AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಮುಟ್ಟಿದ ನಂದಿನಿ ಹಾಲಿನ ದರ ಏರಿಕೆ ಹಣ: ಚಿಕ್ಕಬಳ್ಳಾಪುರದಲ್ಲಿ ಹರಿದ ಹಾಲಿನಹೊಳೆ

ಇತ್ತೀಚಿಗೆ ರಾಜ್ಯ ಸರ್ಕಾರ ಲೀಟರ್ ನಂದಿನಿ ಹಾಲಿನ ಬೆಲೆ ಹೆಚ್ಚಳ ಮಾಡಿದೆ. ಹೆಚ್ಚಳವಾದ ಹಾಲಿನ ದರವನ್ನು ರಾಜ್ಯ ಸರ್ಕಾರ ನೇರವಾಗಿ ಹಾಲು ಉತ್ಪಾಕರ ರೈತರಿಗೆ ನೀಡುತ್ತಿದೆ, ಇದರಿಂದ ಉತ್ತೇಜನಗೊಂಡಿರುವ ಹೈನೋದ್ಯಮಿಗಳು ಹಾಲಿನ ಉತ್ಪಾದನೆಯನ್ನು ಹೆಚ್ಚಳ ಮಾಡಿದ್ದು, ಹಸುಗಳನ್ನು ಮುತುವರ್ಜಿಯಿಂದ ನೋಡಿಕೊಳ್ತಿದ್ದಾರೆ. ಇದ್ರಿಂದ ಅಗತ್ಯಕ್ಕಿಂತ ಹೆಚ್ಚಿಗೆ ಹಾಲು ಉತ್ಪಾದನೆಯಾಗಿ ಹಾಲಿನ ಹೊಳೆಯಂತಾಗಿದೆ.

ರೈತರಿಗೆ ಮುಟ್ಟಿದ ನಂದಿನಿ ಹಾಲಿನ ದರ ಏರಿಕೆ ಹಣ: ಚಿಕ್ಕಬಳ್ಳಾಪುರದಲ್ಲಿ ಹರಿದ ಹಾಲಿನಹೊಳೆ
Milk
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ|

Updated on:Jun 23, 2025 | 8:58 PM

Share

ಚಿಕ್ಕಬಳ್ಳಾಪುರ, (ಜೂನ್ 23): ಕೋಲಾರದ (Kolar) ಕೊಚಿಮುಲ್ ನಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ – ಚಿಮುಲ್ ( Chikkaballapur Milk Union) ಆರಂಭವಾಗಿದ್ದೆ ತಡ, ವಿವಿದ ವಿನೂತನ ಕಾರ್ಯಕ್ರಮಗಳ ಮೂಲಕ ರೈತರ ಮೆಚ್ಚುಗೆಗೆ ಪಾತ್ರವಾಗಿದೆ. ಈಗ ಇನ್ನೂ ಒಂದು ಹೆಚ್ಚೆ ಮುಂದೆ ಹೋಗಿ ಹಾಲಿನ ಉತ್ಪಾದನೆಯಲ್ಲಿ ತನ್ನದೆ ಸಾಧನೆ ಮಾಡಿದೆ. ಒಂದೆಡೆ ಚಿಮುಲ್ ಜನಪ್ರೀಯ ಯೋಜನೆಗಳು ಮತ್ತೊಂದೆಡೆ ರಾಜ್ಯ ಸರ್ಕಾರ ಲೀಟರ್ ನಂದಿನಿ ಹಾಲಿನ ಬೆಲೆ ಹೆಚ್ಚಳ ಮಾಡಿ ಅದರ ಹಣವನ್ನು ನೇರವಾಗಿ ಹಾಲು ಉತ್ಪಾಕರ ರೈತರಿಗೆ ನೀಡುತ್ತಿದೆ. ಇದ್ರಿಂದ ಉತ್ತೇಜನಗೊಂಡಿರುವ ಹೈನೋದ್ಯಮಿಗಳು ಹಸುಗಳನ್ನು ಮುತುವರ್ಜಿಯಿಂದ ಸಾಕುತ್ತಿದ್ದಾರೆ. ಹೀಗಾಗಿ ಕಾರಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಾಲಿನ ಹೊಳೆ ಹರಿಯುವಂತಾಗಿದೆ.

ಸರ್ಕಾರದ ಪ್ರೋತ್ಸಾಹದಿಂದ ರೈತರು ಹೈನುಗಾರಿಕೆಯತ್ತ

ಇನ್ನೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 987 ಗ್ರಾಮೀಣ ಡೈರಿಗಳಿದ್ದು, 40 ಸಾವಿರ ಕುಟುಂಬಗಳು ಹೈನುಗಾರಿಕೆಯಲ್ಲಿ ತೋಡಗಿದ್ದು, ಇತ್ತೀಚೆಗೆ ಒಂದು ಲಕ್ಷ ಲೀಟರ್ ಹಾಲು ಹೆಚ್ಚಳವಾಗಿದೆ. ಪ್ರತಿದಿನ 5 ಲಕ್ಷ 50 ಸಾವಿರ ಲೀಟರ್ ಹಾಲು ಚಿಮುಲ್ ಗೆ ಹರಿದು ಬರುತ್ತಿದೆ. ರೈತರು ಹಾಕುವ ಒಂದು ಹಾಲಿಗೆ ಚಿಮುಲ್ 39 ರೂಪಾಯಿ 40 ಪೈಸೆ ಹಣ ನೀಡುತ್ತಿದೆ. ಇದರಿಂದ ರೈತರು ಹೈನುಗಾರಿಕೆಯತ್ತ ತಮ್ಮ ಚಿತ್ತ ನೆಟ್ಟಿದ್ದಾರೆ.

ಇದನ್ನೂ ಓದಿ: ನಂದಿನಿ ಹಾಲಿನ ಬೆಲೆ ಏರಿಕೆ: ರೈತರಿಗೆ ಸಿಗೋದೆಷ್ಟು, ಲಾಭದಲ್ಲಿ ಸರ್ಕಾರದ ಪಾಲೆಷ್ಟು? ಇಲ್ಲಿದೆ ಮಾಹಿತಿ

ನಂದಿನಿ ಹಾಲು ಹಾಗೂ ಅದರ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಇದೆ. ಜೊತೆಗೆ ರಾಜ್ಯ ಸರ್ಕಾರ ಪ್ರತಿ ಲೀಟರ್ ಗುಣಮಟ್ಟದ ಹಾಲಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡುತ್ತಿದೆ.ಇದರಿಂದ ಉತ್ಸುಕರಾಗಿರುವ ಹಾಲು ಉತ್ಪಾದಕರಿಗೆ ಭಾರಿ ಬೇಡಿಕೆ ಬಂದಿದ್ದು, ಹಾಲಿನ ಹೊಳೆ ಹರಿಯುವಂತಾಗಿದೆ.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ನಂದಿನ ಹಾಲಿನ ದರ ಏರಿಕೆ ಮಾಡಿತ್ತು. ಈ ಬೆಲೆ ಏರಿಕೆ ಹಣವನ್ನು ಹಾಲು ಉತ್ಪಾದರಿಗೆ ನೀಡುವಾಗಿ ಸರ್ಕಾರ ಹೇಳಿತ್ತು. ಅದರಂತೆ  ಹಾಲು ಉತ್ಪಾದಿಸುವ ರೈತರ ಬೇಡಿಕೆಯನ್ನು ಪೂರೈಸಲು ಮತ್ತು ಗ್ರಾಹಕರ ಹಿತಾಸಕ್ತಿ ಕಾಪಾಡಲು ಹಾಲಿನ ಬೆಲೆಯನ್ನು ಹೆಚ್ಚಿಸಲಾಗಿದ್ದ, ಸರ್ಕಾರದ 5 ಪ್ರೋತ್ಸಾಹಧನ ನೇರವಾಗಿ ರೈತರ ಖಾತೆಗಳಿಗೆ ಹೋಗುತ್ತಿದೆ. ಇನ್ನು ಕೆಲವು ಕಡೆಗಳಲ್ಲಿ ಇದು ವಿಳಂಬವಾಗುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

Published On - 8:57 pm, Mon, 23 June 25

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?