾಪುರ, ಮೇ.05: ಮೊದಲೇ ಬರಗಾಲದಿಂದ ಕಂಗಾಲಾಗಿರುವ ರೈತರಿಗೆ, ಬೆಳೆವಿಮೆ ನೀಡದೇ ದೋಖಾ ಮಾಡಿದ್ದು, ಈ ಹಿನ್ನಲೆ ಗೌರಿಬಿದನೂರು(Gauribidanur) ತಾಲ್ಲೂಕು ಪಂಚಾಯತಿ ಕಛೇರಿ ಮುಂದೆ ರೈತರು ಧರಣಿ ನಡೆಸುತ್ತಿದ್ದಾರೆ. ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಇಡಗೂರು, ಸೊಣಗಾನಹಳ್ಳಿ, ಬೇವಿನಹಳ್ಳಿ, ಅಲೀಪುರ, ಜಿ.ಬೊಮ್ಮಸಂದ್ರ, ಗಂಗಸಂದ್ರ, ಕಲ್ಲಿನಾಯಕನಹಳ್ಳಿ, ಮಿಣಕಿನಗುರ್ಕಿ, ಅಲಕಾಪುರ ಸೇರಿದಂತೆ ವಿವಿಧ ಗ್ರಾಮಪಂಚಾಯತಿಗಳ ರೈತರು ಬೆಳೆವಿಮೆ ನೋಂದಣಿ ಮಾಡಿಸಿದ್ದರು. ಆದರೆ, ಸ್ಥಳೀಯ ಪಂಚಾಯ್ತಿ ಅಧಿಕಾರಿಗಳು ಸಮರ್ಪಕವಾಗಿ ವರದಿ ತಯಾರಿಸಿ, ಕೃಷಿ ಇಲಾಖೆಗೆ ನೀಡದ ಕಾರಣ ಈಗ ರೈತರು ಬೆಳೆವಿಮೆಯಿಂದ ವಂಚಿತರಾಗಿದ್ದಾರೆ.

ಇನ್ನು ರೈತರು ಪ್ರತಿಭಟನೆ ನಡೆಸುತ್ತಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಗೌರಿಬಿದನೂರು ತಹಶೀಲ್ದಾರ್ ಮಹೇಶ್‍ಪತ್ರಿ ಅವರು ಮಾತನಾಡಿ, ‘ಸ್ಥಳೀಯ ಅಧಿಕಾರಿಗಳ ಕರ್ತವ್ಯಲೋಪದಿಂದ ವರದಿಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಜಿಲ್ಲಾಧಿಕಾರಿಗಳ ಮದ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ:ಬಿರುಬಿಸಿಲಿಗೆ ಬೆಳೆನಾಶದ ಭಯ; ರೈತರು ಬೆಳೆವಿಮೆ ಯೋಜನೆಯ ಲಾಭ ಪಡೆಯುವುದು ಹೇಗೆ? ಇಲ್ಲಿದೆ ಡೀಟೇಲ್ಸ್

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬೆಳೆವಿಮೆ ಮಾಡಿಸಿಕೊಳ್ಳುವಂತೆ ರೈತರಿಗೆ ಮಾಹಿತಿ ನೀಡುತ್ತಾರೆ. ಆದರೆ, ಸ್ಥಳೀಯ ಅಧಿಕಾರಿಗಳ ತಪ್ಪು ವರದಿಯಿಂದ ಸಾವಿರಾರು ಜನ ರೈತರು ಬೆಳೆವಿಮೆಯಿಂದ ವಂಚಿತರಾಗಿದ್ದಾರೆ. ಕೆಲವು ವಿಮೆ ಕಂಪನಿಗಳು, ಕೆಲವು ಲಂಚಕೋರ ಅಧಿಕಾರಿಗಳ ಜೊತೆ ಶಾಮೀಲಾಗಿ ತಪ್ಪು ವರದಿ ಪಡೆದು, ರೈತರಿಗೆ ವಂಚನೆ ಎಸೆಗಿದ್ದಾರೆ ಎನ್ನುವ ಆರೋಪ ಕೂಡ ಕಂಡುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Sun, 5 May 24

ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ