AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್‌ಡಿಕೆ ಪರಮಾಪ್ತ ಕೆಪಿ ಬಚ್ಚೇಗೌಡ, ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್​ಗೆ ಟಿಕೆಟ್​ ನೀಡಿದ ಹಿನ್ನಲೆ ಇದಕ್ಕೆ ವಿರೋಧಿಸಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪರಮಾಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ(K P Bachegowda) ಹಾಗೂ ಬೆಂಬಲಿಗರು, ಇಂದು(ಮಾ.31) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆ ಆದರು.

ಹೆಚ್‌ಡಿಕೆ ಪರಮಾಪ್ತ ಕೆಪಿ ಬಚ್ಚೇಗೌಡ, ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ
ಕೆಪಿ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Mar 31, 2024 | 7:43 PM

Share

ಚಿಕ್ಕಬಳ್ಳಾಪುರ, ಮಾ.31: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪರಮಾಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ(K P Bachegowda) ಹಾಗೂ ಬೆಂಬಲಿಗರು ಇಂದು(ಮಾ.31) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆ ಆದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್​ಗೆ ಟಿಕೆಟ್​ ನೀಡಿದ ಹಿನ್ನಲೆ ಇದಕ್ಕೆ ವಿರೋಧಿಸಿ ಕಾಂಗ್ರೆಸ್​ಗೆ ಸೇರಿದ್ದಾರೆ. ಇವರ ಜೊತೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಸೇರಿದಂತೆ 50ಕ್ಕೂ ಹೆಚ್ಚು ಜನ ಮುಖಂಡರು ಕಾಂಗ್ರೆಸ್​ ಸೇರಿದರು. ಇನ್ನು ಏಪ್ರಿಲ್ 2 (ಮಂಗಳವಾರ)ರಂದು ಅಧಿಕೃತವಾಗಿ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಸೇರ್ಪಡೆಯಾಗಲಿದ್ದಾರೆ.

ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇರುವ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಈ ಬಾರಿ ಕಾಂಗ್ರೆಸ್​ ಮೂರು ಕ್ಷೇತ್ರದಲ್ಲಿ​ ಜಯಶಾಲಿಯಾಗಿದೆ. ಹೀಗಾಗಿ ಚಿಕ್ಕಬಳ್ಳಾಪುರವನ್ನು ಕಾಂಗ್ರೆಸ್​ ಭದ್ರಕೋಟೆ ಮಾಡುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹಾಗೂ ಹೆಚ್​ಡಿ ದೇವೇಗೌಡರ ಆಪ್ತ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್​ ಯೋಚಿಸಿತ್ತು.

ಇದನ್ನೂ ಓದಿ:ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ, ಕಾಂಗ್ರೆಸ್​ ಸೇರ್ಪಡೆ ಸಾಧ್ಯತೆ

ಅದರಂತೆ ಸಚಿವ ಎಂ.ಸಿ.ಸುಧಾಕರ್ ಸೇರಿದಂತೆ ಹಲವು ನಾಯಕರು ಕೆ.ಪಿ ಬಚ್ಚೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.ಜೊತೆಗೆ ಕಾಂಗ್ರೆಸ್​ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಬಳಿಕ ಮಾತನಾಡಿದ್ದ ಬಚ್ಚೆಗೌಡ, ‘ಜೆಡಿಎಸ್ ನಾಯಕರು ನಮ್ಮ ಸಮಸ್ಯೆಗಳಿಗೆ ಸ್ಪಂದಿಸಲ್ಲ, ನಮ್ಮ ರಾಜಕೀಯ ಎದುರಾಳಿ ಡಾ. ಕೆ ಸುಧಾಕರ್ ಪರ ನಾನು ನಿಲ್ಲಲ್ಲ. ಹೀಗಾಗಿ ನಾನು ಕಾಂಗ್ರೆಸ್​ ಸೇರುತ್ತಿದ್ದೇನೆ ಎಂದು ಕೆ.ಪಿ ಬಚ್ಚೇಗೌಡ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:38 pm, Sun, 31 March 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ