AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್​ ವಿವಾದ: ಉಳಿಮೆ ಮಾಡುತ್ತಿದ್ದ ರೈತರ ವಿರುದ್ಧ ಕೇಸ್​​ ದಾಖಲು

ಚಿಕ್ಕಬಳ್ಳಾಪುರದ ತಿಮ್ಮಸಂದ್ರದಲ್ಲಿ ವಕ್ಫ್ ಆಸ್ತಿ ವಿವಾದದಿಂದ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗಿದೆ. ತಮ್ಮ ಜಮೀನಿನಲ್ಲಿ ರೈತರು ಉಳುಮೆ ಮಾಡಲು ಹೋದಾಗ ಪೊಲೀಸರು ಟ್ರಾಕ್ಟರ್ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವಿವಾದದಿಂದ ರೈತರಲ್ಲಿ ಆಕ್ರೋಶ ಹೆಚ್ಚಾಗಿದೆ.

ವಕ್ಫ್​ ವಿವಾದ: ಉಳಿಮೆ ಮಾಡುತ್ತಿದ್ದ ರೈತರ ವಿರುದ್ಧ ಕೇಸ್​​ ದಾಖಲು
ಪಹಣಿ ವಕ್ಫ್​ ಹೆಸರು, ರೈತರ ಮೇಲೆ ಲಾಠಿ ಚಾರ್ಜ್​​
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Nov 15, 2024 | 8:22 PM

Share

ಚಿಕ್ಕಬಳ್ಳಾಪುರ, ನವೆಂಬರ್​ 15: ಕರ್ನಾಟಕದಲ್ಲಿ (Karnataka) ವಕ್ಫ್​ ಆಸ್ತಿ ವಿವಾದ (Waqf Board Controversy) ಜೋರಾಗಿದೆ. ವಕ್ಫ್​ ಆಸ್ತಿ ವಿವಾದ ಚಿಕ್ಕಬಳ್ಳಾಪುರಕ್ಕೂ ಕಾಲಿಟ್ಟಿದೆ. ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ರೈತರ ಜಮೀನ ಪಹಣಿಯಲ್ಲಿ ವಕ್ಫ್​ ಆಸ್ತಿ ಎಂದು ನಮೂದು ಆಗಿದೆ. ಇದರಿಂದ ರೈತರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ವಕ್ಫ್​ ಆಸ್ತಿ ಅಂತ ನಮೂದಾದ ಜಮೀನಿನಲ್ಲಿ ಉಳಿಮೆ ಮಾಡಲು ಮುಂದಾಗಿದ್ದ ರೈತರ ಟ್ರ್ಯಾಕ್ಟರ್​ ಅನ್ನು​​ ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ.

ರೈತರಾದ ಟಿ.ಎನ್ ಬೈರಾರೆಡ್ಡಿ, ಎನ್.ಮುನಿರೆಡ್ಡಿ, ಎನ್ ಚನ್ನಕೃಷ್ಣಪ್ಪ, ಲಕ್ಷ್ಮಿದೇವಮ್ಮ, ನಾರಾಯಣಪ್ಪ, ವೆಂಕಟರೆಡ್ಡಿ, ಶ್ರೀರಾಮರೆಡ್ಡಿ, ನಾಗಮ್ಮ, ಕೆ.ಲಕ್ಷ್ಮಮ್ಮ, ಮುನಿಲಕ್ಷ್ಮಮ್ಮ ಸೇರಿದಂತೆ 10ಕ್ಕೂ ಹೆಚ್ಚು ರೈತರಿಗೆ ಸೇರಿದ ಸರ್ವೆ ನಂಬರ್ 13/1ರಲ್ಲಿ 2 ಎಕರೆ 21 ಗುಂಟೆ, 13/3 ರಲ್ಲಿ 20 ಗುಂಟೆ, ಸರ್ವೆ ನಂಬರ್ 20ರಲ್ಲಿರುವ 1 ಎಕರೆ 36 ಗುಂಟೆ ಜಮೀನಿನ ಪಹಣಿಯಲ್ಲಿ ವಕ್ಫ್​ ಆಸ್ತಿ ಎಂದು ನಮೂದು ಆಗಿದೆ.

ಇದನ್ನೂ ಓದಿ: ಧಾರವಾಡ ತಾಲೂಕಿನಲ್ಲಿ ಉಂಟಾಗಿದ್ದ ವಕ್ಫ್​ ಆಸ್ತಿ ಗೊಂದಲಗಳಿಗೆ ಕೊನೆಗೂ ತೆರೆ: ನಿಟ್ಟುಸಿರು ಬಿಟ್ಟ ರೈತರು

ಇದರಿಂದ ಆಕ್ರೋಶಗೊಂಡ ರೈತರು, ಚಿಂತಾಮಣಿ ಜಾಮಿಯಾ ಮಸೀದಿ ಸದಸ್ಯರು ಮತ್ತು ಪೊಲೀಸರ ಜೊತೆ ವಾಗ್ವಾದ ನಡೆಸಿದರು. ನಂತರ 10ಕ್ಕೂ ಹೆಚ್ಚು ರೈತರು ವಿವಾದಿತ ಜಮೀನುಗಳಲ್ಲಿ ಉಳುಮೆ ಮಾಡಲು ಮುಂದಾಗಿದ್ದಕ್ಕೆ ಚಿಂತಾಮಣಿ ಜಾಮಿಯಾ ಮಸೀದಿ ಕಾರ್ಯಾದರ್ಶಿ ದೂರಿನ ಆಧಾರದ ಮೇಲೆ BNS ಸೆಕ್ಷನ್​ 324(4), 329(3)ರಡಿ ಪ್ರಕರಣ ದಾಖಲಾಗಿದೆ.​

ತಿಮ್ಮಸಂದ್ರ ಗ್ರಾಮಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಹಾಗೂ ಎಎಸ್ಪಿ ಆರ್.ಐ.ಕಾಸಿಂ ಭೇಟಿ ಪರಿಶೀಲನೆ ನಡೆಸಿದರು. ಗ್ರಾಮದಲ್ಲಿ ಪೊಲೀಸರು ಠಿಕಾಣಿ ಹೂಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:12 pm, Fri, 15 November 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ