AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coriander Crop: ಆ ಬಡ ರೈತ 1 ಎಕರೆ ಜಮೀನಿನಲ್ಲಿ ಹನಿ ನೀರಾವರಿ ಮೂಲಕ ಕಷ್ಟಪಟ್ಟು ಕೊತ್ತಂಬರಿ ಸೊಪ್ಪು ಬೆಳೆದಿದ್ದ, ಮುಂದೇನಾಯ್ತು?

Pesticides: ರೈತನ ಮೇಲಿನ ದ್ವೇಷವೊ... ಇಲ್ಲಾ ಜಮಿನು ವಿವಾದವೊ ಗೊತ್ತಿಲ್ಲ. ಆದ್ರೆ ಬೆಳೆದು ನಿಂತಿದ್ದ ಕೊತ್ತಂಬರಿ ಸೊಪ್ಪುವಿನ ಮೇಲೆ ಕಳೆನಾಶಕ ಸಿಂಪಡಣೆ ಮಾಡಿ, ರೈತನ ಕಣ್ಣಲ್ಲಿ ನೀರು ತರಿಸಿದ್ದು ಮಾತ್ರ ವಿಪರ್ಯಾಸ.

Coriander Crop: ಆ ಬಡ ರೈತ 1 ಎಕರೆ ಜಮೀನಿನಲ್ಲಿ ಹನಿ ನೀರಾವರಿ ಮೂಲಕ ಕಷ್ಟಪಟ್ಟು ಕೊತ್ತಂಬರಿ ಸೊಪ್ಪು ಬೆಳೆದಿದ್ದ, ಮುಂದೇನಾಯ್ತು?
ಬೆಳೆದು ನಿಂತಿದ್ದ ಕೊತ್ತಂಬರಿ ಸೊಪ್ಪುವಿನ ಮೇಲೆ ಕಳೆನಾಶಕ ಸಿಂಪಡಣೆ
TV9 Web
| Edited By: |

Updated on: Jan 27, 2023 | 2:28 PM

Share

ಆತ ಬಡ ರೈತ (Farmer), ತನಗಿರುವ ಒಂದು ಎಕರೆ ಜಮೀನಿನಲ್ಲಿ ಹನಿ ನೀರಾವರಿ ಮೂಲಕ ಕಷ್ಟಪಟ್ಟು ಕೊತ್ತಂಬರಿ ಸೊಪ್ಪು (Coriander Crop) ಬೆಳೆದಿದ್ದ. ಇನ್ನೇನು ಒಂದು ದಿನ ಬಿಟ್ಟಿದ್ರೆ… ಕಟಾವು ಮಾಡಿ ಮಾರುಕಟ್ಟೆಗೆ ಹಾಕಬೇಕಿತ್ತು. ಅಷ್ಟರಲ್ಲೆ… ಅದ್ಯಾರ ಕಣ್ಣು ಬಿತ್ತೊ ಏನೋ… ರಾತ್ರೋರಾತ್ರಿ ಕೊತ್ತಂಬರಿ ತೋಟಕ್ಕೆ ವಿಷ ಸಿಂಪಡಣೆ ಮಾಡಿದ್ದಾರೆ. ಇದ್ರಿಂದ ತೋಟದಲ್ಲಿದ್ದ ಕೊತ್ತಂಬರಿ ಸೊಪ್ಪು ಒಣಗಿ ಹೋಗಿದೆ. ಈ ಕುರಿತು ಒಂದು ವರದಿ. ಹುಲುಸಾಗಿ ಬೆಳೆದು ನಿಂತ ಕೊತ್ತಂಬರಿ ಸೊಪ್ಪಿನ ಮೇಲೆ ವಕ್ರದೃಷ್ಟಿ ಬೀರಿದ ದುಷ್ಕರ್ಮಿಗಳು (Miscreants) ಕಟಾವಿಗೆ ಬಂದಿದ್ದ ಕೊತ್ತಂಬರಿ ಸೊಪ್ಪಿನ ತೋಟಕ್ಕೆ ಕಳೆನಾಶಕ ಸಿಂಪಡಣೆ ಮಾಡಿ (Pesticides) ರೈತನ ಕಣ್ಣಲ್ಲಿ ನೀರು ಹಾಕಿಸಿರುವುದು ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಪೆಸಲಪರ್ತಿ ಗ್ರಾಮದ ಬಡ ರೈತ ಶ್ರೀನಿವಾಸ್ ತೋಟದಲ್ಲಿ.

ಹೌದು! ಶ್ರೀನಿವಾಸ್ ತನ್ನ ಒಂದು ಎಕರೆ 27 ಗುಂಟೆ ಜಮೀನಿನಲ್ಲಿ 50 ಸಾವಿರ ರೂಪಾಯಿ ಬಂಡವಾಳ ಹಾಕಿ ಹನಿ ನೀರಾವರಿ ಮೂಲಕ ಕೊತ್ತಂಬರಿ ಸೊಪ್ಪು ಬೆಳೆದಿದ್ದ, ಮಾರುಕಟ್ಟೆಯಲ್ಲಿ ಒಳ್ಳೆ ಬೆಲೆ ಇತ್ತು, ಒಂದೂವರೆ ಲಕ್ಷ ರೂಪಾಯಿಗೆ ಕೊತ್ತಂಬರಿ ಸೊಪ್ಪು ತೋಟ ಮಾರಾಟ ಮಾಡಿದ್ದ. ಗುತ್ತಿಗೆ ಪಡೆದವರು ಆಗಮಿಸಿ ಕೊತ್ತಂಬರಿ ಸೊಪ್ಪು ಕೀಳುವುದಕ್ಕೂ ಮುನ್ನ ದುಷ್ಕರ್ಮಿಗಳು ತೋಟಕ್ಕೆ ಕಳೆನಾಶಕ ಸಿಂಪಡಣೆ ಮಾಡಿದ್ದಾರೆ. ಇದ್ರಿಂದ ಬೆಳೆದು ನಿಂತಿದ್ದ ಕೊತ್ತಂಬರಿ ಸೊಪ್ಪು ಒಣಗಿದೆ.

ಶ್ರೀನಿವಾಸ್ ತೋಟದಲ್ಲಿ ಬೆಳೆದಿದ್ದ ಕೊತ್ತಂಬರಿ ಸೊಪ್ಪುನ್ನು ಗುತ್ತಿಗೆ ಪಡೆದಿದ್ದ, ಕೊತ್ತಂಬರಿ ಸೊಪ್ಪು ವ್ಯಾಪಾರಿ ಶ್ರೀಧರ್ ಏನು ಮಾಡಬೇಕು ಎಂದು ದಿಕ್ಕು ತೋಚುತ್ತಿಲ್ಲ. ಒಂದು ಎಕರೆಯಲ್ಲಿ ಬಹುತೇಕ ಕೊತ್ತಂಬರಿ ಸೊಪ್ಪು ಬೆಳೆಗೆ ಕಳೆನಾಶಕ ಸಿಂಪಡಣೆ ಮಾಡಿದ್ದಾರೆ. ಉಳಿದ ಕೊತ್ತಂಬರಿ ಸೊಪ್ಪನ್ನು ಕೀಳುತ್ತಿದ್ದೇವೆ. ಹಾಕಿದ ಬಂಡವಾಳ ಬರಲ್ಲ. ರೈತ ಮುಂಗಡ ಹಣ ವಾಪಸ್ ಕೊಡುವುದಿಲ್ಲ ಎನ್ನುತ್ತಿದ್ದಾನೆ ಅಂತಾ ತನ್ನ ಅಳಲು ತೋಡಿಕೊಂಡಿದ್ದಾರೆ.

ರೈತನ ಮೇಲಿನ ದ್ವೇಷವೊ… ಇಲ್ಲಾ ಜಮಿನು ವಿವಾದವೊ ಗೊತ್ತಿಲ್ಲ. ಆದ್ರೆ ಬೆಳೆದು ನಿಂತಿದ್ದ ಕೊತ್ತಂಬರಿ ಸೊಪ್ಪುವಿನ ಮೇಲೆ ಕಳೆನಾಶಕ ಸಿಂಪಡಣೆ ಮಾಡಿ, ರೈತನ ಕಣ್ಣಲ್ಲಿ ನೀರು ತರಿಸಿದ್ದು ಮಾತ್ರ ವಿಪರ್ಯಾಸ.

ವರದಿ: ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?