AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandi Hills: ನಂದಿಬೆಟ್ಟದ ವಾಹನ ನಿಲುಗಡೆ ಸ್ಥಳದಲ್ಲಿ ಕುಸಿತ; ಪ್ರಾಣಹಾನಿ ಸಂಭವಿಸಿಲ್ಲ

Nandi Betta: ಬೆಟ್ಟ ಕುಸಿದ ಸ್ಥಳದಲ್ಲೇ ಸಿಬ್ಬಂದಿಯ ಕೊಠಡಿ ಇದೆ. ಆದರೆ, ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ತೊಂದರೆ ಆಗಿಲ್ಲ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿ ಘಟನೆ ಸಂಭವಿಸಿದೆ.

Nandi Hills: ನಂದಿಬೆಟ್ಟದ ವಾಹನ ನಿಲುಗಡೆ ಸ್ಥಳದಲ್ಲಿ ಕುಸಿತ; ಪ್ರಾಣಹಾನಿ ಸಂಭವಿಸಿಲ್ಲ
ನಂದಿ ಬೆಟ್ಟದಲ್ಲಿ ಕುಸಿತ
TV9 Web
| Updated By: ganapathi bhat|

Updated on:Aug 25, 2021 | 5:01 PM

Share

ಚಿಕ್ಕಬಳ್ಳಾಪುರ: ನಂದಿಬೆಟ್ಟದ ವಾಹನ ನಿಲುಗಡೆ ಸ್ಥಳದಲ್ಲಿ ಬೆಟ್ಟ ಕುಸಿದ ಘಟನೆ ಸಂಭವಿಸಿದೆ. ಬೆಟ್ಟ ಕುಸಿದ ಸ್ಥಳದಲ್ಲೇ ಸಿಬ್ಬಂದಿಯ ಕೊಠಡಿ ಇದೆ. ಆದರೆ, ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ತೊಂದರೆ ಆಗಿಲ್ಲ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿ ಘಟನೆ ಸಂಭವಿಸಿದೆ. ರಾತ್ರಿಯಿಡೀ ಸುರಿದ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಗುಡ್ಡಗಳು ಕುಸಿದಿವೆ. ಇದರಿಂದಾಗಿ ರಸ್ತೆ ಸಂಚಾರ ಬಂದ್​ ಆಗಿದೆ. ಪರಿಣಾಮ ಈ ವಾರದ ಕೊನೆಗೆ ನಂದಿ ಗಿರಿಧಾಮ ನೋಡಲು ಹೋಗುವವರಿಗೆ ನಿರಾಸೆಯಾಗಿದೆ. 

ನಂದಿಬೆಟ್ಟದ ವಾಹನ ನಿಲುಗಡೆ ಸ್ಥಳದಲ್ಲಿ ಬೆಟ್ಟ ಕುಸಿದಿದೆ. ಬೆಟ್ಟ ಕುಸಿದ ಸ್ಥಳದಲ್ಲೇ ಸಿಬ್ಬಂದಿಯ ಕೊಠಡಿ ಇದೆ. ಆದರೆ, ಸಿಬ್ಬಂದಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ರಾತ್ರಿ ಸುರಿದ ಧಾರಾಕಾರ ಮಳೆಗೆ ನಂದಿಗಿರಿಧಾಮ ತತ್ತರ. ಗಿರಿಧಾಮದ ಮೇಲೆಯೂ ಬೆಟ್ಟ ಕುಸಿತವಾಗಿದೆ. ವಾಹನಗಳ ನಿಲುಗಡೆ ಸ್ಥಳದಲ್ಲಿಯೂ ಬೆಟ್ಟ ಕುಸಿದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗುಡ್ಡ ಕುಸಿತದಿಂದ ಗಿರಿಧಾಮದ ರಸ್ತೆ ಕೊಚ್ಚಿ ಹೋಗಿದೆ. ರಸ್ತೆ ಸಂಚಾರಕ್ಕೆ ಪೂರಕವಾಗಿ ಮಾಡಲು ಒಂದು ವಾರ ಸಮಯ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದ ಬಳಿ ತೆರವು ಕಾರ್ಯ ನಂದಿ ಗಿರಿಧಾಮದ ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿತ ಹಿನ್ನೆಲೆ ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮಣ್ಣು ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಸ್ಥಳಕ್ಕೆ ಪಿಡಬ್ಲ್ಯೂಡಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಚ್ಚಿ ಹೋದ ರಸ್ತೆಯನ್ನು ಜೆಸಿಬಿ ಮೂಲಕ ದುರಸ್ಥಿ ಮಾಡಲು ಅಧಿಕಾರಿಗಳು ಮುಂದಾಗಿದ್ದು, ಪಿಡಬ್ಲ್ಯೂಡಿ ಇಂಜಿನಿಯರ್ ಸಂತೋಷ ನೇತೃತ್ವದಲ್ಲಿ ರಸ್ತೆ ದುರಸ್ಥಿ ಕಾರ್ಯ ಆರಂಭವಾಗಿದೆ.

ಗಿರಿಧಾಮದ ವಸತಿ ಗೃಹದಲ್ಲಿ ತಂಗಿರುವ ಪ್ರವಾಸಿಗರಿಗೆ ಪರ್ಯಾಯ ವ್ಯವಸ್ಥೆ ನಂದಿ ಗಿರಿಧಾಮದಲ್ಲಿ ಗುಡ್ಡ ಕುಸಿದು ರಸ್ತೆ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಗಿರಿಧಾಮದಿಂದ ಬೆಂಗಳೂರಿಗೆ ಬರಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಕಾರುಗಳು ಕೆಳಗೆ ಬರಲಾಗದೆ ಇದ್ದಿದ್ದರಿಂದ ಕಾಲ್ನಡಿಗೆಯಲ್ಲಿ ಸುಲ್ತಾನ ಪೇಟೆ ಮಾರ್ಗವಾಗಿ ಕೆಳಗೆ ಇಳಿಯಲು ಕೆಎಸ್​​ಟಿಡಿಸಿ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ: ಪ್ರವಾಸಿಗರನ್ನು ವಾಪಸ್ ಕಳಿಸುತ್ತಿರುವ ಪೊಲೀಸರು

ಗುಡ್ಡ ಕುಸಿತ ಹಿನ್ನೆಲೆ ನಂದಿಬೆಟ್ಟಕ್ಕೆ 20 ದಿನ ಪ್ರವೇಶ ಬಂದ್: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ

Published On - 4:48 pm, Wed, 25 August 21

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!