ನಂದಿಗಿರಿಧಾಮ ಪ್ರವಾಸ ಹೋಗ್ತೀರಾ? ಈ ವಿಚಾರ ತಿಳಿದಿರಲೇಬೇಕು: ಇಲ್ಲಾಂದ್ರೆ ಅಪಾಯ ಕಟ್ಟಿಟ್ಟ ಬುತ್ತಿ

ನಂದಿಗಿರಿಧಾಮ ವಿಶ್ವವಿಖ್ಯಾತ ಪ್ರವಾಸಿ ತಾಣ. ಪ್ರತಿದಿನ ಸಾವಿರಾರು ಜನ ಪ್ರವಾಸಿಗರು ಅಲ್ಲಿಗೆ ಬಂದು ಹೋಗುತ್ತಾರೆ. ಆದರೆ, ಇತ್ತೀಚಿನ ಕೆಲವು ದಿನಗಳಲ್ಲಿ ಕಂಡುಬಂದ ವಿದ್ಯಮಾನವೊಂದು ಪ್ರವಾಸಿಗರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ಭೀತಿಗೆ ಕಾರಣವಾಗಿದೆ. ಅದರಲ್ಲೂ ಮುಂಜಾನೆ ಅಥವಾ ಮುಸ್ಸಂಜೆ ಹೊತ್ತು ದ್ವಿಚಕ್ರ ವಾಹನದಲ್ಲೇನಾದ್ರೂ ನಂದಿಗಿರಿಧಾಮ ರಸ್ತೆಯಲ್ಲಿ ಹೋಗುವುದಾದ್ರೆ ಈ ವಿಚಾರ ತಿಳಿದಿರಲೇಬೇಕು.

ನಂದಿಗಿರಿಧಾಮ ಪ್ರವಾಸ ಹೋಗ್ತೀರಾ? ಈ ವಿಚಾರ ತಿಳಿದಿರಲೇಬೇಕು: ಇಲ್ಲಾಂದ್ರೆ ಅಪಾಯ ಕಟ್ಟಿಟ್ಟ ಬುತ್ತಿ
ನಂದಿ ಹಿಲ್ಸ್
Edited By:

Updated on: Sep 02, 2025 | 10:51 AM

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 2: ವಾರಾಂತ್ಯ ಬಂತೆಂದರೆ ಸಾಕು, ಬೆಂಗಳೂರಿನ ಹೆಚ್ಚಿನವರು ಭೇಟಿ ನೀಡುವ ನೆಚ್ಚಿನ ತಾಣ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ವಿಶ್ವವಿಖ್ಯಾತ ಪ್ರವಾಸಿತಾಣ ನಂದಿಗಿರಿಧಾಮ (Nandi Hills) . ಆದರೆ, ಇದೀಗ ನಂದಿಗಿರಿಧಾಮಕ್ಕೆ ಸಂಜೆ ವೇಳೆ ಅಥವಾ ಮುಂಜಾನೆ ಹೋಗುವುದಾದರೆ, ಅದೂ ದ್ವಿಚಕ್ರ ವಾಹನದಲ್ಲಿ ಹೋಗುವುದಾದರೆ ಬಹಳ ಎಚ್ಚರಿಕೆ ಅಗತ್ಯ. ಬೆಟ್ಟದ ಕ್ರಾಸ್​​ನಿಂದ ಚಿಕ್ಕಬಳ್ಳಾಪುರದ ಕಡೆ ಬರುವ ರಸ್ತೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಇತ್ತೀಚೆಗೆ ಚಿರತೆ ಕಾಣಿಸುವುದು ಹೆಚ್ಚಾಗಿದೆ. ಚಿಕ್ಕಬಳ್ಳಾಪುರದ ನಿವಾಸಿಯೊಬ್ಬರು ನಂದಿಗಿರಿಧಾಮಕ್ಕೆ ಹೋಗಿ ವಾಪಸ್ ಬರುವಾಗ ಅವರ ಕಾರಿಗೆ ಚಿರತೆ ಅಡ್ಡ ಬಂದಿದೆ.

ಚಿರತೆ ಹಾವಳಿ ಹೆಚ್ಚಾಗಿರುವುದರಿಂದ ಚಿಕ್ಕಬಳ್ಳಾಪುರ ನಂದಿಗಿರಿಧಾಮದ ರಸ್ತೆಯಲ್ಲಿ ರಾತ್ರಿಯಾದರೆ ಬೈಕ್ ಸವಾರರು ರಸ್ತೆಯಲ್ಲಿ ಸಂಚಾರ ಮಾಡುವುದನ್ನೇ ಬಿಟ್ಟಿದ್ದಾರೆ. ರಾತ್ರಿಯಾದರೆ ಸಾಕು ಚಿರತೆ ಭೀತಿ ಭಯ ಕಾಡುತ್ತಿದೆ ಎಂದು ಸ್ಥಳೀಯ ನಿವಾಸಿ ವೆಂಕಟೇಶ ಎಂಬವರು ತಿಳಿಸಿದ್ದಾರೆ.

ರೈತರೊಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆ ಹಿಂಡು

ಇತ್ತೀಚಿಗೆ ಚಿಕ್ಕಬಳ್ಳಾಪುರ ತಾಲೂಕಿನ ವರ್ಲಕೊಂಡ ಬೆಟ್ಟದ ಬಳಿ, ಚಿರತೆಗಳ ಹಿಂಡು ಪ್ರತ್ಯೇಕ್ಷವಾಗಿ ರೈತರೊಬ್ಬರ ಮೇಲೆ ದಾಳಿ ಮಾಡಿತ್ತು. ಅದಾದ ನಂತರ ತಪ್ಪಿಸಿಕೊಂಡಿದ್ದ ಕೆಲವು ಚಿರತೆಗಳು ಎಲ್ಲಿವೆ ಎಂಬ ಮಾಹಿತಿ ತಿಳಿದಿರಲಿಲ್ಲ. ಆದರೆ, ಈಗ ನಂದಿಗಿರಿಧಾದ ಸುತ್ತಮುತ್ತ ಚಿರತೆಗಳು ಗಿರಕಿ ಹೊಡೆಯುತ್ತಿವೆ. ಅಲ್ಲಲ್ಲಿ ಸ್ಥಳೀಯರ ಕಣ್ಣಿಗೆ ಕಾಣಿಸುತ್ತಿವೆ. ಚಿಕ್ಕಬಳ್ಳಾಪುರ ತಾಲೂಕಿನ ಅಂಗಟ್ಟ, ಈರೇನಹಳ್ಳಿ ಸೇರಿದಂತೆ ಮೊಕ್ಷಗುಂಡಂ ಸರ್ ಎಂ. ವಿಶ್ವೇಶ್ವರಯ್ಯ ಮಾಸ್ಟರ್ ತರಬೇತಿ ಕೇಂದ್ರದ ಸುತ್ತಮುತ್ತ ಚಿರತೆಗಳು ಪತ್ತೆಯಾಗಿವೆ. ಇದರಿಂದ ಸ್ಥಳೀಯರು ಸಂಜೆಯಾದ ನಂತರ ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಚಿರತೆಗಳನ್ನು ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಇಬ್ಬರು ಸಾವು

ಚಿರತೆಗಳು ಪ್ರವಾಸಿಗರು ಹಾಗೂ ಸ್ಥಳಿಯರ ಮೇಲೆ ದಾಳಿ ಮಾಡುವುದಕ್ಕೂ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us