AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi Visit: ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ; ಗಣಿ ಸ್ಫೋಟ, ಸ್ಪೋಟಕ ಸಾಗಾಟಕ್ಕೆ ನಿರ್ಬಂಧ

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕಲ್ಲು, ಕ್ವಾರಿ, ಕ್ರಶರ್‌ಗಳಿಗೆ ಗಣಿಗಾರಿಕೆಗಳ ಸ್ಪೋಟಕ್ಕೆಂದು ಸ್ಫೋಟಕ ಸಾಮಗ್ರಿಗಳನ್ನು ಸರಬರಾಜು ಮಾಡುವ ಅಧಿಕೃತ ಗುತ್ತಿಗೆದಾರರಿಗೆ ಪೊಲೀಸರು ನೋಟೀಸ್ ಜಾರಿ ಮಾಡಿ ಎಚ್ಚರಿಕೆ ನೀಡಿದ್ದಾರೆ.

Narendra Modi Visit: ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ; ಗಣಿ ಸ್ಫೋಟ, ಸ್ಪೋಟಕ ಸಾಗಾಟಕ್ಕೆ ನಿರ್ಬಂಧ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Mar 24, 2023 | 7:20 PM

Share

ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಖಾಸಗಿ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಮಾರ್ಚ್ 27ರಂದು ಚಿಕ್ಕಬಳ್ಳಾಪುರ (Chikkaballapur) ತಾಲ್ಲೂಕಿನ ಬಂಡಹಳ್ಳಿ ಕ್ರಾಸ್ ಬಳಿ ಸರ್ಕಾರಿ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮಾರ್ಚ್ 22 ರಿಂದ ಮಾರ್ಚ್ 27ರವರೆಗೂ ಸ್ಫೋಟಕ ಸಾಮಗ್ರಿಗಳ ಸಾಗಾಟ ಸೇರಿದಂತೆ ಕಲ್ಲು, ಕ್ವಾರಿ, ಕ್ರಷರ್‌ಗಳಲ್ಲಿ ಗಣಿಗಾರಿಕೆ ಸ್ಪೋಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕಲ್ಲು, ಕ್ವಾರಿ, ಕ್ರಶರ್‌ಗಳಿಗೆ ಗಣಿಗಾರಿಕೆಗಳ ಸ್ಪೋಟಕ್ಕೆಂದು ಸ್ಫೋಟಕ ಸಾಮಗ್ರಿಗಳನ್ನು ಸರಬರಾಜು ಮಾಡುವ ಅಧಿಕೃತ ಗುತ್ತಿಗೆದಾರರಿಗೆ ಪೊಲೀಸರು ನೋಟೀಸ್ ಜಾರಿ ಮಾಡಿ ಎಚ್ಚರಿಕೆ ನೀಡಿದ್ದಾರೆ. ಕಲ್ಲು, ಕ್ವಾರಿ, ಕ್ರಶರ್‌ಗಳಲ್ಲಿ ಸ್ಪೋಟಕಗಳನ್ನು ಇಟ್ಟು ಬಂಡೆ ಸಿಡಿಸಿದರೆ ಸ್ಫೋಟಕ ಸಾಮಗ್ರಿಗೆ ಸಂಬಂಧಿಸಿದ ಗುತ್ತಿಗೆದಾರರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಎಚ್ಚರಿಕೆ ನೀಡಲಾಗಿದೆ.

ಯಾರಿಗೆಲ್ಲೆ ನೋಟೀಸ್ ಜಾರಿ?

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಕಲ್ಲು, ಕ್ವಾರಿ, ಕ್ರಶರ್‌ಗಳಿಗೆ ಮೂವರು ಅಧಿಕೃತ ಗುತ್ತಿಗೆದಾರರು ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸರಬರಾಜು ಮಾಡುತ್ತಾರೆ. ಬಾಗೇಪಲ್ಲಿ ತಾಲ್ಲೂಕಿನ ಪುಟ್ಟಪರ್ತಿ ಬಳಿ ಇರುವ ಶಿವನಾರಾಯಣ ಎಂಟರ್‌ಪ್ರೈಸೆಸ್, ಚಪ್ಪರದಹಳ್ಳಿ ಬಳಿ ಇರುವ ಪವನ್ ಬ್ಲಾಕ್ ರಾಕ್ ಸರ್ವೀಸ್ ಹಾಗೂ ಯರಮಾರನಹಳ್ಳಿ ಬಳಿ ಇರುವ ಎಸ್.ವಿ.ಎಲ್.ಎಸ್. ಎಕ್ಸಪ್ಲೊಸೀವ್ ಸಂಸ್ಥೆಗಳಿಗೆ ನೋಟೀಸ್ ಜಾರಿ ಮಾಡಿ ಎಚ್ಚರಿಕೆ ನೀಡಲಾಗಿದೆ.

ಬೆಳಿಗ್ಗೆ ಸುಮಾರು 10.50ಕ್ಕೆ ಚಿಕ್ಕಬಳ್ಳಾಪುರಕ್ಕೆ ತಲುಪಲಿರುವ ಮೋದಿ, 11.15ಕ್ಕೆ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ ಮಾಡಲಿದ್ದಾರೆ. ಪ್ರಧಾನಿ ಕಾರ್ಯಕ್ರಮದ ನಿಮಿತ್ತ ಜಿಲ್ಲೆಯದಾದ್ಯಂತ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

– ಭೀಮಪ್ಪ ಪಾಟೀಲ ಟಿವಿ9 ಚಿಕ್ಕಬಳ್ಳಾಪುರ

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,