AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಯಿಂದ ಗುಡ್ಡ ಕುಸಿತವಾಗಿ ಕೊಚ್ಚಿ ಹೋಗಿದ್ದ ನಂದಿ ಬೆಟ್ಟದ ರಸ್ತೆ ಸಂಚಾರಕ್ಕೆ ಸಿದ್ಧ

ಆಗಸ್ಟ್ 24ರ ರಾತ್ರಿ ನಂದಿ ಬೆಟ್ಟದ ಪಕ್ಕದ ಬ್ರಹ್ಮಗಿರಿ ಬೆಟ್ಟದಲ್ಲಿ ಗುಡ್ಡ ಕುಸಿತವಾಗಿ, ನಂದಿಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿ ಹೋಗಿತ್ತು. ಅಂದಿನಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ಬಂದ್ ಆಗಿತ್ತು.

ಭಾರೀ ಮಳೆಯಿಂದ ಗುಡ್ಡ ಕುಸಿತವಾಗಿ ಕೊಚ್ಚಿ ಹೋಗಿದ್ದ ನಂದಿ ಬೆಟ್ಟದ ರಸ್ತೆ ಸಂಚಾರಕ್ಕೆ ಸಿದ್ಧ
ನಂದಿ ಬೆಟ್ಟ
TV9 Web
| Edited By: |

Updated on: Nov 11, 2021 | 6:27 PM

Share

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮ ಬೆಂಗಳೂರಿಗರ ಪಾಲಿಗೆ ವಿಕೇಂಡ್ ಹಾಟ್​ಸ್ಪಾಟ್​. ಆದರೆ, ನಂದಿ ಬೆಟ್ಟದ ರಸ್ತೆ ಮಾರ್ಗ ಬಂದ್ ಆಗಿ ಪ್ರವಾಸಿಗರ ಪಾಲಿಗೆ ನಂದಿ ಬೆಟ್ಟ ದೂರವಾಗಿತ್ತು. ಆದರೆ, ಈಗ ಕೊಚ್ಚಿ ಹೋಗಿದ್ದ ರಸ್ತೆ ಮರು ನಿರ್ಮಾಣ ಕಾರ್ಯ ಮುಕ್ತಾಯವಾಗಿದ್ದು, ಇನ್ನೇನು ಇನ್ನೊಂದು ವಾರದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಸಿಗಲಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಆಗಸ್ಟ್ 24ರ ರಾತ್ರಿ ನಂದಿ ಬೆಟ್ಟದ ಪಕ್ಕದ ಬ್ರಹ್ಮಗಿರಿ ಬೆಟ್ಟದಲ್ಲಿ ಗುಡ್ಡ ಕುಸಿತವಾಗಿ, ನಂದಿಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿ ಹೋಗಿತ್ತು. ಅಂದಿನಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ಬಂದ್ ಆಗಿತ್ತು. ಇದರಿಂದ ರಾಜ್ಯ ಸರ್ಕಾರ 80 ಲಕ್ಷ ರೂ. ವೆಚ್ಚ ಮಾಡಿ, ಕೊಚ್ಚಿ ಹೋದ ರಸ್ತೆಯ ಮರು ನಿರ್ಮಾಣ ಕಾರ್ಯ ಮಾಡಿದೆ. ಇನ್ನೇನು ಬಹುತೇಕ ರಸ್ತೆ ಕಾಮಗಾರಿ ಮುಗಿದಿದ್ದು, ತಡೆಗೋಡೆಗಳ ನಿರ್ಮಾಣ ಕಾರ್ಯ ಮಾತ್ರ ಬಾಕಿ ಇದೆ. ಎಲ್ಲಾ ಅಂದುಕೊಂಡಂತೆ ಆದರೆ, ಇನ್ನೊಂದು ವಾರದಲ್ಲಿ ರಸ್ತೆ ಉದ್ಘಾಟನೆ ಆಗಲಿದೆ.

80 ಲಕ್ಷ ರೂ. ವೆಚ್ಚದಲ್ಲಿ, 40 ಮೀಟರ್ ಉದ್ದದ ರಸ್ತೆಗೆ, ಭದ್ರವಾದ ಸಿಮೆಂಟ್ ಕಾಂಕ್ರೀಟ್ ಸೇತುವೆ ನಿರ್ಮಾಣ ಮಾಡಲಾಗಿದ್ದು, ಬೆಟ್ಟದಿಂದ ಬರುವ ನೀರು ಸರಾಗವಾಗಿ ಹರಿದು ಹೋಗಲು ಬೃಹತ್ ಗಾತ್ರದ ಪೈಪ್​ಗಳನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಎಷ್ಟೇ ಮಳೆಯಾದರೂ ರಸ್ತೆಗೆ ತೊಂದರೆಯಾಗದ ಹಾಗೆ ಸೇತುವೆ ಮೇಲೆ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ.

ಇದೀಗ ಬಹುತೇಕ ರಸ್ತೆ ಕಾಮಗಾರಿ ಮುಕ್ತಾಯವಾಗಿದ್ದು, ಅಧಿಕೃತವಾಗಿ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಆದರೆ, ಶೀಘ್ರದಲ್ಲಿ ನಂದಿ ಗಿರಿಧಾಮ ಪ್ರವಾಸಿಗರ ಪ್ರವೇಶಕ್ಕೆ ಮುಕ್ತವಾಗಲಿದೆ.

ವರದಿ: ಭೀಮಪ್ಪ ಪಾಟೀಲ

ಇದನ್ನೂ ಓದಿ: ಮೈಸೂರಿನಲ್ಲಿ ಭಾರಿ ಮಳೆ, ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಭೂಮಿ ಕುಸಿತ

Temple Tour: ನಂದಿ ಗಿರಿಧಾಮದ ಬಳಿ ಇದೆ ಐತಿಹಾಸಿಕ ಬಸವಣ್ಣ

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು