ಕತ್ತು ಸೀಳಿ ಮೂರು ವರ್ಷದ ಬಾಲಕನ ಬರ್ಬರ ಕೊಲೆ; ಆರೋಪಿ ಚಿಕ್ಕಪ್ಪನಿಗಾಗಿ ಪೊಲೀಸರ ಹುಡುಕಾಟ

ಸ್ವತಃ ಚಿಕ್ಕಪ್ಪನೇ ಮೂರು ವರ್ಷದ ಅಣ್ಣನ ಮಗನನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಗೌತಮ್‌ ನನ್ನು ಮನೆಯ ಬಳಿ ಇರುವ ಪಾಳುಬಿದ್ದ ಹಳೆಯ ಮನೆಯೊಂದರೊಳಗೆ ಕರೆದೊಯ್ದು ಕತ್ತು ಕೊಯ್ದು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ಕತ್ತು ಸೀಳಿ ಮೂರು ವರ್ಷದ ಬಾಲಕನ ಬರ್ಬರ ಕೊಲೆ; ಆರೋಪಿ ಚಿಕ್ಕಪ್ಪನಿಗಾಗಿ ಪೊಲೀಸರ ಹುಡುಕಾಟ
ಕೊಲೆ ಆರೋಪಿ ರಂಜಿತ್
Follow us
| Updated By: ಆಯೇಷಾ ಬಾನು

Updated on:Jun 20, 2024 | 8:43 AM

ಚಿಕ್ಕಬಳ್ಳಾಪುರ, ಜೂನ್.20: ಮೂರು ವರ್ಷದ ಮಗುವಿನ ಕತ್ತು ಕೊಯ್ದು ಕೊಲೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಂತಾಮಣಿ ತಾಲೂಕಿನ ಮುರುಗಮಲ್ಲ ಹೋಬಳಿ ನಂದಿಗಾನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿಮ್ಮಕಾಯಲಹಳ್ಳಿಯ ಗ್ರಾಮದ ಶಿರಿಷ, ಮಂಜುನಾಥ ದಂಪತಿ ಪುತ್ರ ಗೌತಮ್ (3) ಹತ್ಯೆಯಾದ ಮಗು. ಅದೇ ಗ್ರಾಮದ ಸ್ವತಃ ಮಗುವಿನ ಚಿಕ್ಕಪ್ಪ ರಂಜಿತ್ (30) ಕೊಲೆ ಆರೋಪಿ.

ಎಂದಿನಂತೆ ಅಣ್ಣ ಮಂಜುನಾಥ ಅವರ ಮನೆಗೆ ಬಂದ ಆರೋಪಿ ರಂಜಿತ್ ಊಟ ಮಾಡಿ ಸಂಜೆ ಐದು ಗಂಟೆ ಸಮಯದಲ್ಲಿ ಗೌತಮ್‌ ನನ್ನು ಮನೆಯ ಬಳಿ ಇರುವ ಪಾಳುಬಿದ್ದ ಹಳೆಯ ಮನೆಯೊಂದರೊಳಗೆ ಕರೆದೊಯ್ದು ಕತ್ತು ಕೊಯ್ದು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಮಂಜುನಾಥ ಅವರ ಚಿಕ್ಕಪ್ಪನ ಮಗನಾಗಿರುವ ಆರೋಪಿ ರಂಜಿತ್, ಎಂಜಿನಿಯರಿಂಗ್ ಪದವೀಧರ. ಮೂರು ತಿಂಗಳಿಂದಲೂ ನಿಮ್ಮಕಾಯಲಹಳ್ಳಿಯಲ್ಲಿ ಮನೆ ನಿರ್ಮಿಸುತ್ತಿದ್ದ ರಂಜಿತ್, ಮಂಜುನಾಥ ಅವರ ಮನೆಯಲ್ಲಿ ವಾಸವಿದ್ದು,ಅಲ್ಲೆ ಊಟ ತಿಂಡಿ ಮಾಡುತ್ತಿದ್ದ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿಗಳಾದ ಡಿ ಎಲ್ ನಾಗೇಶ್.ಅಡಿಷನಲ್ ಎಸ್ಪಿ ಖಾಸಿಂ ಖಾನ್.ಡಿ ವೈ ಎಸ್ ಪಿ. ಪಿ ಮುರಳೀಧರ.ಬಟ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ,ಪರಿಶೀಲನೆ ನಡೆಸಿ, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಮನೆಯನ್ನೇ ಪಾರ್ಕ್ ಮಾಡಿದ ಪರಿಸರ ಪ್ರೇಮಿ; 250ಕ್ಕೂ ಹೆಚ್ಚು ಬಗೆಯ ಗಿಡಗಳ ಹಸಿರ ಮನೆ

ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ತೆರಳಿದ್ದ ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಶಿವಮೊಗ್ಗ ಮೂಲದ ಅಫ್ದಾಖಾನ್, ಆದೀಲ್, ಸಾಜೀದ್ ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ತೆರಳಿದ್ದರು. ಆದ್ರೆ, ನೆಟ್​ವರ್ಕ್ ಇಲ್ಲದೆ ಮೂವರು ಸಂಪರ್ಕಕ್ಕೆ ಸಿಗಲಿಲ್ಲ. ಹೀಗಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ನಡೆಸಲಾಗ್ತಿದೆ. ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:26 am, Thu, 20 June 24

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ