AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನಲ್ಲಿ ಮುಳುಗಿಸಿ ಅಣ್ಣನ ಮಗನನ್ನು ಕೊಂದನಾ ತಮ್ಮ? ಆರೋಪಿಗೆ ಒದ್ದು ಬುದ್ಧಿ ಕಲಿಸಿದ ಸ್ಥಳಿಯರು!

ಸ್ವಂತ ತಮ್ಮನ ವಿರುದ್ದವೇ... ತನ್ನ ಮಗನನ್ನೇ ಕೊಲೆ ಮಾಡಿದ ಆರೋಪವನ್ನು ಮುನೀಂದ್ರ ಮಾಡಿದ್ದಾನೆ. ರಾತ್ರಿಯಿಡಿ ಮಗನಿಗಾಗಿ ಹುಡುಕಾಡಿದ್ರೂ... ಜೊತೆಗಿದ್ದ ತನ್ನ ತಮ್ಮ ಸತೀಶ ಸತ್ಯ ಹೇಳಿಲ್ಲ, ಯಾರೋ ಫ್ರೆಂಡ್ ಜೊತೆ ಹೋದ ಅಂತ ಸುಳ್ಳು ಹೇಳಿದ್ನಂತೆ.

ನೀರಿನಲ್ಲಿ ಮುಳುಗಿಸಿ ಅಣ್ಣನ ಮಗನನ್ನು ಕೊಂದನಾ ತಮ್ಮ? ಆರೋಪಿಗೆ ಒದ್ದು ಬುದ್ಧಿ ಕಲಿಸಿದ ಸ್ಥಳಿಯರು!
ನೀರಿನಲ್ಲಿ ಮುಳುಗಿಸಿ ಅಣ್ಣನ ಮಗನನ್ನು ಕೊಂದನಾ ತಮ್ಮ?
TV9 Web
| Updated By: ಸಾಧು ಶ್ರೀನಾಥ್​|

Updated on: Mar 02, 2023 | 2:47 PM

Share

ಆತ 11 ವರ್ಷದ ಬಾಲಕ, ಧಿಡೀರ್ ಅಂತ ನಿನ್ನೆ ನಾಪತ್ತೆಯಾಗಿದ್ದ, ಆದ್ರೆ ಅದೇ ಬಾಲಕ ಇಂದು ಬೆಟ್ಟದ ಮಧ್ಯೆ ನೀರಿನ ಕುಂಟೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸ್ವತಃ ಬಾಲಕನ ಚಿಕ್ಕಪ್ಪನೆ ಮಗನನ್ನು ನೀರಿನಲ್ಲಿ ಮುಳುಗಿ ಕೊಂದ (Murder) ಆರೋಪ (Allegation) ವ್ಯಕ್ತವಾಗಿದೆ. ಮೇಲಿನ ಭಾವಚಿತ್ರದಲ್ಲಿರುವ ಬಾಲಕನ ಹೆಸರು ಅಭಿಷೇಕ. ಇನ್ನೂ ಈಗ 13 ವರ್ಷ ವಯಸ್ಸು, 7ನೇ ತರಗತಿಯ ವಿದ್ಯಾರ್ಥಿ. ಚಿಕ್ಕಬಳ್ಳಾಪುರ (Chikkaballapur) ತಾಲೂಕು ಬಾದಗಾನಹಳ್ಳಿ ನಿವಾಸಿ. ಮುನೀಂದ್ರ ಹಾಗೂ ಮಮತ ದಂಪತಿಯ ಮಗ. ನಿನ್ನೆ ತನ್ನ ಚಿಕ್ಕಪ್ಪ ಸತೀಶ ಜೊತೆ ಹಸು ಮೇಯಿಸಲು ಗ್ರಾಮದ ಹೊರವಲಯಕ್ಕೆ ಹೋಗಿದ್ದ. ನೀರಿನಲ್ಲಿ ಹಸು ಮೈ ತೊಳೆಯಲು ಸತೀಶ ನೀರಿಗೆ ಇಳಿದಿದ್ದಾನೆ. ಆಗ ಅಭಿಷೇಕ ನೀರಿನಲ್ಲಿ ಈಜಾಡಲು ಮುಂದಾಗಿದ್ದಾನೆ. ಆಗ ಬಾಲಕನ ಚಿಕ್ಕಪ್ಪ ಸತೀಶ, ಅಭಿಷೇಕನನ್ನು ನೀರಿನಲ್ಲಿ ಒದ್ದಿದ್ದಾನೆ. ಅದರಿಂದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ನಂತರ ಜೊತೆಗಿದ್ದ ಮೃತ ಬಾಲಕನ ಸ್ನೇಹಿತ ಶ್ರೀನಿವಾಸ್ ಗೂ ಪ್ರಾಣ ಬೆದರಿಕೆ ಹಾಕಿ, ಸಾವಿನ ವಿಷಯ ತಿಳಿಸದಂತೆ ಮಾಡಿದ್ದಾನೆ. ಇತ್ತ ಮೃತ ಬಾಲಕನ ತಂದೆ ತಾಯಿ ಬಂಧು ಬಳಗ, ರಾತ್ರಿಯಿಡಿ ಹುಡುಕಾಡಿದ್ರೂ ಮೃತ ಬಾಲಕನ ಸುಳಿವು ಸಿಕ್ಕಿಲ್ಲ. ನಂತರ ಸತ್ಯ ತಿಳಿದು ಸತೀಶನನ್ನು ಹಿಡಿದು ಒದೆ ಕೊಟ್ಟಿದ್ದಾರೆ (Brother).

ಸ್ವಂತ ತಮ್ಮನ ವಿರುದ್ದವೇ… ತನ್ನ ಮಗನನ್ನೇ ಕೊಲೆ ಮಾಡಿದ ಆರೋಪವನ್ನು ಮುನೀಂದ್ರ ಮಾಡಿದ್ದಾನೆ. ರಾತ್ರಿಯಿಡಿ ಮಗನಿಗಾಗಿ ಹುಡುಕಾಡಿದ್ರೂ… ಜೊತೆಗಿದ್ದ ತನ್ನ ತಮ್ಮ ಸತೀಶ ಸತ್ಯ ಹೇಳಿಲ್ಲ, ಯಾರೋ ಫ್ರೆಂಡ್ ಜೊತೆ ಹೋದ ಅಂತ ಸುಳ್ಳು ಹೇಳಿದ್ನಂತೆ. ಇದ್ರಿಂದ ಸತೀಶನ ಮೇಲೆ ಬಲವಾದ ಅನುಮಾನ ವ್ಯಕ್ತವಾಗಿದೆ. ಆದ್ರೂ ಸತೀಶ ಹೇಳೋದೆ ಬೇರೆ, ತಾನು ನೀರಿನಲ್ಲೆ ಹಸು ಮೈ ತೊಳೆಯುತ್ತಿದ್ದೆ, ನೀರಿನಲ್ಲಿ ತನ್ನ ಮಗ ಜಂಪ್ ಹೊಡೆದ, ಆ ಮೇಲೆ ಏನಾಗಿದೆಯೊ ಗೊತ್ತಿಲ್ಲ ಎನ್ನುತ್ತಿದ್ದಾನೆ.

ಇನ್ನು… ಸತೀಶ್ ಸಹ ಅಣ್ಣ ಮುನೀಂದ್ರ ಮನೆಯಲ್ಲಿ ವಾಸವಾಗಿದ್ದನಂತೆ. ಆದ್ರೆ ಘಟನೆ ನಡೆದ ನಂತರ ಮನೆಗೆ ಬಂದ ಸತೀಶ್ ಯಾರಿಗೂ ವಿಷಯ ತಿಳಿಸಿರಲಿಲ್ಲ.. ಕೊನೆಗೆ ಇಂದು ಬೆಳಿಗ್ಗೆ ಘಟನಾ ಸ್ಥಳಕ್ಕೆ ಬಂದಿದ್ದ ಸತೀಶ್ ಮೇಲೆ ಸಂಬಂಧಿಕರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದು ಒಂದೆಡೆಯಾದ್ರೆ… ಮತ್ತೊಂದೆಡೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಸತೀಶನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವರದಿ: ಭೀಮಪ್ಪ ಪಾಟೀಲ, ಟಿವಿ9, ಚಿಕ್ಕಬಳ್ಳಾಪುರ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!