AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತು ಸೀಳಿ ಮೂರು ವರ್ಷದ ಬಾಲಕನ ಬರ್ಬರ ಕೊಲೆ; ಆರೋಪಿ ಚಿಕ್ಕಪ್ಪನಿಗಾಗಿ ಪೊಲೀಸರ ಹುಡುಕಾಟ

ಸ್ವತಃ ಚಿಕ್ಕಪ್ಪನೇ ಮೂರು ವರ್ಷದ ಅಣ್ಣನ ಮಗನನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಗೌತಮ್‌ ನನ್ನು ಮನೆಯ ಬಳಿ ಇರುವ ಪಾಳುಬಿದ್ದ ಹಳೆಯ ಮನೆಯೊಂದರೊಳಗೆ ಕರೆದೊಯ್ದು ಕತ್ತು ಕೊಯ್ದು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ಕತ್ತು ಸೀಳಿ ಮೂರು ವರ್ಷದ ಬಾಲಕನ ಬರ್ಬರ ಕೊಲೆ; ಆರೋಪಿ ಚಿಕ್ಕಪ್ಪನಿಗಾಗಿ ಪೊಲೀಸರ ಹುಡುಕಾಟ
ಕೊಲೆ ಆರೋಪಿ ರಂಜಿತ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jun 20, 2024 | 8:43 AM

Share

ಚಿಕ್ಕಬಳ್ಳಾಪುರ, ಜೂನ್.20: ಮೂರು ವರ್ಷದ ಮಗುವಿನ ಕತ್ತು ಕೊಯ್ದು ಕೊಲೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಂತಾಮಣಿ ತಾಲೂಕಿನ ಮುರುಗಮಲ್ಲ ಹೋಬಳಿ ನಂದಿಗಾನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿಮ್ಮಕಾಯಲಹಳ್ಳಿಯ ಗ್ರಾಮದ ಶಿರಿಷ, ಮಂಜುನಾಥ ದಂಪತಿ ಪುತ್ರ ಗೌತಮ್ (3) ಹತ್ಯೆಯಾದ ಮಗು. ಅದೇ ಗ್ರಾಮದ ಸ್ವತಃ ಮಗುವಿನ ಚಿಕ್ಕಪ್ಪ ರಂಜಿತ್ (30) ಕೊಲೆ ಆರೋಪಿ.

ಎಂದಿನಂತೆ ಅಣ್ಣ ಮಂಜುನಾಥ ಅವರ ಮನೆಗೆ ಬಂದ ಆರೋಪಿ ರಂಜಿತ್ ಊಟ ಮಾಡಿ ಸಂಜೆ ಐದು ಗಂಟೆ ಸಮಯದಲ್ಲಿ ಗೌತಮ್‌ ನನ್ನು ಮನೆಯ ಬಳಿ ಇರುವ ಪಾಳುಬಿದ್ದ ಹಳೆಯ ಮನೆಯೊಂದರೊಳಗೆ ಕರೆದೊಯ್ದು ಕತ್ತು ಕೊಯ್ದು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಮಂಜುನಾಥ ಅವರ ಚಿಕ್ಕಪ್ಪನ ಮಗನಾಗಿರುವ ಆರೋಪಿ ರಂಜಿತ್, ಎಂಜಿನಿಯರಿಂಗ್ ಪದವೀಧರ. ಮೂರು ತಿಂಗಳಿಂದಲೂ ನಿಮ್ಮಕಾಯಲಹಳ್ಳಿಯಲ್ಲಿ ಮನೆ ನಿರ್ಮಿಸುತ್ತಿದ್ದ ರಂಜಿತ್, ಮಂಜುನಾಥ ಅವರ ಮನೆಯಲ್ಲಿ ವಾಸವಿದ್ದು,ಅಲ್ಲೆ ಊಟ ತಿಂಡಿ ಮಾಡುತ್ತಿದ್ದ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿಗಳಾದ ಡಿ ಎಲ್ ನಾಗೇಶ್.ಅಡಿಷನಲ್ ಎಸ್ಪಿ ಖಾಸಿಂ ಖಾನ್.ಡಿ ವೈ ಎಸ್ ಪಿ. ಪಿ ಮುರಳೀಧರ.ಬಟ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ,ಪರಿಶೀಲನೆ ನಡೆಸಿ, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಮನೆಯನ್ನೇ ಪಾರ್ಕ್ ಮಾಡಿದ ಪರಿಸರ ಪ್ರೇಮಿ; 250ಕ್ಕೂ ಹೆಚ್ಚು ಬಗೆಯ ಗಿಡಗಳ ಹಸಿರ ಮನೆ

ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ತೆರಳಿದ್ದ ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಶಿವಮೊಗ್ಗ ಮೂಲದ ಅಫ್ದಾಖಾನ್, ಆದೀಲ್, ಸಾಜೀದ್ ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ತೆರಳಿದ್ದರು. ಆದ್ರೆ, ನೆಟ್​ವರ್ಕ್ ಇಲ್ಲದೆ ಮೂವರು ಸಂಪರ್ಕಕ್ಕೆ ಸಿಗಲಿಲ್ಲ. ಹೀಗಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ನಡೆಸಲಾಗ್ತಿದೆ. ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:26 am, Thu, 20 June 24

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ