AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಬೇಜವಾಬ್ದಾರಿ ಸರ್ಕಾರಿ ವೈದ್ಯರಿಗೆ ಸಚಿವ ಸುಧಾಕರ್ ವಾರ್ನಿಂಗ್; ವೈದ್ಯರ ಗುಂಪುಗಾರಿಕೆ ವಿರುದ್ದ ಆಕ್ರೋಶ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರ ಮಾಡಿದ್ದೇ ತಡ ಅಲ್ಲಿಯ ವೈದ್ಯರಲ್ಲಿ ಎರಡು ತಂಡಗಳಾಗಿ, ನಾನಾ-ನೀನಾ ಎನ್ನುವ ಪ್ರತಿಷ್ಟೆಯಲ್ಲಿ ಬಡ ರೊಗಿಗಳಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ಎಚ್ಚೆತ್ತ ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್​ ಅಲ್ಲಿಯ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನ ತರಾಟೆಗೆ ತೆಗೆದುಕೊಂಡರು.

ಚಿಕ್ಕಬಳ್ಳಾಪುರ: ಬೇಜವಾಬ್ದಾರಿ ಸರ್ಕಾರಿ ವೈದ್ಯರಿಗೆ ಸಚಿವ ಸುಧಾಕರ್ ವಾರ್ನಿಂಗ್; ವೈದ್ಯರ ಗುಂಪುಗಾರಿಕೆ ವಿರುದ್ದ ಆಕ್ರೋಶ
ಎಂಸಿ ಸುಧಾಕರ್​
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Feb 02, 2024 | 6:39 PM

Share

ಚಿಕ್ಕಬಳ್ಳಾಪುರ, ಫೆ.02: ಜಿಲ್ಲಾಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿದ್ದ ಜಿಲ್ಲಾಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಇದರಿಂದ ಎರಡು ಇಲಾಖೆಯ ವೈದ್ಯರು ಸಿಬ್ಬಂದಿ ಹಾಗೂ ಅಧಿಕಾರಿಗಳ ಮಧ್ಯೆ ಇನ್ನೂ ಹೊಂದಾಣಿಕೆಯಾಗುತ್ತಿಲ್ಲ. ಎತ್ತು ಏರಿಗೆ, ಕೋಣ ನೀರಿಗೆ ಎನ್ನುವ ರೀತಿಯಲ್ಲಿ ಇಲ್ಲಿರುವ ವೈದ್ಯರು, ಸಿಬ್ಬಂದಿ ಹಾಗೂ ಅಧಿಕಾರಿಗಳು ಗುಂಪುಗಾರಿಕೆ ಮಾಡಿಕೊಂಡು ಸಮರ್ಪಕವಾಗಿ ಆಡಳಿತ ನಡೆಸದೆ ಆಸ್ಪತ್ರೆಗೆ ಬರುವ ರೋಗಿಗಳಿಗೆ, ಸೂಕ್ತ ಚಿಕಿತ್ಸೆ ನೀಡಲು ನಿರ್ಲಕ್ಷ ತೋರಿದ್ದಾರೆ ಎನ್ನುವ ಆರೋಪಗಳು ಹೆಚ್ಚಾಗಿವೆ. ಇದರಿಂದ ಇಂದು ಸ್ವತಃ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ ಸುಧಾಕರ್ (M.C Sudhakar)  ಆಸ್ಪತ್ರೆಗೆ ದಿಢೀರ್ ಬೇಟಿ ನೀಡಿ ಕೂಲಂಕುಶವಾಗಿ ಪರಿಶೀಲನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಸಚಿವರು ‘ಗುಂಪುಗಾರಿಕೆ ಬಿಟ್ಟು ಕರ್ತವ್ಯ ಬದ್ದತೆ ತೋರುವಂತೆ ಎಚ್ಚರಿಕೆ ನೀಡಿದರು. ನೂತನ ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜಿಗೆ ಬೋಧಕ ವೈದ್ಯರು ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಮಾತು ಕೇಳುತ್ತಿಲ್ಲವಂತೆ, ಮತ್ತೊಂದೆಡೆ ಜಿಲ್ಲಾಸ್ಪತ್ರೆಯ ವೈದ್ಯರು ವೈದ್ಯಕೀಯ ಕಾಲೇಜಿನ ಡೀನ್ ಮಾತು ಕೇಳುತ್ತಿಲ್ಲವಂತೆ, ಇನ್ನೊಂದೆಡೆ ಆಸ್ಪತ್ರೆಯಲ್ಲಿರುವ ವೈದ್ಯರುಗಳು ಜಾತಿ ಆಧಾರಿತವಾಗಿ ಗುಂಪುಗಾರಿಕೆ ಮಾಡಿಕೊಂಡಿದ್ದಾರಂತೆ. ಇದರ ಪರಿಣಾಮ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಇದಕ್ಕೂ ಸಚಿವ ಡಾ.ಎಂ.ಸಿ ಸುಧಾಕರ್, ಸೂಕ್ಷ್ಮವಾಗಿ ವಿಚಾರಿಸಿದ್ದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇದನ್ನೂ ಓದಿ:ಟಿವಿ9 ಕನ್ನಡ ಡಿಜಿಟಲ್ ವರದಿ ಫಲಶೃತಿ: ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಶಾಸಕ ಪ್ರದೀಪ್ ಈಶ್ವರ್ ಭೇಟಿ

ಒಟ್ಟಿನಲ್ಲಿ ಚಿಕ್ಕಬಳ್ಳಾಪುರ ವೈದ್ಯಕೀಯ ಬೋಧನಾ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ, ಅಧಿಕಾರಿಗಳ ಮಧ್ಯೆ ಜಾತಿಗಳ ಮೇಲಾಟ, ಗುಂಪುಗಾರಿಕೆ, ನಿರ್ಲಕ್ಷ್ಯ ಮನೋಭಾವ ಹೆಚ್ಚಾಗಿದೆ ಎನ್ನುವ ಅರೋಪಗಳು ಕೇಳಿಬಂದಿವೆ. ಇದರಿಂದ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗದೆ ಪರದಾಡುವಂತಾಗಿದೆ. ಇನ್ನು ಆಸ್ಪತ್ರೆಯ ಅಂಧ ದರ್ಭಾರ್​ಗೆ ಕಡಿವಾಣ ಹಾಕಬೇಕಾದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಜಾಣಕುರುಡಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ