AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಪಿ ವಿರುದ್ದವೇ ತಿರುಗಿಬಿದ್ದ ಪೊಲೀಸ್ ಪೇದೆಗಳು; ಕಚೇರಿ ಎದುರು ಧರಣಿ, ಯಾಕೆ ಗೊತ್ತಾ?

ಇಲಾಖಾ ವಿಚಾರಣೆ ನೆಪದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಲವು ತಿಂಗಳುಗಳಿಂದ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಹಾಗೂ ಅವರ ಕುಟುಂಬದವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಎಸ್ಪಿ ವಿರುದ್ದವೇ ತಿರುಗಿಬಿದ್ದ ಪೊಲೀಸ್ ಪೇದೆಗಳು; ಕಚೇರಿ ಎದುರು ಧರಣಿ, ಯಾಕೆ ಗೊತ್ತಾ?
ಚಿಕ್ಕಬಳ್ಳಾಪುರ ಎಸ್ಪಿ ವಿರುದ್ದವೇ ತಿರುಗಿಬಿದ್ದ ಪೊಲೀಸ್ ಪೇದೆಗಳು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 11, 2024 | 7:52 PM

Share
ಚಿಕ್ಕಬಳ್ಳಾಪುರ, ಮೇ.11: ಎಸ್ಪಿ ಕಛೇರಿ ಎದುರು ಇಂದು(ಮೇ.11) ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಚೇಳೂರು ಪೊಲೀಸ್ ಠಾಣೆಯ ಸಿಬ್ಬಂದಿ  ಅಶೋಕ್ ಹಾಗೂ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಸಿಬ್ಬಂದಿ ನರಸಿಂಹಮೂರ್ತಿ ಎಂಬುವವರು ಇದೀಗ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್ ನಾಗೇಶ್ ವಿರುದ್ದವೇ ತಿರುಗಿಬಿದ್ದಿದ್ದಾರೆ. ಎಸ್ಪಿ ಡಿ.ಎಲ್ ನಾಗೇಶ್ ತಾರತಮ್ಯ ನೀತಿ ಅನುಸರಿಸುತ್ತಿದ್ದು, ತಮ್ಮ ಮೇಲೆ ಇಲಾಖೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆ. ಇಬ್ಬರನ್ನು ಎರಡೆರಡು ಭಾರಿ ಅಮಾನತು ಮಾಡಿ ಇಲಾಖೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ಅವಲತ್ತುಕೊಂಡಿದ್ದಾರೆ.
ಕಳೆದ ವರ್ಷದ ಹಿಂದೆ ಮನಿ ಡಬ್ಲಿಂಗ್ ಪ್ರಕರಣದಲ್ಲಿ ಅಂದಿನ ಪೊಲೀಸ್ ಇನ್ಸ್ ಪೆಕ್ಟರ್ ರವಿಕುಮಾರ್ ಸೇರಿ ಹಲವರ ಮೇಲೆ ಪ್ರಕರಣ ದಾಖಲಾಗಿ ಇಲಾಖೆ ತನಿಖೆಗೆ ಆದೇಶಿಸಲಾಗಿತ್ತು. ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನ ಬಚಾವ್ ಮಾಡಲು ಪೇದೆಗಳಾದ ನರಸಿಂಹಮೂರ್ತಿ ಹಾಗೂ ಅಶೋಕ್ ಅವರನ್ನು ವಿನಾಕಾರಣವಾಗಿ ಸಿಲುಕಿಸಿದ್ದಾರಂತೆ. ಇದನ್ನ ಪ್ರಶ್ನಿಸಿದ್ದಕ್ಕೆ ಟ್ರಾನ್ಸ್ ಫರ್ ಶಿಕ್ಷೆ ನೀಡುವುದರ ಜೊತೆಗೆ ಮೇಲ್ಮಟ್ಟದ ಅಧಿಕಾರಿಗಳಿಂದ ಟಾರ್ಚರ್ ನೀಡುತ್ತಿದ್ದಾರಂತೆ. ಇದರಿಂದ ರೋಸಿಹೋದ ಪೇದೆಗಳಾದ ಅಶೋಕ್ ಹಾಗೂ ನರಸಿಂಹಮೂರ್ತಿ ತಮ್ಮ ಪತ್ನಿ,ಮಕ್ಕಳನ್ನ ಕರೆದುಕೊಂಡು ಬಂದು ಚಿಕ್ಕಬಳ್ಳಾಪುರ ನಗರ ಹೊರವಲಯದ ಅಣಕನೂರು ಬಳಿಯ ಜಿಲ್ಲಾ ಎಸ್ಪಿ ಕಚೇರಿ ಎದುರು ಧರಣಿ ಕುಳಿತು, ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.
ಇನ್ನು ಮಬ್ಲಿಂಗ್ ಪ್ರಕರಣದಲ್ಲಿ ಆರೋಪಿಗಳನ್ನು ಅಕ್ರಮವಾಗಿ ಬಂಧಿಸಿ ಹಣ ವಸೂಲಿ ಮಾಡಿ ನಕಲಿ ರೈಡ್ ಮಾಡಿದ ಪ್ರಕರಣದಲ್ಲಿ ಇಬ್ಬರು ಸಿಬ್ಬಂಧಿಗಳು ಹಾಗೂ ಇನ್ಸ್ಪೆಕ್ಟರ್ ರವಿಕುಮಾರ್ ಅಮಾನತು ಆಗಿದ್ದು, ಹಾಗೆ ಇಲಾಖೆ ಇಲಾಖೆ ವಿಚಾರಣೆ ಎದುರಿಸುತ್ತಿದ್ದಾರೆ. ಇದೆ ವಿಚಾರದಲ್ಲಿ ಈಗ ಕಿರುಕುಳ ಎಂದು ಆರೋಪ ಬಂದಿದೆ. ಇದ್ರಿಂದ ಎಸ್ಪಿ ಖಾಸೀಮ್ ರವರು ಧರಣಿ ನಿರತ ಇಬ್ಬರು ಅಧಿಕಾರಿಗಳಿಂದ ಮನವಿ ಸ್ವೀಕರಿಸಿದ್ದು, ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಸಮಾಧಾನ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?