Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಪಪ್ಪಾಯ ಹಣ್ಣು ಲೋಡ್​ ತುಂಬಿದ್ದ ಬೊಲೇರೊ ವಾಹನ ಕಳ್ಳತನ

ಇತ್ತೀಚೆಗೆ ಮಾಲು ಸಮೇತ ವಾಹನವನ್ನೇ ಕದಿಯುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಅಡಿಕೆ, ಟೆಮೆಟೋ ತುಂಬಿದ್ದ ವಾಹನಗಳನ್ನು ಕಳ್ಳತನ ಮಾಡಿರುವ ಪ್ರಕರಣ ನಡೆದಿವೆ. ಅದರಂತೆ ಇದೀಗ ಚಿಕ್ಕಬಳ್ಳಾಪುರದಲ್ಲಿ ಇದೀಗ ಪಪ್ಪಾಯ ಸಮೇತ ಬೊಲೇರೊ ಪಿಕ್ ಅಪ್ ವಾಹನವನ್ನೇ ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ವಿವಿಧ ಕಾಯಿಲೆಗಳಿಗೆ ರಾಮಬಾಣವಾಗಿರುವ ಪಪ್ಪಾಯ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್ ಇದೆ. ಇದರಿಂದ ಪಪ್ಪಾಯ ಸಾಗಿಸುತ್ತಿದ್ದ ವಾಹನದ ಮೇಲೆ ದುಷ್ಕರ್ಮಿಗಳ ಕಣ್ಣು ಬಿದ್ದಿದೆ.

ಚಿಕ್ಕಬಳ್ಳಾಪುರ: ಪಪ್ಪಾಯ ಹಣ್ಣು ಲೋಡ್​ ತುಂಬಿದ್ದ ಬೊಲೇರೊ ವಾಹನ ಕಳ್ಳತನ
Papaya Load Bolero Pickup Theft
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ

Updated on:Jan 27, 2025 | 5:43 PM

ಚಿಕ್ಕಬಳ್ಳಾಪುರ, (ಜನವರಿ 27): ಮೊನ್ನೇ ಅಷ್ಟೇ ಲಾರಿ ಸಮೇತ ಕೋಟ್ಯಂತರ ಮೌಲ್ಯದ ಅಡಿಕೆ ಕಳ್ಳತನ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿತ್ತು. ಇದರ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರದಲ್ಲಿ ಪಪ್ಪಾಯ ಹಣ್ಣು ಸಮೇತ ಬೊಲೇರೊ ಪಿಕ್ ಅಪ್ ವಾಹನವನ್ನು ಕದ್ದು ತೆಗೆದುಕೊಂಡಿರುವ ಹೋಗಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಬೈಪಾಸ್​ನ ಭಗವತಿ ಹೋಟಲ್ ಬಳಿ ಪಪ್ಪಾಯ ಹಣ್ಣು ತುಂಬಿದ್ದ ವಾಹನದ ಚಾಲಕ ಶೌಚಕ್ಕೆ ಹೋಗಿದ್ದರು. ಈ ವೇಳೆ ಖದೀಮರು ವಾಹನವನ್ನು ಚಾಲನೆ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಪಪ್ಪಾಯ ಹಣ್ಣುಗಳಿಗೆ ಭಾರಿ ಬೇಡಿಕೆ ಇದೆ. ಇದರಿಂದ ಪಪ್ಪಾಯ ಹಣ್ಣುಗಳ ವ್ಯಾಪಾರ ಮಾಡುತ್ತಿದ್ದ ಬೆಂಗಳೂರಿನ ಯಲಹಂಕ ಮೂಲದ ಹೇಮಂತ್ ಎನ್ನುವವರು ಆಂಧ್ರದಿಂದ ಪಪ್ಪಾಯ ಕೊಂಡು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಹೀಗಾಗಿ ಮೊನ್ನೆ ರಾತ್ರಿ ಆಂಧ್ರ ಪ್ರದೇಶದ ಅನಂತಪುರದಿಂದ ಪಪ್ಪಾಯ ತುಂಬಿದ್ದ ವಾಹನ ಬೆಂಗಳೂರಿಗೆ ಬರುತ್ತಿತ್ತು. ಆದ್ರೆ, ಮಹೇಂದ್ರ ಪಿಕ್ ಅಪ್ ವಾಹನದ ಚಾಲಕ ಗಂಗಾಧರ್ ಎನ್ನುವವರು ವಾಹನನ್ನು ಚಿಕ್ಕಬಳ್ಳಾಪುರ ಬೈಪಾಸ್​ನ ಭಗವತಿ ಹೋಟಲ್ ಬಳಿ ನಿಲ್ಲಿಸಿ ಶೌಚಾಲಯಕ್ಕೆ ಹೋಗಿದ್ದಾರೆ. ಆಗ ಎರಡು ಬೈಕ್ ಗಳಲ್ಲಿ ಬಂದ ಆರು ಜನ ಯುವಕರು ವಾಹನವನ್ನು ಚಾಲನೆ ಮಾಡಿಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲಾರಿ ಸಮೇತ ಕೋಟ್ಯಂತರ ರೂ ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ

ಚಾಲಕ ಗಂಗಾಧರ್​ ಕೆಲ ದೂರ ವಾಹನ ಹಿಂದೆ ಓಡಿ ಹೋಗಿದ್ದಾರೆ. ಆದ್ರೆ, ವಾಹನ ಕಣ್ಣಿಗೆ ಕಾಣಿಸದೇ ಹೋಗಿದೆ. ಇನ್ನೂ ವಾಹನದಲ್ಲಿ ಸುಮಾರು ಒಂದುವರೆ ಲಕ್ಷ ರೂಪಾಯಿ ಮೌಲ್ಯದ ಪಪ್ಪಾಯ ಹಣ್ಣುಗಳು ಇತ್ತು ಎಂದು ತಿಳಿದುಬಂದಿದೆ. ಬಳಿಕ ವಾಹನ ಚಾಲಕ ಗಂಗಾಧರ್ ಈ ಬಗ್ಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಾಗ ವಾಹನದಲ್ಲಿದ್ದ ಅರ್ಧದಷ್ಟು ಪಪ್ಪಾಯ ಅಮಾನಿ ಗೋಪಾಲಕೃಷ್ಣ ಕೆರೆ ಬಳಿ ಅನ್ ಲೋಡ್ ಆಗಿರುವುದು ಕಂಡು ಬಂದಿದೆ.

ಇನ್ನೂ ವಾಹನ ಕಳ್ಳತನವಾದ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇದ್ದು, ಸ್ಪಷ್ಟವಾಗಿ ರೆಕಾರ್ಡ್​ ಆಗಿಲ್ಲ. ಓವರ್ ಲೋಡ್ ಇರುವ ವಾಹನ ಸ್ಲೋ ಆಗಿ ಚಲಿಸುತ್ತೆ ಅಂತ ಕೆಲವು ಹಣ್ಣುಗಳನ್ನು ಕೆರೆ ಬಳಿ ಬಿಸಾಡಿ ಇನ್ನೂಳಿದ ಪಪ್ಪಾಯ ಸಮೇತ ವಾಹನವನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ಇನ್ನೂ ಪ್ರಕರಣ ದಾಖಲು ಮಾಡಿರುವ ಪೊಲೀಸರು, ವಾಹನ ಜೊತೆ ಖದೀಮರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:42 pm, Mon, 27 January 25

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ