AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಟ್ಟಹಳ್ಳಿಯಲ್ಲಿ ಮತ್ತೆ ಕೇಳಿ ಬಂತು ಸ್ಫೋಟದ ಸದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಬೀದಿಯಲ್ಲಿ ಕಾಲ ಕಳೆದ ಜನ

ವಿಜ್ಞಾನಿಗಳು ಬಂದು ತನಿಖೆ ಮಾಡಿ ಸಮಸ್ಯೆ ಬಗೆ ಹರಿದಿದ್ದರೂ ಜನರಲ್ಲಿ ಆತಂಕ ಮಾತ್ರ ಕಡಿಮೆಯಾಗಿಲ್ಲ. ನಿನ್ನೆ ರಾತ್ರಿ ಕೇಳಿ ಬಂದ ಶಬ್ದಕ್ಕೆ ನಿದ್ದೆ ಮಾಡದೆ ಗ್ರಾಮಸ್ಥರು ಮನೆ ಹೊರಗೆ ಕಾಲ ಕಳೆದಿದ್ದಾರೆ.

ಮಿಟ್ಟಹಳ್ಳಿಯಲ್ಲಿ ಮತ್ತೆ ಕೇಳಿ ಬಂತು ಸ್ಫೋಟದ ಸದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಬೀದಿಯಲ್ಲಿ ಕಾಲ ಕಳೆದ ಜನ
ಮಿಟ್ಟಹಳ್ಳಿಯಲ್ಲಿ ಮತ್ತೆ ಕೇಳಿ ಬಂತು ಸ್ಫೋಟದ ಸದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಬೀದಿಯಲ್ಲಿ ಕಾಲ ಕಳೆದ ಜನ
TV9 Web
| Edited By: |

Updated on:Nov 14, 2021 | 11:17 AM

Share

ಚಿಕ್ಕಬಳ್ಳಾಫುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿ ಗ್ರಾಮದಲ್ಲಿ ಮತ್ತೆ ಸ್ಫೋಟದ ಸದ್ದು ಕೇಳಿ ಬಂದಿದ್ದು ಭೂಮಿ ಕಂಪಿಸಿದ ಅನುಭವವಾಗಿದೆ. ಇದರಿಂದ ಭಯಭೀತರಾದ ಜನ ರಾತ್ರಿಯಿಡೀ ನಿದ್ದೆ ಮಾಡದೆ ಬೀದಿಯಲ್ಲಿ ಕಾಲ ಕಳೆದಿದ್ದಾರೆ.

ಕಳೆದ ಒಂದು ವಾರದಿಂದ ಭೂಮಿಯಿಂದ ಶಬ್ದ ಬರ್ತಿದೆ. ಈಗಾಗಲೇ ಗ್ರಾಮಕ್ಕೆ ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ವಿಫಲ ಕೊಳವೆ ಬಾವಿಗಳಲ್ಲಿ ಜಲ ಮರುಪೊರಣದಿಂದ ಶಬ್ದ ಬರುವ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಫಲ ಕೊಳವೆಬಾವಿಯಲ್ಲಿ ಏರ್ ಬ್ಲಾಸ್ಟ್ ಆಗುತ್ತಿದೆ. ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ್ದಾರೆ. ಇನ್ನೂ ಕೆಲವು ದಿನಗಳ ವೆರೆಗೂ ಶಬ್ದ ಬರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದ್ರೆ ಈ ಶಬ್ದದಿಂದ ಜನರಲ್ಲಿರುವ ಆತಂಕ ಕಡಿಮೆಯಾಗಿಲ್ಲ. ಶಬ್ದದಿಂದ ಜನರ ನೆಮ್ಮದಿ ಹಾಳಾಗಿದೆ.

ವಿಜ್ಞಾನಿಗಳು ಬಂದು ತನಿಖೆ ಮಾಡಿ ಸಮಸ್ಯೆ ಬಗೆ ಹರಿದಿದ್ದರೂ ಜನರಲ್ಲಿ ಆತಂಕ ಮಾತ್ರ ಕಡಿಮೆಯಾಗಿಲ್ಲ. ನಿನ್ನೆ ರಾತ್ರಿ ಕೇಳಿ ಬಂದ ಶಬ್ದಕ್ಕೆ ನಿದ್ದೆ ಮಾಡದೆ ಗ್ರಾಮಸ್ಥರು ಮನೆ ಹೊರಗೆ ಕಾಲ ಕಳೆದಿದ್ದಾರೆ.

ಬೋರ್ ವೆಲ್​ಗಳಿಂದ  ಏರ್ ಬ್ಲಾಸ್ಟ್ ಆಗುತ್ತಿದೆ ಮಿಟ್ಟಹಳ್ಳಿ ಹಾಗೂ ಸುತ್ತಮುತ್ತ ಗ್ರಾಮದಲ್ಲಿ ಭೂಕಂಪ ಆಗಿಲ್ಲ. ಭೂಮಾಪನ ಕೇಂದ್ರದಲ್ಲಿ ಎಲ್ಲಿಯೂ ಭೂಕಂಪನ ಮಾಹಿತಿ ದಾಖಲಾಗಿಲ್ಲ. ಗ್ರಾಮದಲ್ಲಿ ಶಬ್ದ ಬಂದಿದೆ ಇದ್ರಿಂದ ವಿಜ್ಞಾನಿಗಳು ಪರಿಶೀಲನೆ ನಡೆಸಿದ್ದಾರೆ. ಕೆ.ಎಸ್.ಎನ್.ಡಿ.ಎನ್.ಎಂ.ಸಿ. ವಿಜ್ಞಾನಿಗಳು ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರು ಭಯ ಗಾಬರಿ ಪಡಬೇಕಿಲ್ಲ. ಗ್ರಾಮದ ಸುತ್ತಮುತ್ತ 350ಕ್ಕೂ ಹೆಚ್ಚು ಬೋರ್ ವೇಲ್ಗಳಿವೆ. ವಿಫಲ ಕೊಳವೆ ಬಾವಿಗಳಲ್ಲಿ ಜಲ ಮರುಪೂರಣವಾದಾಗ ಶಬ್ದ ಬಂದಿರಬಹುದು. ಏರ್ ಬ್ಲಾಸ್ಟ್ ನಿಂದ ಶಬ್ದ ಬಂದಿರುವ ಬಗ್ಗೆ ಮಾಹಿತಿಯಿದೆ ಎಂದು ಚಿಕ್ಕಬಳ್ಳಾಫುರ ಜಿಲ್ಲಾಧಿಕಾರಿ ಲತಾ ಆರ್ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ ಇಂದು ಬೆಳಗ್ಗೆ 6.20ರ ಸುಮಾರಿಗೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮನಗೂಳಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದ ಮಿಟ್ಟಹಳ್ಳಿಯಲ್ಲಿ ಮತ್ತೆ ಭೂಮಿಯಿಂದ ಬಂತು ಭಾರಿ ಶಬ್ದ!

Published On - 9:55 am, Sun, 14 November 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ