AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಗಣಿ ಮಾಫಿಯಾದಿಂದ 1.48 ಕೋಟಿ ರೂ. ದಂಡ ವಸೂಲಿ ಮಾಡಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ

ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಟಿಪ್ಪರ್​ಗಳಲ್ಲಿ ಅಕ್ರಮವಾಗಿ ಜಲ್ಲಿ, ಎಂ.ಸ್ಯಾಂಡ್ ಸೇರಿದಂತೆ ಕಲ್ಲಿನ ಉತ್ಪನ್ನಗಳನ್ನು ಸಾಗಿಸುತ್ತಿದ್ದಾಗ 2022-23 ಹಾಗೂ 2023-24ನೇ ಸಾಲಿನಲ್ಲಿ ಟಿಪ್ಪರ್​​ಗಳನ್ನು ತಡೆದು, ಅವುಗಳ ಮಾಲೀಕರಿಂದ 1,26,43,043 ರೂಪಾಯಿಗಳ ದಂಡ ವಸೂಲಿ ಮಾಡಲಾಗಿದ್ದು, 373 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ.

ಚಿಕ್ಕಬಳ್ಳಾಪುರ: ಗಣಿ ಮಾಫಿಯಾದಿಂದ 1.48 ಕೋಟಿ ರೂ. ದಂಡ ವಸೂಲಿ ಮಾಡಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ
ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಗಣಿ ಮಾಫಿಯಾದಿಂದ 1.48 ಕೋಟಿ ರೂ. ದಂಡ ವಸೂಲಿ ಮಾಡಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Oct 15, 2023 | 2:33 PM

Share

ಚಿಕ್ಕಬಳ್ಳಾಪುರ, ಅ.15: ಬಳ್ಳಾರಿಯ ಗಣಿಯನ್ನೇ ಮೀರಿಸುವ ಹಾಗೆ ಚಿಕ್ಕಬಳ್ಳಾಪುರದಲ್ಲಿ (Chikkaballapur) ಕಲ್ಲು ಗಣಿಗಾರಿಕೆ ಬೆಳೆದು ನಿಂತಿದೆ. 202 ಕಲ್ಲು ಕ್ವಾರಿಗಳು ಹಾಗೂ 77 ಕ್ರಷರ್ ಘಟಕಗಳು ಆರ್ಭಟಿಸುತ್ತಿವೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ನ್ಯಾಯಯುತವಾಗಿ ಕಟ್ಟಬೇಕಾಗಿರುವ ರಾಜಧನ ವಂಚಿಸಿ, ಕಳ್ಳ ಮಾರ್ಗದಲ್ಲಿ ಕಲ್ಲು ಹಾಗೂ ಕಲ್ಲಿನ ಉತ್ಪನ್ನಗಳನ್ನು ರಸ್ತೆಯಲ್ಲಿ ಸಾಗಿಸುತ್ತಿದ್ದಾಗ ಅದನ್ನು ತಡೆದು ಬರೋಬ್ಬರಿ 1,48,32,817 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಅಕ್ರಮವಾಗಿ ಕಲ್ಲಿನ ಉತ್ಪನ್ನಗಳ ಸಾಗಾಟ

ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಟಿಪ್ಪರ್​ಗಳಲ್ಲಿ ಅಕ್ರಮವಾಗಿ ಜಲ್ಲಿ, ಎಂ.ಸ್ಯಾಂಡ್ ಸೇರಿದಂತೆ ಕಲ್ಲಿನ ಉತ್ಪನ್ನಗಳನ್ನು ಸಾಗಿಸುತ್ತಿದ್ದಾಗ 2022-23 ಹಾಗೂ 2023-24ನೇ ಸಾಲಿನಲ್ಲಿ ಟಿಪ್ಪರ್​​ಗಳನ್ನು ತಡೆದು, ಅವುಗಳ ಮಾಲೀಕರಿಂದ 1,26,43,043 ರೂಪಾಯಿಗಳ ದಂಡ ವಸೂಲಿ ಮಾಡಲಾಗಿದ್ದು, 373 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರದಿಂದ ಸರ್ಕಸ್, ಚಿನ್ನದ ಮೊಟ್ಟೆ ಗಣಿ ಇಲಾಖೆಯಲ್ಲಿ ರಾಜಧನ ಸೊರಿಕೆ ತಡೆಗೆ ವಿನೂತನ ಪ್ಲಾನ್!

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಗ್ರಾನೈಟ್ ದಿಂಡುಗಳು ಸೇರಿದಂತೆ ಅಕ್ರಮವಾಗಿ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದವರ ಮೇಲೆ ದಾಳಿ ಮಾಡಿ, ಅವರಿಂದ 21,89,774 ರೂಪಾಯಿಗಳ ದಂಡ ವಸೂಲಿ ಮಾಡಲಾಗಿದ್ದು, 26 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ.

ಒಟ್ಟಿನಲ್ಲಿ, ರಾಜ್ಯಸರ್ಕಾರಕ್ಕೆ ರಾಜಧನ ವಂಚಿಸಿ ಕಲ್ಲಿನ ಉತ್ಪನ್ನಗಳ ಸಾಗಾಟ ಒಂದಡೆಯಾದರೆ, ಮತ್ತೊಂದಡೆ ಅಕ್ರಮ ಗಣಿಗಾರಿಕೆ ಪ್ರಕರಣಗಳು ಕಂಡುಬಂದಿವೆ. ಇದರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಆಗಾಗ್ಗೆ ಕಾರ್ಯಾಚರಣೆ ನಡೆಸಿ ದಂಡ ವಸೂಲಿ ಮಾಡಿ ಪ್ರಕರಣಗಳನ್ನು ದಾಖಲು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?