AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ನೀಲಗಿರಿ ಮರದಲ್ಲಿ ಅನುಮಾನಸ್ಪದವಾಗಿ ಶವ ಪತ್ತೆ -ಕೊಲೆಯೊ, ಆತ್ಮಹತ್ಯೆಯೊ ಅನ್ನೊ ಅನುಮಾನ

ಮೃತ ವ್ಯಕ್ತಿ ಬಸವರಾಜ್ ಮೃದು ಸ್ವಾಭಾವದವನಾಗಿದ್ದು, ಯಾರೊಂದಿಗೂ ಜಗಳ ದ್ವೇಷ ಅಸೂಯೆ ಹೊಂದಿಲ್ಲವಂತೆ. ಆದ್ರೂ... ಏಕೆ ತಿರ್ನಹಳ್ಳಿ ಗ್ರಾಮದ ಬಳಿ ನೀಲಗಿರಿ ಮರದ ಬಳಿ ಹೋದ? ತಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾನೊ... ಅಥವಾ ಯಾರಾದರೂ ಕೊಲೆ ಮಾಡಿ ಶವಕ್ಕೆ ನೇಣು ಬಿಗಿದಿದ್ದಾರೊ...

Chikkaballapur: ನೀಲಗಿರಿ ಮರದಲ್ಲಿ ಅನುಮಾನಸ್ಪದವಾಗಿ ಶವ ಪತ್ತೆ -ಕೊಲೆಯೊ, ಆತ್ಮಹತ್ಯೆಯೊ ಅನ್ನೊ ಅನುಮಾನ
ನೀಲಗಿರಿ ಮರದಲ್ಲಿ ಅನುಮಾನಸ್ಪದವಾಗಿ ಶವ ಪತ್ತೆ
TV9 Web
| Edited By: |

Updated on:Dec 16, 2022 | 11:04 AM

Share

ಮದುವೆಯಾಗಿ, ಹೆಂಡತಿ ಹಾಗೂ ಇಬ್ಬರು ಮುದ್ದಾದ ಮಕ್ಕಳು ಇದ್ರೂ… ವ್ಯಕ್ತಿಯೊರ್ವ ಶವವಾಗಿ ಪತ್ತೆಯಾಗಿದ್ದಾನೆ. ನೀಲಗಿರಿ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು (death), ಹಲವು ಮಾನುಮಾನಗಳಿಗೆ ಕಾರಣವಾಗಿದೆ. ವ್ಯಕ್ತಿಯ ಸಾವು ಕೊಲೆಯೊ… ಇಲ್ಲ ಆತ್ಮಹತ್ಯೆಯೊ… ಅನ್ನೊ ಅನುಮಾನ ಮೂಡಿದೆ. ಅಷ್ಟಕ್ಕೂ ಅದೇಲ್ಲಿ ಅಂತೀರಾ ಈ ವರದಿ ನೋಡಿ! ನೀಲಗಿರಿ ಮರವೊಂದರಲ್ಲಿ ಹತ್ತಿ ನೇಣಿಗೆ ಶರಣಾದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ (man) ಶವ ಪತ್ತೆಯಾಗಿರುವುದು ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ತಿರ್ನಹಳ್ಳಿ ಗ್ರಾಮದ ನೀಲಗಿರಿ ತೋಪಿನಲ್ಲಿ. ನಿನ್ನೆ ಗುರುವಾರ ಬೆಳಗ್ಗೆ ಗ್ರಾಮದ ಜನ ಬಹಿರ್ದೆಸೆಗೆ ಹೋಗಿದ್ದಾಗ ನೀಲಗಿರಿ ಮರದಲ್ಲಿ ಶವ (hanging) ಜೋತಾಡುತ್ತಿರುವುದುನ್ನು ಗಮನಿಸಿ ನಂದಿಗಿರಧಾಮ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ರು. ಮೃತ ವ್ಯಕ್ತಿಯ (dead body) ಮೈಮೇಲೆ ಶರ್ಟ್ ಇರಲಿಲ್ಲ, ಪ್ಯಾಂಟ್ ಇದ್ದು, ಅದು ಹರಿದ ಸ್ಥಿತಿಯಲ್ಲಿ ಇತ್ತು.

ಸ್ಥಳಕ್ಕೆ ಬಂದ ನಂದಿಗಿರಿಧಾಮ ಠಾಣೆ ಪೊಲೀಸರು ಸ್ಥಳಕ್ಕೆ ಪರಿಶೀಲನೆ ನಡೆಸಿದ್ರೆ… ಮೃತನ ಗುರುತು ಪತ್ತೆಯಾಗಿರಲಿಲ್ಲ. ಆದ್ರೆ ಮೃತನ ಪ್ಯಾಂಟ್ ಶರ್ಟನಲ್ಲಿ ಎ.ಟಿ.ಎಂ ಕಾರ್ಡ ಇದ್ದು ಅದನ್ನು ಪರಿಶೀಲನೆ ನಡೆಸಿದಾಗ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರ ಬಾಗಿಲು ನಿವಾಸಿ 42 ವರ್ಷದ ಕೆ.ಬಸವರಾಜ್ ಎಂದು ಗುರುತು ಪತ್ತೆಯಾಗಿದೆ.

Also Read: ಪ್ರೀತಿಸಿದ ಹುಡುಗಿಯ ಬೈಕ್ ಸುಟ್ಟು ಹಾಕಿದ ಪಾಗಲ್ ಪ್ರೇಮಿ

ಮೃತ ಬಸವರಾಜ್, ನಗರದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ, ಮೃತನಿಗೆ ಮದುವೆಯಾಗಿದ್ದು ಪತ್ನಿ ಮೀನಾ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ನಿನ್ನೆ ಬೆಳಿಗ್ಗೆ ಶರ್ಟ ಧರಿಸದೆ ಪತ್ನಿಯ ದುಪ್ಪಟ್ಟನ್ನು ಕತ್ತಲ್ಲಿ ಹಾಕಿಕೊಂಡು, ಮನೆಯಿಂದ ಹೊರ ಹೋದವನು ವಾಪಸ್ ಮನೆಗೆ ಬಂದಿಲ್ಲ. ಪತ್ನಿ ಹಾಗೂ ಸಂಬಂಧಿಗಳು ಬಸವರಾಜ್ ನನ್ನು ಹುಡುಕುತ್ತಿರುವಾಗಲೇ… ಸಾಯಂಕಾಲ ಪೊಲೀಸರು ಹೇಳಿದ ಸುದ್ದಿ ಕೇಳಿ ಮೃತನ ಪತ್ನಿ ಮೀನಾ ದುಃಖತಪ್ತಳಾಗಿದ್ದಾರೆ.

ಮತ್ತೊಂದೆಡೆ ಮೃತ ವ್ಯಕ್ತಿ ಬಸವರಾಜ್ ತುಂಬಾ ಮೃದು ಸ್ವಾಭಾವದವನಾಗಿದ್ದು, ಯಾರೊಂದಿಗೂ ಜಗಳ ದ್ವೇಷ ಅಸೂಯೆ ಹೊಂದಿಲ್ಲವಂತೆ. ಆದ್ರೂ… ಏಕೆ ತಿರ್ನಹಳ್ಳಿ ಗ್ರಾಮದ ಬಳಿ ನೀಲಗಿರಿ ಮರದ ಬಳಿ ಹೋದ? ತಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾನೊ… ಅಥವಾ ಯಾರಾದರೂ ಕೊಲೆ ಮಾಡಿ ಶವಕ್ಕೆ ನೇಣು ಬಿಗಿದಿದ್ದಾರೊ… ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ.

ವರದಿ: ಭೀಮಪ್ಪ ಪಾಟೀಲ್, ಟಿವಿ 9, ಚಿಕ್ಕಬಳ್ಳಾಪುರ

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Fri, 16 December 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?