AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀನ್ಸ್ ಬೆಳೆದು ಲಕ್ಷಾಧಿಪತಿಯಾದ ಯುವರೈತ; ಇಲ್ಲಿದೆ ವಿವರ

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿದ್ಯಾವಂತ ಯುವಕನೋರ್ವ ಕೆಲಸ ತೊರೆದು, ತಂದೆ ಮಾಡುತ್ತಿದ್ದ ಕೃಷಿ ಕಾಯಕವನ್ನೇ ಮುಂದುವರೆಸಿದ್ದಾನೆ. ಇದೀಗ ತನ್ನ 2 ಎಕರೆ ಜಮೀನಿನಲ್ಲಿ ಬೀನ್ಸ್ ಬೆಳೆದು ಲಕ್ಷಾಧಿಪತಿಯಾಗುವುದರ ಮೂಲಕ ಇನ್ನೀತರ ರೈತರಿಗೆ ಮಾದರಿಯಾಗಿದ್ದಾನೆ. 2 ಎಕರೆ ಬೀನ್ಸ್​ನಿಂದ 20 ಲಕ್ಷಕ್ಕೂ ಹೆಚ್ಚು ಆದಾಯ ಗಳಿಸಿದ್ದಾನೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೀನ್ಸ್ ಬೆಳೆದು ಲಕ್ಷಾಧಿಪತಿಯಾದ ಯುವರೈತ; ಇಲ್ಲಿದೆ ವಿವರ
ಚಿಕ್ಕಬಳ್ಳಾಪುರದಲ್ಲಿ ಬೀನ್ಸ್ ಬೆಳೆದು ಲಕ್ಷಾಧಿಪತಿಯಾದ ಯುವರೈತ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: May 17, 2024 | 4:04 PM

Share

ಚಿಕ್ಕಬಳ್ಳಾಪುರ, ಮೇ.17: ನಗರದ ಹೊರವಲಯದ ತಿಪ್ಪೇನಹಳ್ಳಿ(Thippenahalli) ಗ್ರಾಮದ ಗಿರೀಶ್ ಎನ್ನುವ ಯುವರೈತ, ಪದವಿ ಮುಗಿಸಿ 15 ರಿಂದ 20 ಸಾವಿರ ಸಂಬಳಕ್ಕೆ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ. ಆತನಿಗೆ ಬರುತ್ತಿದ್ದ ಸಂಬಳ ಸಾಕಾಗುತ್ತಿಲ್ಲವೆಂದು ಕೆಲಸ ತೊರೆದು ತಂದೆಯ ಜೊತೆ ಕೃಷಿ, ತೋಟಗಾರಿಕೆಯತ್ತ ವಾಲಿದ್ದಾನೆ. ಅದರಂತೆ ಈ ಬಾರಿ ಬೀನ್ಸ್​ ಬೆಳೆದು ಲಕ್ಷಾಧಿಪತಿ ಅಗಿದ್ದಾನೆ. ಈಗ ಬೀನ್ಸ್​ಗೆ ಬಂಗಾರದ ಬೆಲೆ ಇದೆ. ಕೆಜಿ ಬೀನ್ಸ್ 170 ರಿಂದ 200 ರೂಪಾಯಿಗೆ ಮಾರಾಟವಾಗುತ್ತಿದೆ.

2 ತಿಂಗಳಿನಲ್ಲಿ 17 ಲಕ್ಷಕ್ಕೂ ಹೆಚ್ಚು ಆದಾಯ

ಇನ್ನು ವಿಪರೀತ ತಾಪಮಾನದಿಂದ ಫಸಲು ಬರದೇ ಮೊಳಕೆಯಲ್ಲೇ ಬೀನ್ಸ್ ಕಮರಿತ್ತು. ಆದರೂ ಛಲಬಿಡದ ಗಿರೀಶ್, ಹಗಲು-ರಾತ್ರಿ ಕಷ್ಟಪಟ್ಟು 2 ಎಕರೆ ಜಮೀನಿನಲ್ಲಿ ಬೀನ್ಸ್ ಬೆಳೆದಿದ್ದಾನೆ. ಜೊತೆಗೆ ಈಗಾಗಲೇ 4 ರಿಂದ 5 ಸಲ ಕಟಾವು ಮಾಡಿದ್ದು, 10 ಟನ್‍ಗೂ ಹೆಚ್ಚು ಬೀನ್ಸ್ ಬಂದಿದೆ. ಕೆಜಿ ಬೀನ್ಸ್​ಗೆ ಸರಾಸರಿ 180 ರೂಪಾಯಿ ಮಾರಾಟವಾಗಿದೆ. ಇದರಿಂದ ಕೇವಲ 2 ತಿಂಗಳಿನಲ್ಲಿ 17 ಲಕ್ಷಕ್ಕೂ ಹೆಚ್ಚು ಆದಾಯ ಗಳಿಸಿದ್ದಾನೆ.

ಇದನ್ನೂ ಓದಿ:ರಾಮನಗರದಲ್ಲಿ ರಣಬಿಸಿಲು: 500 ಕೋಟಿ ಮೌಲ್ಯದ ಮಾವು ಲಾಸ್! 28 ‌ಸಾವಿರ ರೈತ ಕುಟುಂಬಗಳು ಸಂಷಕ್ಟದಲ್ಲಿ

ಗಿರೀಶ್ ತಂದೆ ಹೆಸರಿನಲ್ಲಿ 8 ಎಕರೆ ಜಮೀನಿದೆ. ಅದರಲ್ಲಿ ಗಿರೀಶ್​ 2 ಎಕರೆ ರೋಜಾಹೂವು ಬೆಳೆದಿದ್ದಾನೆ. ಭರಪೂರ ಆದಾಯ ಬರುತ್ತಿದೆ. ಇನ್ನು ತುಂಬಾ ಬಿಸಿಲು ಎಂದು ಈ ಬಾರಿ ರೈತರು ಬೀನ್ಸ್ ಬೆಳೆಯಲು ಹೋಗಿಲ್ಲ. ಆದರೂ ಛಲಬಿಡದ ಗಿರೀಶ್​, ಬೋರ್​ವೇಲ್‍ಗೆ ಜನರೇಟರ್ ಅಳವಡಿಸಿ ಹಗಲು-ರಾತ್ರಿ ಬೀನ್ಸ್ ತೋಟ ಸಾಕುತ್ತಿದ್ದಾನೆ. ಇದರಿಂದ ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ ಗಿರೀಶ್ ಬೆಳೆದ ಬೀನ್ಸ್​ದೇ ಹವಾ ಹೆಚ್ಚಾಗಿದೆ.

ಬೀನ್ಸ್ ಸೇರಿದಂತೆ ತರಹೆವಾರಿ ತರಕಾರಿಗೆ ಹೆಸರುವಾಸಿಯಾಗಿರುವ ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ ಈಗ ಬೀನ್ಸ್​ನ್ನು ದುರ್ಬಿನ್ ಹಾಕಿ ಹುಡುಕುವಂತಾಗಿದೆ. ಪ್ರತಿವರ್ಷ ಈ ಸಂದರ್ಭದಲ್ಲಿ ಟನ್‍ಗಟ್ಟಲೇ ಬೀನ್ಸ್ ಮಾರುಕಟ್ಟೆಗೆ ಬರುತ್ತಿತ್ತು. ಆದರೆ, ಈ ಬಾರಿ ಬೆರಳಣಿಕೆಯಷ್ಟು ಬೀನ್ಸ್ ಮೂಟೆಗಳು ಮಾರುಕಟ್ಟೆಗೆ ಬರುತ್ತಿದೆ. ಇದರಿಂದ ಬೀನ್ಸ್​ಗೆ ಬಂಗಾರದ ಬೆಲೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?