AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಮಗುವನ್ನು ಕಿಡ್ನಾಪ್ ಮಾಡಿ ಹುಬ್ಬಳ್ಳಿಯಲ್ಲಿ ಬಿಟ್ಟು ಹೋದ ಕಿಡ್ನಾಪರ್

ಚಿಕ್ಕಬಳ್ಳಾಫುರದ ಮುರಗಮಲ್ಲ ಗ್ರಾಮದ ಅಮ್ಮಜಾನ್ ಬಾವಜಾನ್ ದರ್ಗಾದಲ್ಲಿ ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಅಪಹರಣ ಮಾಡಿದ ಘಟನೆ ನಡೆದಿತ್ತು. ಈ ಬಗ್ಗೆ ಟಿವಿ9 ವರದಿ ಬಿತ್ತರಿಸುತ್ತಿದ್ದಂತೆ ಆರೋಪಿಯು ಮಗುವನ್ನು ಹುಬ್ಬಳ್ಳಿಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.

ಚಿಕ್ಕಬಳ್ಳಾಪುರದಲ್ಲಿ ಮಗುವನ್ನು ಕಿಡ್ನಾಪ್ ಮಾಡಿ ಹುಬ್ಬಳ್ಳಿಯಲ್ಲಿ ಬಿಟ್ಟು ಹೋದ ಕಿಡ್ನಾಪರ್
ಚಿಕ್ಕಬಳ್ಳಾಪುರದಲ್ಲಿ ಮಗುವನ್ನು ಕಿಡ್ನಾಪ್ ಮಾಡಿ ಹುಬ್ಬಳ್ಳಿಯಲ್ಲಿ ಬಿಟ್ಟು ಹೋದ ಕಿಡ್ನಾಪರ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: Rakesh Nayak Manchi|

Updated on: Nov 07, 2023 | 3:01 PM

Share

ಚಿಕ್ಕಬಳ್ಳಾಪುರ, ನ.7: ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಗ್ರಾಮದ ಅಮ್ಮಜಾನ್ ಬಾವಜಾನ್ ದರ್ಗಾದಲ್ಲಿ ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದೆ. ಕಿಡ್ನಾಪ್ (Kidnap) ಬಗ್ಗೆ ಟಿವಿ9 ವರದಿ ಬಿತ್ತರಿಸುತ್ತಿದ್ದಂತೆ ಆರೋಪಿಯು ಮಗುವನ್ನು ಹುಬ್ಬಳ್ಳಿಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಹೀಗಾಗಿ ಮಗುವಿನ ತಂದೆ ಜಬಿವುಲ್ಲಾ ಟಿವಿ9ಗೆ ಧನ್ಯವಾದ ತಿಳಿಸಿದ್ದಾರೆ.

ನವೆಂಬರ್ 5 ರಂದು ಬೆಂಗಳೂರು ಮೂಲದ ಜಬೀವುಲ್ಲಾ ಹಾಗೂ ಸುಮೈಯಾ ದಂಪತಿಯ ಮಗು ಜಾವೀದ್ ತನ್ನ ಅಜ್ಜ, ಅಜ್ಜಿ ಮತ್ತು ತಾಯಿಯೊಂದಿಗೆ ಮುರುಗಮಲ್ಲ ದರ್ಗಾಕ್ಕೆ ಆಗಮಿಸಿದ್ದಾನೆ. ಮಧ್ಯಾಹ್ನ 3.22 ರ ಸಮಯದಲ್ಲಿ ದರ್ಗಾ ಒಳಗೆ ಹೋಗುತ್ತಿದ್ದಾಗ ಜನಸಂದಣಿ ನಡುವೆ ಮಗುವನ್ನು ಅಪಹರಣ ಮಾಡಲಾಗಿದೆ.

ಇದನ್ನೂ ಓದಿ: ಹಾಸನ: ಬೆಂಗಳೂರಿನ ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್, ಅರಕಲಗೂಡಿನಲ್ಲಿ ರಕ್ಷಣೆ

ಮಗನನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಪೋಷಕರು, ಮಗು ಪತ್ತೆ ಮಾಡಿಕೊಡುವಂತೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ಆರಂಭಿಸಿದ್ದರು.

ಸದ್ಯ ಮಗು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದು, ಮಗುವನ್ನು ಕಳೆದುಕೊಂಡು ದುಃಖದಲ್ಲಿದ್ದ ಪೋಷಕರು ಇದೀಗ ಮಗನನ್ನು ಮರಳಿ ಪಡೆಯುವ ಮೂಲಕ ಸಂತಸಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!