AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಮಗುವನ್ನು ಕಿಡ್ನಾಪ್ ಮಾಡಿ ಹುಬ್ಬಳ್ಳಿಯಲ್ಲಿ ಬಿಟ್ಟು ಹೋದ ಕಿಡ್ನಾಪರ್

ಚಿಕ್ಕಬಳ್ಳಾಫುರದ ಮುರಗಮಲ್ಲ ಗ್ರಾಮದ ಅಮ್ಮಜಾನ್ ಬಾವಜಾನ್ ದರ್ಗಾದಲ್ಲಿ ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಅಪಹರಣ ಮಾಡಿದ ಘಟನೆ ನಡೆದಿತ್ತು. ಈ ಬಗ್ಗೆ ಟಿವಿ9 ವರದಿ ಬಿತ್ತರಿಸುತ್ತಿದ್ದಂತೆ ಆರೋಪಿಯು ಮಗುವನ್ನು ಹುಬ್ಬಳ್ಳಿಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.

ಚಿಕ್ಕಬಳ್ಳಾಪುರದಲ್ಲಿ ಮಗುವನ್ನು ಕಿಡ್ನಾಪ್ ಮಾಡಿ ಹುಬ್ಬಳ್ಳಿಯಲ್ಲಿ ಬಿಟ್ಟು ಹೋದ ಕಿಡ್ನಾಪರ್
ಚಿಕ್ಕಬಳ್ಳಾಪುರದಲ್ಲಿ ಮಗುವನ್ನು ಕಿಡ್ನಾಪ್ ಮಾಡಿ ಹುಬ್ಬಳ್ಳಿಯಲ್ಲಿ ಬಿಟ್ಟು ಹೋದ ಕಿಡ್ನಾಪರ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Nov 07, 2023 | 3:01 PM

Share

ಚಿಕ್ಕಬಳ್ಳಾಪುರ, ನ.7: ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಗ್ರಾಮದ ಅಮ್ಮಜಾನ್ ಬಾವಜಾನ್ ದರ್ಗಾದಲ್ಲಿ ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದೆ. ಕಿಡ್ನಾಪ್ (Kidnap) ಬಗ್ಗೆ ಟಿವಿ9 ವರದಿ ಬಿತ್ತರಿಸುತ್ತಿದ್ದಂತೆ ಆರೋಪಿಯು ಮಗುವನ್ನು ಹುಬ್ಬಳ್ಳಿಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಹೀಗಾಗಿ ಮಗುವಿನ ತಂದೆ ಜಬಿವುಲ್ಲಾ ಟಿವಿ9ಗೆ ಧನ್ಯವಾದ ತಿಳಿಸಿದ್ದಾರೆ.

ನವೆಂಬರ್ 5 ರಂದು ಬೆಂಗಳೂರು ಮೂಲದ ಜಬೀವುಲ್ಲಾ ಹಾಗೂ ಸುಮೈಯಾ ದಂಪತಿಯ ಮಗು ಜಾವೀದ್ ತನ್ನ ಅಜ್ಜ, ಅಜ್ಜಿ ಮತ್ತು ತಾಯಿಯೊಂದಿಗೆ ಮುರುಗಮಲ್ಲ ದರ್ಗಾಕ್ಕೆ ಆಗಮಿಸಿದ್ದಾನೆ. ಮಧ್ಯಾಹ್ನ 3.22 ರ ಸಮಯದಲ್ಲಿ ದರ್ಗಾ ಒಳಗೆ ಹೋಗುತ್ತಿದ್ದಾಗ ಜನಸಂದಣಿ ನಡುವೆ ಮಗುವನ್ನು ಅಪಹರಣ ಮಾಡಲಾಗಿದೆ.

ಇದನ್ನೂ ಓದಿ: ಹಾಸನ: ಬೆಂಗಳೂರಿನ ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್, ಅರಕಲಗೂಡಿನಲ್ಲಿ ರಕ್ಷಣೆ

ಮಗನನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಪೋಷಕರು, ಮಗು ಪತ್ತೆ ಮಾಡಿಕೊಡುವಂತೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ಆರಂಭಿಸಿದ್ದರು.

ಸದ್ಯ ಮಗು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದು, ಮಗುವನ್ನು ಕಳೆದುಕೊಂಡು ದುಃಖದಲ್ಲಿದ್ದ ಪೋಷಕರು ಇದೀಗ ಮಗನನ್ನು ಮರಳಿ ಪಡೆಯುವ ಮೂಲಕ ಸಂತಸಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ