AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಕತ್ತು ಇದ್ರೆ ಕೋಚಿಮುಲ್ ವಿಭಜನೆ ನಿಲ್ಲಿಸಿ: ರಮೇಶ್​ಕುಮಾರ್, ನಂಜೇಗೌಡರಿಗೆ ಸಚಿವ ಸುಧಾಕರ್ ಸವಾಲು

ಇವರಿಬ್ಬರೂ ನಯ ವಂಚಕರು. ತಾಕತ್ತು ಇದ್ದರೆ ಕೋಚಿಮುಲ್ ವಿಭಜನೆ ನಿಲ್ಲಿಸಲಿ ಎಂದು ಸಚಿವ ಡಾ.ಕೆ.ಸುಧಾಕರ ಸವಾಲು ಹಾಕಿದರು.

ತಾಕತ್ತು ಇದ್ರೆ ಕೋಚಿಮುಲ್ ವಿಭಜನೆ ನಿಲ್ಲಿಸಿ: ರಮೇಶ್​ಕುಮಾರ್, ನಂಜೇಗೌಡರಿಗೆ ಸಚಿವ ಸುಧಾಕರ್ ಸವಾಲು
ಕಾಂಗ್ರೆಸ್ ಶಾಸಕ ರಮೇಶ್​ ಕುಮಾರ್ ಮತ್ತು ಡಾ.ಕೆ.ಸುಧಾಕರ
TV9 Web
| Edited By: |

Updated on: Feb 19, 2022 | 8:23 PM

Share

ಚಿಕ್ಕಬಳ್ಳಾಪುರ: ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ವಿಭಜನೆ ನಿಲ್ಲಿಸಲು ಹೈಕೋರ್ಟ್​ ತಡೆಯಾಜ್ಞೆ ತಂದಿರುವವರ ವಿರುದ್ಧ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಹರಿಹಾಯ್ದ ಘಟನೆ ತಾಲ್ಲೂಕಿನ ಹೊಸಹುಡ್ಯ ಗ್ರಾಮದಲ್ಲಿ ನಡೆಯಿತು. ಪ್ರಕರಣದ ಹಿಂದೆ ಶಾಸಕರಾದ ಕೆ.ಆರ್.ರಮೇಶ ಕುಮಾರ್ ಹಾಗೂ ಶಾಸಕ ಕೆ.ವೈ.ನಂಜೇಗೌಡ ಅವರೇ ಇದ್ದಾರೆ ಎನ್ನುವ ಭಾವನೆಯಿಂದ ‘ಗುಳ್ಳೆನರಿಗಳು’ ಎಂದು ಟೀಕಿಸಿದರು. ಇವರಿಬ್ಬರೂ ನಯ ವಂಚಕರು. ತಾಕತ್ತು ಇದ್ದರೆ ಕೋಚಿಮುಲ್ ವಿಭಜನೆ ನಿಲ್ಲಿಸಲಿ ಎಂದು ಸವಾಲು ಹಾಕಿದರು. ಈ ಹಿಂದೆಯೂ ಹಲವು ಸಂದರ್ಭಗಳಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್​ ವಿಭಜನೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಪ್ರತಿಷ್ಠೆಯ ವಿಚಾರವಾಗಿ ಪರಿವರ್ತನೆಯಾಗಿದೆ.

ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿಯೂ ಸಚಿವ ಸುಧಾಕರ್ ಶಿವಶಂಕರರೆಡ್ಡಿ ಮತ್ತು ರಮೇಶ್​ ಕುಮಾರ್ ವಿರುದ್ಧ ಹರಿಹಾಯ್ದಿದ್ದರು. ‘ಶಿವಶಂಕರರೆಡ್ಡಿ, ರಮೇಶ್ ಕುಮಾರ್ ಅವರಂತಹ ನೂರು ಜನ ಅಡ್ಡ ಬಂದರೂ ಕೋಚಿಮುಲ್ ವಿಭಜಿಸುವುದಂತೂ ಖಚಿತ. ಹಾಲು ಒಕ್ಕೂಟವನ್ನು ಬೇರ್ಪಡಿಸಲು ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು ಪತ್ರ ಬರೆದಿದ್ದರು. ಆದರೆ ಈಗ ನಾನು ಜಿಲ್ಲಾ ಉಸ್ತುವಾರಿ ಸಚಿವನಾದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ನಮ್ಮ ಜಿಲ್ಲೆಯ ಪಾಲು ನಮಗೆ ಸಿಗಬೇಕು ಎಂದು ಕೋರಿದ್ದೇನೆ. ಪ್ರತಿ ಬಾರಿ ಕೋಲಾರದಲ್ಲಿರುವ ಡಿಸಿಸಿ ಬ್ಯಾಂಕ್, ಹಾಲು ಒಕ್ಕೂಟಕ್ಕೆ ಚಿಕ್ಕಬಳ್ಳಾಪುರದ ರೈತರು ಹೋಗಬೇಕೆಂದರೆ ಸಾಧ್ಯವಿಲ್ಲ’ ಎಂದು ದೂರಿದ್ದರು.

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕ್​ನಲ್ಲಿ ಶಾಸಕ ರಮೇಶ್ ಕುಮಾರ್ ರಿಂಗ್ ಮಾಸ್ಟರ್​ನಂತೆ ಇದ್ದಾರೆ. ಬ್ಯಾಂಕ್ ವ್ಯವಹಾರಗಳಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಸಹಕಾರ ಕ್ಷೇತ್ರದಲ್ಲೂ ರಾಜಕೀಯ ಬೆರಕೆಯಾಗುತ್ತಿದೆ ಎಂದು ಆರೋಪ ಮಾಡಿದ್ದರು. ಕಳೆದ ನವೆಂಬರ್ 8, 2021ರಂದು ಈ ಕುರಿತು ಕರ್ನಾಟಕ ಸಚಿವ ಸಂಪುಟವು ನಿರ್ಧಾರ ತೆಗೆದುಕೊಂಡಿತ್ತು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಪ್ರತ್ಯೇಕಿಸುವ ನಿರ್ಣಯವನ್ನು ಕರ್ನಾಟಕ ರಾಜ್ಯ ಸಚಿವ ಸಂಪುಟವು ನಿರ್ಣಯ ತೆಗೆದುಕೊಂಡಿತ್ತು. ಈ ನಿರ್ಣಯದ ಹಿಂದೆ ಒತ್ತಾಸೆಯಾಗಿ ಡಾ.ಕೆ.ಸುಧಾಕರ್ ಇದ್ದರು. ಹಲವು ವರ್ಷಗಳಿಂದ ಈ ವಿಷಯ ಕೋಲಾರ-ಚಿಕ್ಕಬಳ್ಳಾಪುರ ನಾಯಕರ ಮಧ್ಯೆ ವಾಗ್ವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಕೋಚಿಮುಲ್ ಒಕ್ಕೂಟ ವಿಭಜನೆಗೆ ಸರ್ಕಾರದ ಸಮ್ಮತಿ: ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ಹೇಳಿದ ಸಚಿವ ಸುಧಾಕರ್

ಇದನ್ನೂ ಓದಿ: ಕೋಚಿಮುಲ್​ನಲ್ಲಿ ಅವ್ಯವಹಾರ ಆರೋಪ: ಶಾಸಕರು, ಸಂಸದರ ವಾಕ್ಸಮರ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?