AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಓಡಿ ಹೋಗಿ ಮದ್ವೆ: ಯುವಕನ ತಾಯಿಯನ್ನ ಬೆಂಕಿ ಹಚ್ಚಿ ಸುಟ್ಟ ಯುವತಿ ಕುಟುಂಬ!

ಮಗಳು ಪ್ರೀತಿಸಿದಾತನೊಂದಿಗೆ ಓಡಿಹೋಗಿದ್ದರಿಂದ ಮನನೊಂದ ತಂದೆ ಊರಿಗೆ ಊಟ ಹಾಕಿಸಿ, ತಿಥಿ ಕಾರ್ಯ ನೆರವೇರಿಸಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ. ಈ ಮೂಲಕ ತಮ್ಮ ಪಾಲಿಗೆ ಮಗಳು ಇಲ್ಲ ಎಂದು ಮೈತೊಳೆದುಕೊಂಡಿದ್ದಾರೆ. ಮತ್ತೊಂದೆಡೆ ಜೋಡಿವೊಂದು ಓಡಿ ಹೋಗಿ ಮದುವೆಯಾಗಿದ್ದಕ್ಕೆ ರೊಚ್ಚಿಗೆದ್ದ ಯುವತಿ ಕಟುಂಬಸ್ಥರು ಯುವಕನ ತಾಯಿಗೆ ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಪ್ರೀತಿಸಿ ಓಡಿ ಹೋಗಿ ಮದ್ವೆ: ಯುವಕನ ತಾಯಿಯನ್ನ ಬೆಂಕಿ ಹಚ್ಚಿ ಸುಟ್ಟ ಯುವತಿ ಕುಟುಂಬ!
ಬಯ್ಯಮ್ಮ, ಅಂಬರೀಶ್-ಪ್ರತಿಭಾ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Oct 12, 2025 | 5:06 PM

Share

ಚಿಕ್ಕಬಳ್ಳಾಪುರ, (ಅಕ್ಟೋಬರ್ 12): ತಮ್ಮ ಇಚ್ಛೆಗೆ ವಿರುದ್ಧವಾಗಿ ಓಡಿಹೋಗಿ ಪ್ರಿಯಕರೊಂದಿಗೆ ಮದ್ವೆಯಾದ (Marriage) ಮಗಳ ತಿಥಿ ಮಾಡಿದ ವ್ಯಕ್ತಿಯೊಬ್ಬರು, ಮಗಳು ತಮ್ಮ ಪಾಲಿಗೆ ಸತ್ತು ಹೋದಳೆಂದು ಇಡೀ ಊರಿಗೆ ತಿಥಿ ಊಟ ಹಾಕಿಸಿದ್ದಾರೆ. ಈ ವಿಚಿತ್ರ ಘಟನೆ ಬೆಳಗಾವಿಯ (Belagavi) ರಾಯಭಾಗದ ನಾಗರಾಳ ಗ್ರಾಮದಲ್ಲಿ ನಡೆದಿದೆ. ಈ ಘಟನೆ ನಡೆದ ಒಂದೇ ದಿನದಲ್ಲಿ ಜೋಡಿಯೊಂದು ಮನೆಬಿಟ್ಟು ಓಡಿ ಹೋಗಿ ಮದುವೆಯಾಗಿದ್ದಕ್ಕೆ ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಯುವಕನ ತಾಯಿಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರದ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಸಂಗಟಪಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಸಂಗಟಪಲ್ಲಿ ಗ್ರಾಮದ ಅಂಬರೀಶ ಹಾಗೂ ಸಿಂಗಪ್ಪಗಾರಿಪಲ್ಲಿಯ ಪ್ರತಿಭಾ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಲು ತೀರ್ಮಾನಿಸಿದ್ದರು. ಆದ್ರೆ ಇಬ್ಬರ ಮದುವೆಗೆ ಪ್ರತಿಭಾ ಮನೆಯವರು ತೀವ್ರ ವಿರೋಧ ವ್ಯೆಕ್ತಪಡಿಸಿದ್ದರು. ಆದರೂ ಸಹ ಪ್ರತಿಭಾ ಮನೆಯವರ ವಿರೋಧದ ನಡುವೆಯೂ ಓಡಿ ಹೋಗಿ ದೇವಸ್ಥಾನವೊಂದರಲ್ಲಿ ಅಂಬರೀಶನಿಂದ ತಾಳಿ ಕಟ್ಟಿಸಿಕೊಂಡು ಸಪ್ತಪದಿ ತುಳಿದಿದ್ದಾಳೆ.

ಇದನ್ನೂ ಓದಿ: ಲವ್ವರ್ ಜತೆ ಮಗಳು ಪರಾರಿ: ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!

-ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ರೊಚ್ಚಿಗೆದ್ದ ಪ್ರತಿಭಾ ಮನೆ ಕಡೆಯವರು, ಯುವಕ ಅಂಬರೀಶನ ಮನೆಯ ಮುಂದೆ ಹೋಗಿ ಗಲಾಟೆ ಮಾಡಿದ್ದಾರೆ.ಅಲ್ಲದೇ ತಮ್ಮ ಮಗಳ ಬಟ್ಟೆ-ಬರೆ ಹಾಗೂ ಪುಸ್ತಕಗಳನ್ನು ತಂದು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಮುಂದಾಗಿದ್ದರು. ಇದೇ ವೇಳೆ ಅಂಬರೀಶ ತಾಯಿ ಬಯ್ಯಮ್ಮ ಅಡ್ಡ ಹೋಗಿದ್ದಾಳೆ. ಆ ವೇಳೆ ಪ್ರತಿಭಾ ಪೋಷಕರು, ಬಯ್ಯಮ್ಮ ಮೇಲೆಯೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಬಯ್ಯಮ್ಮ ಗಂಭಿರ ಗಾಯಗೊಂಡಿದ್ದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಇತ್ತ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಠಾಣೆ ಪೊಲೀಸರು, ಪ್ರತಿಭಾಳ ಪೋಷಕರ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಂದೆಯ ಸಾವಿನ ನೋವಲ್ಲೇ ಮಗಳು ಆತ್ಮಹತ್ಯೆ

ಚಿಕ್ಕಬಳ್ಳಾಪುರ: ತಂದೆಯ ಸಾವಿನಿಂದ ಮನನೊಂದ ಮಗಳು ತಂದೆಯಂತೆ ಆತ್ಮಹತ್ಯೆ ಮಾಡಿಕೊಂಡು ಸಾವಿನ ಮನೆ ಸೇರಿರುವ ಮನಕಲಕುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯ 22 ವರ್ಷದ ಸ್ವರ್ಣ ಮೃತರು. ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ, ಎಂಎಸ್ಸಿ ಪದವಿ ವ್ಯಾಸಂಗ ಮಾಡ್ತಿದ್ದ ಸ್ವರ್ಣ, ಕಾಲೇಜಿನ ಹಾಸ್ಟೆಲ್ ನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನಂತರ ಗೌರಿಬಿದನೂರಿನ ಮನೆಗೆ ಬಂದಿದ್ದ ಸ್ವರ್ಣಳನ್ನು ಆಕೆಯ ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಮಗಳು ಸ್ವರ್ಣ ನಿನ್ನೆ ತಡರಾತ್ರಿ ಸಾವನ್ನಪ್ಪಿದ್ದಾಳೆ.

ಇನ್ನೂ ಈಕೆಯ ತಂದೆ ಕಳೆದ 3 ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು ಎನ್ನಲಾಗಿದೆ. ತಂದೆಯ ಸಾವಿನಿಂದ ಮಾನಸಿಕವಾಗಿ ಕುಗ್ಗಿ ಹೋಗಿ ಖಿನನೆತೆಗೆ ಒಳಗಾಗಿದ್ದ ಸ್ವರ್ಣ, ಸೂಸೈಡ್ ಮಾಡಿಕೊಂಡು ಈಗ ತಂದೆಯ ಹಾದಿ ಹಿಡಿದಿದ್ದಾಳೆ. ಗಂಡ ಮತ್ತೊಂದೆಡೆ ಈಗ ಮಗಳನ್ನು ಕಳೆದುಕೊಂಡು ಇರೋ ಮಗನೊಂದಿಗೆ ತಾಯಿ ದಿಕ್ಕು ತೋಚದಂತಾಗಿದ್ದಾಳೆ.

ಇನ್ನೂ ಅಕ್ಕನ ಸಾವಿನಿಂದ ತಮ್ಮ ಸಹ ಕುಗ್ಗಿ ಹೋಗಿದ್ದು, ತಾಯಿಗೆ ಆತಂಕ ಭಯ ಮೂಡಿಸಿದೆ. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸರು, ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಮೃತ ಸ್ವರ್ಣ ತಾಯಿ ಬಳಿ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 5:03 pm, Sun, 12 October 25

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ