AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ತಿಂಗಳ ಮಗಳನ್ನು ದಡದಲ್ಲಿ ಬಿಟ್ಟು ಕೆರೆಗೆ ಹಾರಿದ ತಾಯಿ; ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಂದ ತಾಯಿಗಾಗಿ ಹುಡುಕಾಟ

ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ತಾಯಿ ಪರಿಮಳಾಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪತಿ ಮುನಿರಾಜು ಮದ್ಯವೆಸನಿ ಆಗಿದ್ದರಿಂದ ಮನನೊಂದಿದ್ದ ಪರಿಮಳಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

8 ತಿಂಗಳ ಮಗಳನ್ನು ದಡದಲ್ಲಿ ಬಿಟ್ಟು ಕೆರೆಗೆ ಹಾರಿದ ತಾಯಿ; ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಂದ ತಾಯಿಗಾಗಿ ಹುಡುಕಾಟ
8 ತಿಂಗಳ ಮಗಳನ್ನು ದಡದಲ್ಲಿ ಬಿಟ್ಟು ಕೆರೆಗೆ ಹಾರಿದ ತಾಯಿ
Follow us
TV9 Web
| Updated By: ಆಯೇಷಾ ಬಾನು

Updated on:Jun 29, 2022 | 3:51 PM

ಚಿಕ್ಕಬಳ್ಳಾಪುರ: 8 ತಿಂಗಳ ಮಗಳು ಚರಿತ್ರಾಳನ್ನ ದಡದಲ್ಲಿ ನಿಲ್ಲಿಸಿ ಕೆರೆಯಲ್ಲಿ(pond) ಮುಳುಗಿ ಮಹಿಳೆ ಪರಿಮಳ ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನೂಗಲಬಂಡೆಯಲ್ಲಿ ನಡೆದಿದೆ. ತಾಯಿ ನೀರಿನಲ್ಲಿ ಮುಳುಗುವುದನ್ನು ನೋಡಿದ 8 ತಿಂಗಳ ಮಗು ತಾಯಿ ಹುಡುಕಿಕೊಂಡು ನೀರಿಗಿಳಿದಿದೆ. ಇದನ್ನು ಗಮನಿಸಿದ ಸ್ಥಳೀಯರು ಮಗುವನ್ನು ರಕ್ಷಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ತಾಯಿ ಪರಿಮಳಾಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪತಿ ಮುನಿರಾಜು ಮದ್ಯವೆಸನಿ ಆಗಿದ್ದರಿಂದ ಮನನೊಂದಿದ್ದ ಪರಿಮಳಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚಿಗಷ್ಟೇ ಮುನಿರಾಜುನನ್ನು ಮದ್ಯ ವೇಸನ ಮುಕ್ತ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದ್ರೆ ಮುನಿರಾಜು, ಪರಿಮಳಳಾ ತಂದೆ ತಾಯಿಯನ್ನು ಕಚ್ಚಿ ಗಾಯಗೋಳಿಸಿದ್ದ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪವಿತ್ರಾ ಲೋಕೇಶ್ ನಮ್ಮ ಮನೆಗೆ ಬಂದಾಗ ಬೆಳ್ಳಿ ತಟ್ಟೆಯಲ್ಲಿ ಊಟ ಹಾಕಿದ್ವಿ; ನರೇಶ್ ಹೆಂಡತಿಯ ಮಾತು

ಬುದ್ಧಿ ಹೇಳಲು ಬಂದ ಮಾವನ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಅಳಿಯ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದ್ದು, ಬುದ್ಧಿ ಹೇಳಲು ಬಂದವರ ನಾಲ್ವರ ಮೇಲೆ ದುಷ್ಕರ್ಮಿ ಪೆಟ್ರೋಲ್ (Petrol)​ ಸುರಿದು ಬೆಂಕಿ (Fire) ಹಚ್ಚಿದ್ದಾನೆ. ಪರಿಣಾಮ ಓರ್ವ ಸಜೀವ ದಹನವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಕೆಲ ದಿನಗಳಿಂದ ಪತಿ ಶರಣಪ್ಪ ಮತ್ತು ಪತ್ನಿ ಹುಲಿಗಮ್ಮ ನಡುವೆ ಜಗಳವಾಗಿತ್ತು. ಈ ಸಂಬಂಧ ಶರಣಪ್ಪನಿಗೆ ಬುದ್ಧಿ ಹೇಳಲು ಪತ್ನಿ ಹುಲಿಗೆಮ್ಮಳ ತಂದೆ ಹಾಗೂ ಮೂವರು ಸಂಬಂಧಿಕರು (Relatives) ಬಂದಿದ್ದರು. ಈ ವೇಳೆ ಶರಣಪ್ಪ ನಾಲ್ಕು ಜನರನ್ನು ಕೋಣೆಯಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಪರಿಣಾಮ ನಾಗಪ್ಪ ಎಂಬಾತ ಸಾವನ್ನಪ್ಪಿದ್ದು, ಸಿದ್ರಾಮಪ್ಪ, ಮುತ್ತಪ್ಪ, ಶರಣಪ್ಪಗೆ ಗಂಭೀರ ಗಾಯಗಳಾಗಿವೆ. ಪತ್ನಿಯ ತವರು ಮನೆಯವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಇಬ್ಬರು ಹಾಗೂ ಸರೂರು ಗ್ರಾಮದ ಇಬ್ಬರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 3:35 pm, Wed, 29 June 22

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ