AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಬಸ್ಸಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮರೆತು ಹೋದವರಿಗೆ ಹಿಂದಿರುಗಿಸಿದ ಕಂಡಕ್ಟರ್!

ರಸ್ತೆಯಲ್ಲಿ ಯಾರದ್ದಾದರೂ ಐದು ಹತ್ತು ರೂಪಾಯಿ ಬಿದ್ದರೂ, ಅದನ್ನು ಮೆಲ್ಲಗೆ ಜೇಬಿಗೆ ಹಾಕಿಕೊಂಡು ಹೋಗುವ ಹಾಗೂ ಬೇರೆಯವರ ಜೇಬಿನಿಂದಲೇ ಹಣ ಎಗರಿಸುವ ಕಾಲ ಇದು. ಇಂತಹ ಕಾಲದಲ್ಲೂ ಪ್ರಾಮಾಣಿಕರು ಇದ್ದಾರೆ ಎಂಬುದು ಚಿಕ್ಕಬಳ್ಳಾಪುರದಲ್ಲಿ (Chikkaballapur) ಸಾಬೀತಾಗಿದೆ. ದಂಪತಿಯು ಬಸ್‌ನಲ್ಲಿ ಮರೆತು ಹೋಗಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಅವರಿಗೆ ಹಿಂತಿರುಗಿಸುವ ಮೂಲಕ ಬಸ್‌ ಕಂಡಕ್ಟರ್‌ ಪ್ರಾಮಾಣಿಕತೆ ಮೆರೆದಿದ್ದಾರೆ.

ಚಿಕ್ಕಬಳ್ಳಾಪುರ: ಬಸ್ಸಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮರೆತು ಹೋದವರಿಗೆ ಹಿಂದಿರುಗಿಸಿದ ಕಂಡಕ್ಟರ್!
ಒಡವೆ ಮರೆತು ಹೋದವರಿಗೆ ವಾಪಸ್‌ ಕೊಟ್ಟ ಕಂಡಕ್ಟರ್!
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Oct 29, 2023 | 1:27 PM

Share

ಚಿಕ್ಕಬಳ್ಳಾಪುರ, (ಅಕ್ಟೋಬರ್ 29): ಈಗಿನ ಕಾಲದಲ್ಲಿ ಪ್ರಾಮಾಣಿಕತೆಯನ್ನು (Honesty) ದುರ್ಬೀನು ಹಾಕಿ ಹುಡುಕಿದರೂ ಸಿಗುವುದಿಲ್ಲ. ಎಲ್ಲೋ ಕೆಲವರು ಇದ್ದಾರೆ. ಹೌದು… ಬಸ್‌ನಲ್ಲಿ ಮರೆತು ಹೋಗಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕೆಎಸ್​ಆರ್ಟಿಸಿ ಬಸ್ ಕಂಡಕ್ಟರ್ (KSRTC bus conductor) ​ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಬೆಂಗಳೂರಿನ ಆಂಜಿನಪ್ಪ ಲೇಔಟ್‌ ನಿವಾಸಿಗಳಾದ ಪ್ರಕಾಶ್‌ ಹಾಗೂ ಪ್ರಮೀಳಾ ದಂಪತಿಗೆ ಬಸ್‌ ಕಂಡಕ್ಟರ್‌ ಚಿನ್ನಾಭರಣಗಳನ್ನು ಹಿಂತಿರುಗಿಸಿದ್ದಾರೆ. ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ತೆರಳುವ ವೇಳೆ ದಂಪತಿಯು ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಬಸ್‌ನಲ್ಲಿಯೇ ಬಿಟ್ಟು ಹೋಗಿದ್ದರು. ಒಡೆಗಳನ್ನು ನೋಡಿದ ಬಸ್‌ ಕಂಡಕ್ಟರ್‌, ಅವುಗಳನ್ನು ಸಾರಿಗೆ ಬಸ್‌ ನಿರ್ವಾಹಕ ಸಿ.ವಿ. ರಮೇಶ್‌ ಅವರಿಗೆ ನೀಡಿದ್ದಾರೆ. ಇದಾದ ಬಳಿಕ ದಂಪತಿಗೆ ಒಡವೆಗಳನ್ನು ಹಸ್ತಾಂತರಿಲಾಗಿದೆ.

ಚಿಕ್ಕಬಳ್ಳಾಪುರ (chikkaballapur) ಜಿಲ್ಲೆ ಗೌರಿಬಿದನೂರಿನ KSRTC ಘಟಕದ KA-40,F-1268 ಬಸ್ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ತೆರಳುವ ವೇಳೆ ಪ್ರಕಾಶ್‌ ಹಾಗೂ ಪ್ರಮೀಳಾ ದಂಪತಿ ಬಸ್ ನಲ್ಲಿ ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಹಾಗೂ ಒಂದು ಪೋನ್ ಮರೆತು ಹೋಗಿದ್ದರು. ಇದನ್ನು ಗಮನಿಸಿದ ಬಸ್ ಕಂಡಕ್ಟರ್ ಸಿ ವಿ ರಮೇಶ್ ಎತ್ತಿಟ್ಟುಕೊಂಡಿದ್ದರು. ನಂತರ ಪ್ರಕಾಶ್‌ ದಂಪತಿ ಚಿನ್ನಾಭರಣ ಹಾಗೂ ಫೋನ್​ ನೆನಪು ಮಾಡಿಕೊಂಡು ವಾಪಸ್ ಡಿಪೋ ಬಳಿ ಓಡೋಡಿ ಬಂದಿದ್ದಾರೆ. ಆಗ ಬಸ್ ನಿರ್ವಾಹಕರಾದ ರಮೇಶ ಪ್ರಮಾಣಿಕತೆಯಿಂದ ಬಸ್ ನಲ್ಲಿ ಸಿಕ್ಕ ಚಿನ್ನಭರಣಗಳು ಹಾಗೂ ಫೋನ್ ವಾಪಸ್ ನೀಡಿದ್ದಾರೆ.

ಬಸ್‌ನಲ್ಲಿ ಚಿನ್ನಾಭರಣ ಮರೆತುಹೋದ ದಂಪತಿಗೆ ಅವು ವಾಪಸ್‌ ಸಿಗುವುದಿಲ್ಲ ಎಂಬುದು ಖಾತ್ರಿಯಾಗಿತ್ತು. ಯಾರೂ ವಾಪಸ್‌ ಕೊಡುವುದಿಲ್ಲ ಎಂದು ಭಾವಿಸಿದ್ದರು. ಆದರೆ, ಬಸ್‌ ನಿರ್ವಾಹಕರು ಪ್ರಮಾಣಿಕತೆಯಿಂದ ಒಡವೆಗಳನ್ನು ಹಿಂತಿರುಗಿಸಿದ್ದಕ್ಕೆ ದಂಪತಿಗೆ ಖುಷಿಯಾಗಿದೆ. ಹಾಗೆಯೇ, ಒಡವೆಗಳನ್ನು ವಾಪಸ್ ಕೊಟ್ಟ ಕಂಡಕ್ಟರ್‌ಗೆ ದಂಪತಿ ಧನ್ಯವಾದ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕೆ.ಎಸ್.ಆರ್.ಟಿ.ಸಿಯ ಹಿರಿಯ ಅಧಿಕಾರಿಗಳು ಬಸ್ ನಿರ್ವಾಹಕರನ್ನು ಅಭಿನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು