AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮದಲ್ಲಿರುವ ಟಿಪ್ಪು ಅರಮನೆ ಮೇಲೆ ಬಿಷ್ಣೋಯ್ ಹೆಸರು: ಸುಮೋಟೋ ಕೇಸ್ ದಾಖಲು

ನಂದಿಗಿರಿಧಾಮದಲ್ಲಿರುವ ಟಿಪ್ಪು ಸುಲ್ತಾನ್ ಸಮ್ಮರ್​ ಪ್ಯಾಲೇಸ್ ಮೇಲೆ ಕುಖ್ಯಾತ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರನ್ನು ದೊಡ್ಡದಾಗಿ ಬರೆದ ಘಟನೆ ಸಂಬಂಧ ಸುಮೋಟೋ ಕೇಸ್​ ದಾಖಲಾಗಿದೆ. ಈ ಬಗ್ಗೆ ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಚಿಕ್ಕಬಳ್ಳಾಪುರ ಪೊಲೀಸರು, ಎಸ್ಪಿ ಕುಶಲ್ ಚೌಕ್ಸೆ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿದ್ದಾರೆ.

ನಂದಿಗಿರಿಧಾಮದಲ್ಲಿರುವ ಟಿಪ್ಪು ಅರಮನೆ ಮೇಲೆ ಬಿಷ್ಣೋಯ್ ಹೆಸರು: ಸುಮೋಟೋ ಕೇಸ್ ದಾಖಲು
Untitled Design
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Oct 28, 2025 | 4:20 PM

Share

ಚಿಕ್ಕಬಳ್ಳಾಪುರ, ಅಕ್ಟೋಬರ್​ 28: ಟಿಪ್ಪು ಅರಮನೆ ಮೇಲೆ ಬಿಷ್ಣೋಯ್  (Lawrence Bishnoi) ಹೆಸರು ಬರೆದು ವಿಕೃತಿ ಪ್ರಕರಣ ಸಂಬಂಧ ಟಿವಿ9 ವರದಿ ಬೆನ್ನಲ್ಲೇ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ನಂದಿಗಿರಿಧಾಮದಲ್ಲಿರುವ ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣ ಇಲಾಖೆ ಅಧೀನದ ಟಿಪ್ಪು ಸುಲ್ತಾನ್ ಸಮ್ಮರ್​ ಪ್ಯಾಲೇಸ್ ಮೇಲೆ ಕುಖ್ಯಾತ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್  ಹೆಸರನ್ನು ದೊಡ್ಡದಾಗಿ ಬರೆಯಲಾಗಿತ್ತು. ಇದರಿಂದ ಟಿಪ್ಪು ಸುಲ್ತಾನ್ ಅಭಿಮಾನಿಗಳು ಹಾಗೂ ಪ್ರವಾಸಿಗರು ಅಸಮಾಧಾನ ವ್ಯಕ್ತಪಡಿಸಿದ್ದರು.

ಸದ್ಯ ತಿಹಾರ್ ಜೈಲಿನಲ್ಲಿರುವ ಅಂತಾರಾಷ್ಟ್ರೀಯ ಗ್ಯಾಂಗ್​​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಹೆಸರನ್ನು ಟಿಪ್ಪು ಅರಮನೆ ಮೇಲೆ ಬರೆದಿರುವ ಬಗ್ಗೆ ಟಿವಿ9 ವರದಿ ಮಾಡಿತ್ತು. ಈ ವರದಿಯಿಂದ  ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಅಲರ್ಟ್​ ಆಗಿದ್ದು, ಎಸ್ಪಿ ಕುಶಲ್ ಚೌಕ್ಸೆ ಸೂಚನೆ ಮೇರೆಗೆ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ದುಷ್ಕರ್ಮಿಗಳು ಒಂದು ತಿಂಗಳ ಹಿಂದೆಯೇ ಬಿಷ್ಣೋಯ್​ ಹೆಸರು ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಪಿಡಿಎಲ್​ಪಿ ಹಾಗೂ ಬಿಎನ್​ಎಸ್​ ಆ್ಯಕ್ಟ್ 324(2), 329(3)ರಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಟಿಪ್ಪು ಸುಲ್ತಾನ್ ಪ್ಯಾಲೇಸ್ ಮೇಲೆ ಕುಖ್ಯಾತ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು: ಭುಗಿಲೆದ್ದ ಆಕ್ರೋಶ

ಘಟನೆ ಬಗ್ಗೆ ಚಿಕ್ಕಬಳ್ಳಾಪುರ ಎಸ್ಪಿ ಹೇಳಿದ್ದೇನು?

ಬರಹ ಅಳಿಸಿದ ಇಲಾಖೆ ಸಿಬ್ಬಂದಿ

ಟಿಪ್ಪು ಅರಮನೆ ಮೇಲೆ ದುಷ್ಕರ್ಮಿಗಳು ಬರೆದಿದ್ದ ಬರಹವನ್ನು ಪುರಾತತ್ವ ಹಾಗೂ ಸರ್ವೇಕ್ಷಣಾ ಇಲಾಖೆ ಸಿಬ್ಬಂದಿ ಅಳಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಹೆಸರಿನ ಮೇಲೆ ಬಣ್ಣವನ್ನು ಬಳಿಯಲಾಗಿದೆ. ಘಟನೆ ಸಂಬಂಧ ಸ್ಥಳದಲ್ಲಿರುವ ಸಿಸಿ ಕ್ಯಾಮರಾಗಳ ಪರಿಶೀಲನೆಯನ್ನೂ ನಡೆಸಲಾಗುತ್ತಿದ್ದು, ಶೀಘ್ರ ಆರೋಪಿಗಳ ಪತ್ತೆ ಮಾಡಿ ಕಠಿಣ ಕ್ರಮದ ಭರವಸೆಯನ್ನು ಪೊಲೀಸರು ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ