AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲದ ಹುಂಡೀಲಿ ಲವ್​​ ಲೆಟರ್​, ಫೋಟೋ: ಪ್ರೀತಿಸಿದ ಹುಡುಗಿ ಸಿಗಲಿ ಭಗವಂತ ಎಂದ ಭಕ್ತ!

ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದ ಹುಂಡಿ ಎಣಿಕೆ ವೇಳೆ ಆಡಳಿತ ಮಂಡಳಿಗೆ ಅಚ್ಚರಿ ಕಾದಿತ್ತು. 15 ಲಕ್ಷ ಕಾಣಿಕೆ ಹಣದ ಜೊತೆಗೆ ಪ್ರೇಮಿಗಳ ಪೋಟೋ, ಲವ್ ಲೆಟರ್ ಹಾಗೂ ವೈಯಕ್ತಿಕ ಬೇಡಿಕೆಗಳ ಪತ್ರಗಳು ಪತ್ತೆಯಾಗಿವೆ. ಪ್ರೇಮ ವಿವಾಹಕ್ಕೆ ಒಪ್ಪಿಗೆ, ಕೆಲಸ, ಮಕ್ಕಳ ಭವಿಷ್ಯ ಹೀಗೆ ನಾನಾ ಬೇಡಿಕೆಗಳನ್ನು ಬರೆದು ಭಕ್ತರು ಹುಂಡಿಗೆ ಹಾಕಿದ್ದಾರೆ.

ದೇಗುಲದ ಹುಂಡೀಲಿ ಲವ್​​ ಲೆಟರ್​, ಫೋಟೋ: ಪ್ರೀತಿಸಿದ ಹುಡುಗಿ ಸಿಗಲಿ ಭಗವಂತ ಎಂದ ಭಕ್ತ!
ದೇಗುಲದ ಹುಂಡಿಯಲ್ಲಿ ಚಿತ್ರ ವಿಚಿತ್ರ ಲೆಟರ್​​ಗಳು ಪತ್ತೆ.
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಪ್ರಸನ್ನ ಹೆಗಡೆ|

Updated on: Dec 02, 2025 | 7:00 PM

Share

ಚಿಕ್ಕಬಳ್ಳಾಪುರ, ಡಿಸೆಂಬರ್​​ 02: ನಂದಿ ಹಿಲ್ಸ್​​… ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರೋ ಈ ಪ್ರದೇಶ ಪ್ರೇಮಿಗಳ ಫೆವರೇಟ್​​ ಜಾಗ. ವೀಕೆಂಡ್​​ ಬಂತಂದ್ರೆ ಸಾಕು ಎಲ್ಲಿ ನೋಡಿದ್ರೂ ಬರಿ ಕಪಲ್ಸ್​​ ಕಾಣುವ ಈ ಜಾಗದ ಸಮೀಪವೇ ಪುರಾಣ ಪ್ರಸಿದ್ದ ಶಿವನ ದೇವಸ್ಥಾನ ಇದೆ. ಹೀಗಾಗಿ ನಂದಿ ಹಿಲ್ಸ್​​ಗೆ ಹೋಗುವ ಬಹುತೇಕರು ಇಲ್ಲಿಗೂ ಭೇಟಿ ನೀಡ್ತಾರೆ. ಇದೇ ದೇವಾಲಯದ ಹುಂಡಿಯಲ್ಲೀಗ ಪ್ರೇಮಿಗಳ ಪೋಟೋ, ಲವ್ ಲೆಟರ್​​ ಸೇರಿದಂತೆ ಚಿತ್ರ ವಿಚಿತ್ರ ನಿವೇದನೆಗಳ ಪತ್ರಗಳು ಪತ್ತೆಯಾಗಿವೆ.

ಪ್ರೇಮ ವಿವಾಹಕ್ಕೆ ಖ್ಯಾತಿ ಪಡೆದಿರೋ ನಂದಿ ಗಿರಿಧಾಮದ ತಪ್ಪಲಿನಲ್ಲಿನಲ್ಲಿರುವ ಭೋಗನಂದೀಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯಕ್ಕೆ ಆಡಳಿತ ಮಂಡಳಿ ಮುಂದಾಗಿದೆ. ಸುಮಾರು 15 ಲಕ್ಷ ರೂಪಾಯಿ ಕಾಣಿಕೆಯ ಜೊತೆಗೆ ಪ್ರೇಮ ನಿವೇದನೆ ಸೇರಿ ದೇವರಿಗೆ ಸಲ್ಲಿಸಿರುವ ಹಲವು ಬೇಡಿಕೆಯ ಪತ್ರಗಳು ಕಂಡುಬಂದಿವೆ. ಮಹಿಳೆಯೋರ್ವರ ಫೋಟೋ ಹಿಂದೆ ಪದ್ಮಾ ಮತ್ತೆ ತಿರುಗಿ ಬಾ ಎನ್ನುವ ಪ್ರೇಮ ನಿವೇದನೆಯ ಬರಹ ಇದೆ. ಮತ್ತೊಂದು ಚೀಟಿಯಲ್ಲಿ, ನಾನು ಪ್ರೀತಿಸುತ್ತಿರುವ ಹುಡುಗಿಯ ತಂದೆ-ತಾಯಿ ನಮ್ಮನ್ನ ಸಂಪೂರ್ಣ ಮುಕ್ತ ಮನಸ್ಸಿನಿಂದ ಒಪ್ಪುವಂತೆ ಮಾಡು ಭಗವಂತ. ನಾನು ಅವಳನ್ನ ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತೇನೆ, ಯಾವುದೇ ತೊಂದರೆ ಆಗದೇ ಒಪ್ಪುವಂತೆ ಮಾಡು ಎಂದು ಬರೆಯಲಾಗಿದೆ. ಮತ್ತೊಂದಿಷ್ಟು ಚೀಟಿಯಲ್ಲಿ ನನ್ನ ಗಂಡನಿಗೆ ಒಳ್ಳೆಯ ಕೆಲಸ ಸಿಗಲಿ, ನನ್ನ ಮಗ ಚೆನ್ನಾಗಿ ಓದಲಿ ಎಂದು ಬರೆದಿರೋದು ಕಂಡುಬಂದಿದೆ.

ಇದನ್ನೂ ಓದಿ: ಪ್ರೀತಿಸುತ್ತಿರುವ ಹುಡುಗಿಯ ತಂದೆ-ತಾಯಿಗೆ ಒಳ್ಳಿ ಬುದ್ದಿ ಕೊಡಿ, ದೇವಸ್ಥಾನ ಹುಂಡಿಯಲ್ಲಿ ವಿಚಿತ್ರ ಪತ್ರಗಳು ಪತ್ತೆ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರೋ ದೇಗುಲದ ಕಾರ್ಯನಿರ್ವಹಣಾ ಅಧಿಕಾರಿ ರುಕ್ಮಿಣಿ, ಹರಕೆ ಕಾಣಿಕೆಯ ಜೊತೆ ಕೆಲವು ಭಕ್ತರು ತಮ್ಮ ಬೇಡಿಕೆಗಳನ್ನು ಬರಹದ ಮುಖೇನ ಸಲ್ಲಿಸಿರೋದು ಕಂಡುಬಂದಿದೆ. ಕೆಲವು ಭಕ್ತರು ಬರೆದಿರುವ ಬರಹಗಳು ನಮಗೆ ನಗಣ್ಯ ಅನಿಸಬಹುದು. ಆದರೆ ಅದು ಅವರ ಪಾಲಿಗೆ ದೊಡ್ಡದಿರಬಹುದು. ಹುಂಡಿಯಲ್ಲಿ ಸಿಕ್ಕ ಎಲ್ಲ ಚೀಟಿಗಳನ್ನು ನಾವು ನೋಡಿಲ್ಲ. ಅವುಗಳನ್ನು ಎತ್ತಿಟ್ಟಿದ್ದೇವೆ. ಸಣ್ಣ ಪ್ರಮಾಣದಲ್ಲಿ ಚಿನ್ನ ಮತ್ತು ಬೆಳ್ಳಿಗಳೂ ಹುಂಡಿಯಲ್ಲಿ ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ