AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಸೀಟ್ ಮ್ಯಾಟ್ರಿಕ್ಸ್ ಪ್ರಕಟ-ಸಚಿವ ಎಂ.ಸಿ.ಸುಧಾಕರ್

ನೀಟ್ ಪರೀಕ್ಷೆ ಹಾಗೂ ಫಲಿತಾಂಶ ಗೊಂದಲ ಹಿನ್ನಲೆ ರಾಜ್ಯದ ಸಿಇಟಿ ಮ್ಯಾಟ್ರಿಕ್ಸ್ ಮೇಲೆ ಕರಾಳ ಛಾಯೆ ಬೀರಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಖಾತೆ ಸಚಿವ ಡಾ. ಎಂ.ಸಿ.ಸುಧಾಕರ್, ‘ಸುಪ್ರಿಂಕೋರ್ಟ್ ಆದೇಶದನ್ವಯ ಶೀಘ್ರವೇ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸುತ್ತೇವೆ ಎಂದಿದ್ದಾರೆ.

ಶೀಘ್ರವೇ ಸೀಟ್ ಮ್ಯಾಟ್ರಿಕ್ಸ್ ಪ್ರಕಟ-ಸಚಿವ ಎಂ.ಸಿ.ಸುಧಾಕರ್
ಎಂ.ಸಿ.ಸುಧಾಕರ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 27, 2024 | 3:19 PM

Share

ಚಿಕ್ಕಬಳ್ಳಾಪುರ, ಜು.27: ‘ಸುಪ್ರಿಂಕೋರ್ಟ್ ಆದೇಶದನ್ವಯ ಶೀಘ್ರವೇ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸುತ್ತೇವೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಡಾ. ಎಂ.ಸಿ.ಸುಧಾಕರ್ (Dr.M.C Sudhakar) ಹೇಳಿದರು. ನೀಟ್ ಪರೀಕ್ಷೆ ಹಾಗೂ ಫಲಿತಾಂಶ ಗೊಂದಲ ಹಿನ್ನಲೆ ರಾಜ್ಯದ ಸಿಇಟಿ ಮ್ಯಾಟ್ರಿಕ್ಸ್ ಮೇಲೆ ಕರಾಳ ಛಾಯೆ ಬೀರಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ‘ ಈಗಾಗಲೇ ಕಾಲೇಜು ಆಯ್ಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. 2024-25ರ ಶೈಕ್ಷಣಿಕ ಸಾಲಿಗೆ ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳುತ್ತೆವೆ ಎಂದಿದ್ದಾರೆ.

ನೀಟ್- ಯುಜಿ ಗೆ ಸಂಬಂಧಿಸಿದಂತೆ ಯಾವುದೇ ಮರು ಪರೀಕ್ಷೆ ಇರುವುದಿಲ್ಲ

ವಿವಾದಕ್ಕೆ ಸಿಲುಕಿರುವ ನೀಟ್ ಪರೀಕ್ಷೆಯ ಫಲಿತಾಂಶ ಶನಿವಾರ(ಜು.21) ಪ್ರಕಟಿಸಲಾಗಿತ್ತು. ಇನ್ನು 2024ರ ನೀಟ್- ಯುಜಿ (NEET-UG) ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮರು ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ(ಜು.23) ಹೇಳಿತ್ತು. ಎರಡು ಸ್ಥಳೀಯ ಪ್ರಶ್ನೆ ಪತ್ರಿಕೆಗಳ ಸೋರಿಕೆಗಳ ನಂತರ ಪರೀಕ್ಷೆಯ “ವ್ಯವಸ್ಥಿತ ಉಲ್ಲಂಘನೆ” ಅನ್ನು ಸೂಚಿಸುವ ಯಾವುದೇ ಡೇಟಾ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಮರು-ಪರೀಕ್ಷೆಯನ್ನು ನಡೆಸುವ ಆದೇಶವು 23.33 ಲಕ್ಷ ಮಹತ್ವಾಕಾಂಕ್ಷಿ ವೈದ್ಯಕೀಯ ವೃತ್ತಿಪರರ ಮೇಲೆ ದೊಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ:NEET Results: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ; ಕೋಚಿಂಗ್ ಸೆಂಟರ್ಸ್ ಹೆಚ್ಚಿರುವ ಕಡೆ ಉತ್ತಮ ರಿಸಲ್ಟ್

ಕೋಚಿಂಗ್ ಸೆಂಟರ್ಸ್ ಹೆಚ್ಚಿರುವ ಕಡೆ ಉತ್ತಮ ರಿಸಲ್ಟ್

ಹೌದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಎನ್​ಟಿಎ ನಗರವಾರು ಮತ್ತು ಪರೀಕ್ಷಾ ಕೇಂದ್ರವಾರು ಫಲಿತಾಂಶಗಳನ್ನು ಪ್ರಕಟಿಸಿದ್ದು, ದೇಶಾದ್ಯಂತ ವಿವಿಧ ನಗರಗಳಲ್ಲಿನ 4,750 ಸೆಂಟರ್​ಗಳಲ್ಲಿ 32 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ, ಈ ಬಾರಿ ಪೇಪರ್ ಲೀಕ್ ಸೇರಿದಂತೆ ಅಕ್ರಮ ನಡೆಸಲಾಗಿತ್ತು ಎಂದು ಆರೋಪಿಸಲಾದ ಪರೀಕ್ಷಾ ಕೇಂದ್ರಗಳಲ್ಲಿ ರಿಸಲ್ಟ್ ಕಳಪೆಯಾಗಿ ಬಂದಿದೆ. ಕೆಲ ಸೆಂಟರ್​ಗಳಲ್ಲಿ ಬಹಳ ಉತ್ತಮ ಎನಿಸುವ ರಿಸಲ್ಟ್ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ