ಕೆ.ಸುಧಾಕರ್ 7-8 ಕೋಟಿ ರೂ. ಖರ್ಚು ಮಾಡಿ ಕಾಂಗ್ರೆಸ್​​ ಸದಸ್ಯರನ್ನು ಖರೀದಿಸಿದ್ದಾರೆ: ಶಾಸಕ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ(Chikkaballapur) ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆದ್ದುಬೀಗಿದ್ದು, ಬಳಿಕ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ‘ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಅವನನ್ನು ಜೈಲಿಗೆ ಹಾಕುವವರೆಗೂ ನಾನು ಬೀಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೊಡೋಣ ಎಂದು ಸವಾಲ್ ಹಾಕಿದರು. ಈ ಕುರಿತು ಒಂದು ವರದಿ ಇಲ್ಲಿದೆ.

ಕೆ.ಸುಧಾಕರ್ 7-8 ಕೋಟಿ ರೂ. ಖರ್ಚು ಮಾಡಿ ಕಾಂಗ್ರೆಸ್​​ ಸದಸ್ಯರನ್ನು ಖರೀದಿಸಿದ್ದಾರೆ: ಶಾಸಕ ಪ್ರದೀಪ್ ಈಶ್ವರ್
ಪ್ರದೀಪ್ ಈಶ್ವರ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 12, 2024 | 4:28 PM

ಚಿಕ್ಕಬಳ್ಳಾಪುರ, ಸೆ.12: ಇಂದು(ಸೆ.12) ನಡೆದ ಚಿಕ್ಕಬಳ್ಳಾಪುರ(Chikkaballapur) ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆದ್ದುಬೀಗಿದೆ. ಇದೀಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ (Pradeep Eshwar), ‘ ನಗರಸಭೆ ಚುನಾವಣೆಗೆ ಸಂಸದ ಕೆ.ಸುಧಾಕರ್ 7 ರಿಂದ 8 ಕೋಟಿ ರೂಪಾಯಿ ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ ಎಂದು ಸುಧಾಕರ್​ ವಿರುದ್ದ ವಾಗ್ದಾಳಿ ನಡೆಸಿದರು.

 ಕೆ.ಸುಧಾಕರ್​ನನ್ನು ಜೈಲಿಗೆ ಹಾಕುವವರೆಗೂ ಬೀಡಲ್ಲ-ಪ್ರದೀಪ್ ಈಶ್ವರ್

ಅಷ್ಟೇ ಅಲ್ಲ, ಅವರು ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಗೆ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ, ಮುಂದೆ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ. ಮುಂದಿನ ನಗರಸಭೆ ಚುನಾವಣೆಯಲ್ಲಿ ‘ಕೈ​’ ಬಾವುಟ ಹಾರಿಸುತ್ತೇನೆ ಎಂದು ಪ್ರದೀಪ್ ಈಶ್ವರ್ ಕಿಡಿಕಾರಿದರು. ಜೊತೆಗೆ ಕೆ.ಸುಧಾಕರ್ ಅಲ್ಲ, ಅವರ ಅಪ್ಪನ ಕೈಯಲ್ಲೂ ನನ್ನ ಏನೂ ಮಾಡೋಕೆ ಆಗಲ್ಲ. ಆತ ಒಬ್ಬ ಕೋವಿಡ್ ಕಳ್ಳ. ಅವನನ್ನು ಜೈಲಿಗೆ ಹಾಕುವವರೆಗೂ ಬೀಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೊಡೋಣ ಎಂದು ಸವಾಲ್ ಹಾಕಿದರು.

ಇದನ್ನೂ ಓದಿ:ಇತ್ತ ನಾಳೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರ ಚುನಾವಣೆ; ಅತ್ತ ಜೆಡಿಎಸ್​ನ ಇಬ್ಬರು ಸದಸ್ಯರು ನಾಪತ್ತೆ

ಇನ್ನು ಈ ಬಾರಿ ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ತೀವ್ರ ಕುತೂಹಲದಿಂದ ಕೂಡಿತ್ತು. ಜೊತೆಗೆ ಸಂಸದ ಡಾ.ಕೆ.ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ಮಧ್ಯೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಈ ಹಿನ್ನಲೆ ಡಿ.ವೈ.ಎಸ್ಪಿ ಶಿವಕುಮಾರ್ ನೇತೃತ್ವದಲ್ಲಿ 150ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್ ಕೂಡ ಮಾಡಲಾಗಿತ್ತು. ಇನ್ನು ನಿನ್ನೆಯಷ್ಟೇ(ಸೆ.11) ನಗರಸಭೆ ಚುನಾವಣೆ ಬೆನ್ನಲ್ಲೇ ಜೆಡಿಎಸ್​ನ ಇಬ್ಬರು ನಗರಸಭೆ ಸದಸ್ಯರಾದ ಮಟಮಪ್ಪ ಹಾಗೂ ವೀಣಾ ರಾಮು ಎನ್ನುವವರು ನಾಪತ್ತೆಯಾಗಿದ್ದರು. ಆ ಮೂಲಕ ತೀವ್ರ ಹಣಾಹಣಿಗೆ ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ಕಾರಣವಾಗಿತ್ತು. ಇದೀಗ ಶಥಾಯಗತಾಯವಾಗಿ ಬಿಜೆಪಿಗೆ ನಗರಸಭೆ ಚುಕ್ಕಾಣಿ ಒಲಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Thu, 12 September 24

ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು