AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್‌ಡಿಕೆ ಪರಮಾಪ್ತ ಕೆಪಿ ಬಚ್ಚೇಗೌಡ, ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್​ಗೆ ಟಿಕೆಟ್​ ನೀಡಿದ ಹಿನ್ನಲೆ ಇದಕ್ಕೆ ವಿರೋಧಿಸಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪರಮಾಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ(K P Bachegowda) ಹಾಗೂ ಬೆಂಬಲಿಗರು, ಇಂದು(ಮಾ.31) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆ ಆದರು.

ಹೆಚ್‌ಡಿಕೆ ಪರಮಾಪ್ತ ಕೆಪಿ ಬಚ್ಚೇಗೌಡ, ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ
ಕೆಪಿ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 31, 2024 | 7:43 PM

Share

ಚಿಕ್ಕಬಳ್ಳಾಪುರ, ಮಾ.31: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪರಮಾಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ(K P Bachegowda) ಹಾಗೂ ಬೆಂಬಲಿಗರು ಇಂದು(ಮಾ.31) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆ ಆದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್​ಗೆ ಟಿಕೆಟ್​ ನೀಡಿದ ಹಿನ್ನಲೆ ಇದಕ್ಕೆ ವಿರೋಧಿಸಿ ಕಾಂಗ್ರೆಸ್​ಗೆ ಸೇರಿದ್ದಾರೆ. ಇವರ ಜೊತೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಸೇರಿದಂತೆ 50ಕ್ಕೂ ಹೆಚ್ಚು ಜನ ಮುಖಂಡರು ಕಾಂಗ್ರೆಸ್​ ಸೇರಿದರು. ಇನ್ನು ಏಪ್ರಿಲ್ 2 (ಮಂಗಳವಾರ)ರಂದು ಅಧಿಕೃತವಾಗಿ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಸೇರ್ಪಡೆಯಾಗಲಿದ್ದಾರೆ.

ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇರುವ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಈ ಬಾರಿ ಕಾಂಗ್ರೆಸ್​ ಮೂರು ಕ್ಷೇತ್ರದಲ್ಲಿ​ ಜಯಶಾಲಿಯಾಗಿದೆ. ಹೀಗಾಗಿ ಚಿಕ್ಕಬಳ್ಳಾಪುರವನ್ನು ಕಾಂಗ್ರೆಸ್​ ಭದ್ರಕೋಟೆ ಮಾಡುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹಾಗೂ ಹೆಚ್​ಡಿ ದೇವೇಗೌಡರ ಆಪ್ತ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್​ ಯೋಚಿಸಿತ್ತು.

ಇದನ್ನೂ ಓದಿ:ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ, ಕಾಂಗ್ರೆಸ್​ ಸೇರ್ಪಡೆ ಸಾಧ್ಯತೆ

ಅದರಂತೆ ಸಚಿವ ಎಂ.ಸಿ.ಸುಧಾಕರ್ ಸೇರಿದಂತೆ ಹಲವು ನಾಯಕರು ಕೆ.ಪಿ ಬಚ್ಚೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.ಜೊತೆಗೆ ಕಾಂಗ್ರೆಸ್​ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಬಳಿಕ ಮಾತನಾಡಿದ್ದ ಬಚ್ಚೆಗೌಡ, ‘ಜೆಡಿಎಸ್ ನಾಯಕರು ನಮ್ಮ ಸಮಸ್ಯೆಗಳಿಗೆ ಸ್ಪಂದಿಸಲ್ಲ, ನಮ್ಮ ರಾಜಕೀಯ ಎದುರಾಳಿ ಡಾ. ಕೆ ಸುಧಾಕರ್ ಪರ ನಾನು ನಿಲ್ಲಲ್ಲ. ಹೀಗಾಗಿ ನಾನು ಕಾಂಗ್ರೆಸ್​ ಸೇರುತ್ತಿದ್ದೇನೆ ಎಂದು ಕೆ.ಪಿ ಬಚ್ಚೇಗೌಡ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:38 pm, Sun, 31 March 24

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ