AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಗತಿಪರರ ಹತ್ಯೆ ಹಿಂದೆ ಹಿಂದೂಪರ ಸಂಘಟನೆಗಳ ಕೈವಾಡವಿರುವ ಶಂಕೆ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಪ್ರಗತಿಪರರ ಹತ್ಯೆ ಹಿಂದೆ ಹಿಂದೂಪರ ಸಂಘಟನೆಗಳ ಕೈವಾಡವಿರುವ ಶಂಕೆ ಇದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಾಗೇಪಲ್ಲಿಯಲ್ಲಿಯಲ್ಲಿ ಆರೋಪಿಸಿದ್ದಾರೆ.

ಪ್ರಗತಿಪರರ ಹತ್ಯೆ ಹಿಂದೆ ಹಿಂದೂಪರ ಸಂಘಟನೆಗಳ ಕೈವಾಡವಿರುವ ಶಂಕೆ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
TV9 Web
| Updated By: ವಿವೇಕ ಬಿರಾದಾರ|

Updated on: Sep 18, 2022 | 5:39 PM

Share

ಚಿಕ್ಕಬಳ್ಳಾಪುರ: ಪ್ರಗತಿಪರರ ಹತ್ಯೆ ಹಿಂದೆ ಹಿಂದೂಪರ ಸಂಘಟನೆಗಳ ಕೈವಾಡವಿರುವ ಶಂಕೆ ಇದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Kerala Chief Minister Pinarayi Vijayan) ಬಾಗೇಪಲ್ಲಿಯಲ್ಲಿಯಲ್ಲಿ ಆರೋಪಿಸಿದ್ದಾರೆ. ಬಾಗೇಪಲ್ಲಿಯ ಕೆಹಚ್​ಬಿ ಬಡಾವಣೆಯಲ್ಲಿ ಆಯೋಜಿಸಲಾಗಿದ್ದ, ಸಿಪಿಐ(ಎಂ) ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಕೇರಳ ಸರ್ಕಾರದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರ, ಕೇರಳ ಸರ್ಕಾರಕ್ಕೆ ನಿರಂತರವಾಗಿ ಕಿರುಕುಳ ನೀಡುತ್ತಿದೆ. ಕೇರಳದಂತೆ ದೇಶದ ಮತ್ತಿತರೆ ರಾಜ್ಯಗಳಿಗೂ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿದರು.

ಕೇರಳ ರಾಜ್ಯದಲ್ಲಿ ಸಿಪಿಎಂ ಸರ್ಕಾರದ ಜತೆ ಜನರು ನಿಂತಿದ್ದಾರೆ. ನಾವು ಬಿಜೆಪಿ, ಆರ್​ಎಸ್​ಎಸ್​ ಕುತಂತ್ರಗಳಿಗೆ ಶರಣಾಗುವುದಿಲ್ಲ. ಬಿಜೆಪಿ, ಆರ್​ಎಸ್​ಎಸ್​ ಧರ್ಮದ ಹೆಸರಿನಲ್ಲಿ ಕೋಮುವಾದ ಬೆಳೆಸುತ್ತಿದೆ. ಕೋಮುವಾದ ನೋಡಿಕೊಂಡು ಅಧಿಕಾರಿಗಳು ಅಸಹಾಯಕರಾಗಿದ್ದಾರೆ. ಮಂಗಳೂರು, ಉಡುಪಿಯಲ್ಲಿ ಅಲ್ಪಸಂಖ್ಯಾತರಿಗೆ ತೊಂದರೆ ಕೊಡುತ್ತಿದ್ದಾರೆ. ಮುಸ್ಲಿಂ ಹೆಣ್ಣುಮಕ್ಕಳನ್ನು ವಿದ್ಯಾಭ್ಯಾಸದಿಂದ ದೂರು ಇಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಆರ್.ಎಸ್. ಎಸ್ ಸಂಕುಚಿದ ದೇಶಭಕ್ತಿ ಮಾಡುತ್ತಿದೆ. ಭಾರತ ವಿವಿಧೆತೆಯಲ್ಲಿ ಏಕತೆ ಹೊಂದಿರುವ ರಾಷ್ಟ್ರ. ದೇಶದಲ್ಲಿ ಅಘಾತಕಾರಿ ಅನ್ನಿವೇಶ ಸೃಷ್ಟಿ ಮಾಡಿದ್ದಾರೆ. ದೇಶ ಭಕ್ತಿ, ರಾಷ್ಟ್ರೀಯತೆ ಕೆಲವರ ಸ್ವತ್ತ ಎನ್ನುವಂತೆ ಮಾಡುತ್ತಿದ್ದಾರೆ. ದೇಶ ಭಕ್ತಿಗೆ ಆರ್.ಎಸ್.ಎಸ್ ಪ್ರಮಾಣ ಪತ್ರ ಬೇಕು ಎನ್ನುವ ಹಾಗೆ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಆರ್.ಎಸ್.ಎಸ್ ಇರಲೇ ಇಲ್ಲ ಎಂದು ಹೇಳಿದ್ದಾರೆ.

ಹೋರಾಟಗಾರ ವೀರ ಸಾವರ್ಕರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಅವರು ಕಪಟ ದೇಶ ಪ್ರೇಮಿಗಳು, ಬ್ರಿಟೀಷರಿಗೆ ಗುಲಾಮರಾಗಿದ್ದವರು. ಇಂದು ಕಪಟ ನಾಟಕ ದೇಶ ಭಕ್ತರಂತೆ ಪೋಸ್ ಕೊಡುತ್ತಿದ್ದಾರೆ. ಜನರು ಹೀಗೆ ಇರಬೇಕು ಎಂದು ಹೇಳುವುದಕ್ಕೆ ಆರ್.ಎಸ್.ಎಸ್ ನವರು ಯಾರು? ಅವರಿಗೆ ಯಾರು ಅಧಿಕಾರ ಕೊಟ್ಟಿದ್ದಾರೆ? ಹೀಗೆ ಇರಬೇಕು ಹೀಗೆ ಬರೆಯಬೇಕು ಹೀಗೆ ಮಾತನಾಡಬೇಕು ಎನ್ನುಲು ಅವರು ಯಾರು? ಎಂದು ಪ್ರಶನ್ನಿಸಿದ್ದಾರೆ.

ಆರ್​ಎಸ್​ಎಸ್​​ನ ಸಂಸ್ತಾಪಕ ಗೋಳಾಲ್ಕರ್ ಸ್ವಾತಂತ್ರಯ ಹೋರಾಟ ವಿರೋಧ ಮಾಡಿದರು. ಆರ್​ಎಸ್​ಎಸ್​ನಚವರು ದೇಶದ ಎಲ್ಲಾ ವಿಭಜನೆಗಳಲ್ಲಿ ಇದ್ದಾರೆ. ಆದರೆ ಇಂದು ಆರ್.ಎಸ್.ಎಸ್ ಅತಿದೇಶ ಪ್ರೇಮಿಗಳಂತೆ ವರ್ತಿಸುತ್ತಿದ್ದಾರೆ. ಆರ್​ಎಸ್​ಎಸ್ ಹಾಗೂ ಬಿಜೆಪಿಯವರು ನಿಗೂಢ ಹುನ್ನಾರ ಹೊಂದಿದ್ದಾರೆ. ಬೆಳೆಯುವ ಮಕ್ಕಳಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಶಾಲಾ ಕಾಲೇಜುಗಳಲ್ಲಿ ಕೋಮುವಾದದ ಬೀಜ ಬಿತ್ತುತ್ತಿದ್ದಾರೆ. ಪಾಠಗಳಲ್ಲಿ ಇಲ್ಲ ಸಲ್ಲದ ಕೋಮುವಾದ ಭಾವನೆಗಳನ್ನು ಬಿತ್ತುತ್ತಿದ್ದಾರೆ. ಆರ್​ಎಸ್​ಎಸ್ ಸಂಸ್ಥಾಪಕರ ಬಾಷಣ ಸೇರಿಸಿದ್ದಾರೆ. ಆರ್.ಎಸ್.ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರಗತಿಪರರ ಧ್ವನಿ ಅಡಗಿಸುತ್ತಿದ್ದಾರೆ. ಆರ್.ಎಸ್.ಎಸ್ ವಿರುದ್ದ ಮಾತನಾಡಿದ್ದಕ್ಕೆ ಪ್ರೋ.ಭಗವಾನ್​ಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು.

2014ರಲ್ಲಿ ಪ್ರೋ.ಯು.ಆರ್. ಅನಂತಮೂರ್ತಿಗೆ ಪಾಕಿಸ್ತಾನ ಪ್ಲೈಟ್ ಟಿಕೇಟ್ ಬುಕ್ ಮಾಡಿ ಅವಹೇಳನ ಮಾಡಿದರು. ಕರ್ನಾಟಕವನ್ನು ಆರ್​ಎಸ್​ಎಸ್ ಸಂಘ ಪರಿವಾರ ಪ್ರಯೋಗ ಶಾಲೆ ಮಾಡಿಕೊಂಡಿದೆ. ತಲೆಮಾರಿಗಾಗಿ ಕರ್ನಾಟಕದಲ್ಲಿ ಕೋಮುವಾದಿ ಸೃಷ್ಟಿ ಮಾಡುತ್ತಿದ್ದಾರೆ. ಉತ್ತರ ಭಾರತದಂತೆ ಕರ್ನಾಟಕಟದಲ್ಲೂ ಕೋಮುವಾದಿ ಸೃಷ್ಟಿಸುತ್ತಿದ್ದಾರೆ. ಪಠ್ಯ ಪುಸ್ತಕವನ್ನು ಕೇಸರಿಕರಣ ಮಾಡುತ್ತಿದ್ದಾರೆ. ಮಹಾನ್ ಸಂತರಾದ ನಾರಾಯಣ ಗುರು, ಪೆರಿಯಾರ್ ಪಾಠಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿಸಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆರ್​ಎಸ್​ಎಸ್ ಧನ ಜನ ಬಲ ಬಳಸುತ್ತೆ ಹುಷಾರು ಆಗಿರಿ. ಕರ್ನಾಟಕದಲ್ಲಿ ನಡೆದ ರೇಸಾರ್ಟ ರಾಜಕೀಯ ಕರ್ನಾಟಕಕ್ಕೆ ಕಪ್ಪು ಚುಕ್ಕೆ. ಬಿಜೆಪಿ, ಆರ್​ಎಸ್​ಎಸ್ ನವರು ಮಾಡುತ್ತಿರುವ ರಾಜಕಾರಣಕ್ಕೆ ಕರ್ನಾಟಕದ ಮಣ್ಣಿಗೆ ನಾಚಿಕೆ ಆಗುತ್ತೆ. ದೇಶಾದ್ಯಂತ ಕೋಮು ವಿರೋಧಿ ಹೋರಾಟಗಳು ನಡೆಯಬೇಕು. ಕೋಮುವಾದದಿಂದ ಶಾಂತಿ ನೆಲಸಲ್ಲ, ಕೋಮುವಾದಕ್ಕೆ ಜಯ ಸಿಗಲ್ಲ. ಕೋಮುವಾದಕ್ಕೆ ಪ್ರತಿಕಾರವಾಗಿ ಕೋಮುವಾದ ಸೃಷ್ಟಿಸಬೇಡಿ ಎಂದು ಮಾತನಾಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ