AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ವರ್ಷದಲ್ಲಿ ಇಂತಹ ಮಳೆ ನೋಡಿಲ್ಲ, ಮನೆ ದುರಸ್ತಿಗೆ ತಲಾ 5 ಲಕ್ಷ ಪರಿಹಾರ: ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸುಧಾಕರ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗಾಗಲೇ ಕಾಳಜಿ ಕೇಂದ್ರ ತೆರೆದಿದ್ದೇವೆ. ಇನ್ನೂ 2-3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ನೀರು ಹರಿಯುವ ಕಡೆ ಹೋಗಬೇಡಿ ಎಂದು ಕಟ್ಟೆಚ್ಚರದ ಮನವಿ ಮಾಡಿಕೊಂಡ ಸಚಿವ ಸುಧಾಕರ್, ಜಿಲ್ಲೆಯಲ್ಲಿ ಈಗಾಗಲೇ 3 ಜನ ಕೊಚ್ಚಿಹೋಗಿದ್ದಾರೆ. ಸೇತುವೆಗಳ ಮೇಲೆ ಯಾರೂ ಹೋಗಬೇಡಿ ಎಂದು ಮನವಿ ಮಾಡಿದರು.

50 ವರ್ಷದಲ್ಲಿ ಇಂತಹ ಮಳೆ ನೋಡಿಲ್ಲ, ಮನೆ ದುರಸ್ತಿಗೆ ತಲಾ 5 ಲಕ್ಷ ಪರಿಹಾರ: ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸುಧಾಕರ್
50 ವರ್ಷ ಇತಿಹಾಸದಲ್ಲಿ ಇಂತಹ ಮಳೆ ನೋಡಿಲ್ಲ, ಮನೆ ದುರಸ್ತಿಗೆ ತಲಾ 5 ಲಕ್ಷ ಪರಿಹಾರ: ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸುಧಾಕರ್
TV9 Web
| Edited By: |

Updated on:Nov 20, 2021 | 9:54 AM

Share

ಚಿಕ್ಕಬಳ್ಳಾಪುರ: ಬರದ ನಾಡು ಚಿಕ್ಕಬಳ್ಳಾಪುರ ಜಿಲ್ಲೆಯ ಮೇಲೆ ಮುನಿಸಿಕೊಂಡಂತೆ ವರುಣರಾಯ ತನ್ನ ಪ್ರತಾಪ ತೋರುತ್ತಿದ್ದಾನೆ. ಮಳೆ ಬರಲಿ ಮಳೆ ಬರಲೀ ಎಂದು ಪರಿತಪ್ಪಿಸುತ್ತಿದ್ದ ಜಿಲ್ಲೆಯ ಜನತೆ ಇನ್ನು ಸಾಕಪ್ಪಾ ನಿನ್ನ ರೌದ್ರಾವತಾರ. ನಿಲ್ಲಿಸು ನಿನ್ನ ಆರ್ಭಟ ಎಂಬಂತಾಗಿದೆ. ಇದನ್ನೇ ಜಿಲ್ಲೆಯವರೇ ಆದ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ – 50 ವರ್ಷಗಳ ಇತಿಹಾಸದಲ್ಲಿ ಇಂತಹ ಮಳೆ ನೋಡಿಲ್ಲ. ಚಿಕ್ಕಂದಿನಿಂದಲೂ ಇಂಥ ಮಳೆ ನೀರು ಹರಿಯುವುದನ್ನು ನೋಡಿಯೆ ಇಲ್ಲ(chikkaballapur rains). ಒಂದೆಡೆ ಸಂತಸವಾದ್ರೆ ಮತ್ತೊಂದೆಡೆ ಅನಾನುಕೂಲವಾಗಿ, ಜನ ಪರಿತಪಿಸುವತಾಗಿದೆ ಎಂದು ಸಂತೋಷ ಮಿಶ್ರಿತ ವಿಷಾದ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಗೆ ಅಪಾರ ಬೆಳೆ ಹಾನಿ. ಜಿಲ್ಲೆಯಲ್ಲಿ ಈವರೆಗೆ 436 ಮನೆಗಳು ನೆಲಸಮವಾಗಿದೆ. ಬಿದ್ದ ಮನೆ ದುರಸ್ತಿಗೆ ₹ 5 ಲಕ್ಷ ಪರಿಹಾರ ನೀಡುತ್ತೇವೆ, ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸುತ್ತೇವೆ ಎಂದಿದ್ದಾರೆ ಸಚಿವ ಡಾ.ಕೆ.ಸುಧಾಕರ್ (dr k sudhakar).

ಜಿಲ್ಲೆಯಲ್ಲಿ ಈಗಾಗಲೇ ಕಾಳಜಿ ಕೇಂದ್ರ ತೆರೆದಿದ್ದೇವೆ. ಇನ್ನೂ 2-3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ನೀರು ಹರಿಯುವ ಕಡೆ ಹೋಗಬೇಡಿ ಎಂದು ಕಟ್ಟೆಚ್ಚರದ ಮನವಿ ಮಾಡಿಕೊಂಡ ಸಚಿವ ಸುಧಾಕರ್, ಜಿಲ್ಲೆಯಲ್ಲಿ ಈಗಾಗಲೇ 3 ಜನ ಕೊಚ್ಚಿಹೋಗಿದ್ದಾರೆ. ಸೇತುವೆಗಳ ಮೇಲೆ ಯಾರೂ ಹೋಗಬೇಡಿ ಎಂದು ಮನವಿ ಮಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಹಾ ಮಳೆ ಹಿನ್ನೆಲೆ ಶನಿವಾರ ಬೆಳ್ಳಂಬೆಳಿಗ್ಗೆ ಆರೋಗ್ಯ- ವೈದ್ಯಕೀಯ ಹಾಗೂ ಚಿಕ್ಕಬಳ್ಲಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ .ಕೆ. ಸುಧಾಕರ್ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಕೊಟ್ಟು, ಪರಿಶೀಲನೆ ನಡೆಸಿದರು. ಜಲಾವೃತವಾಗಿರುವ ಸೇತುವೆಗಳ ವೀಕ್ಷಣೆ ಮಾಡಿದರು. ನಗರದ ಕಂದವಾರ ಕೆರೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆ ಅಲ್ಲಿಗೆ ತೆರಳಿ ವೀಕ್ಷಣೆ ಮಾಡಿದರು.

ಜಿಲ್ಲಾಡಳಿತ ಮಳೆ ಹಾನಿ ನಿರ್ವಹಣೆಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ. 50 ವರ್ಷಗಳ ಇತಿಹಾಸದಲ್ಲಿ ಇಂತಹ ಮಳೆಯನ್ನೇ ನಾನು ನೋಡಿಲ್ಲ. ಒಂದೆಡೆ ಸಂತಸವಾದ್ರೆ ಮತ್ತೊಂದೆಡೆ ಅನಾನುಕೂಲವಾಗಿದೆ. ಎಚ್ಚರಿಕೆಯ ಮಧ್ಯೆಯೂ ಕೆಲವರು ನೀರಿಗಿಳಿಯುತ್ತಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಜನರನ್ನು ಎಚ್ಚರಿಸಬೇಕು. ಮಳೆ ಆಪತ್ತನ್ನು ಎಲ್ಲರೂ ಒಗ್ಗಟ್ಟಗಾಗಿ ಎದುರಿಸೋಣ. ಮನೆ ಕಳೆದುಕೊಂಡವರು ಆತಂಕ ಪಡಬೇಕಾಗಿಲ್ಲ. ಜಿಲ್ಲಾಡಳಿತ ನಿಮ್ಮ ಜೊತೆ ಇರುತ್ತೆ ಎಂದು ಚಿಕ್ಕಬಳ್ಳಾಪುರದಲ್ಲಿ ಸಚಿವ ಡಾ. ಕೆ. ಸುಧಾಕರ್ ಭರವಸೆ ನೀಡಿದರು.

ಹರಿಯುವ ಉತ್ತರ ಪಿನಾಕಿನಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲ್ಕಾಪುರದ ಬಳಿ ಹರಿಯುವ ಉತ್ತರ ಪಿನಾಕಿನಿ ನೀರಿನಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ರಾಯರೇಖಲಹಳ್ಳಿ ನಿವಾಸಿ ಕುಂಬಿ (55) ಕೊಚ್ಚಿ ಹೋದ ವ್ಯಕ್ತಿ. ಧಾರಾಕರ ಮಳೆಯಿಂದ ನದಿ ತುಂಬಿ ಹರಿಯುತ್ತಿರುವಾಗ ರಸ್ತೆ ದಾಟಲು ಹೋಗಿ ಕುಂಬಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದೆ.

ಚಿಕ್ಕಬಳ್ಳಾಪುರ ನಗರದ ಕಂದವಾರ ಕೆರೆಯ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಚಿಕ್ಕಬಳ್ಲಾಪುರ ನಗರಕ್ಕೆ ಜಲಕಂಟಕ ಎದುರಾಗಿದೆ. ಕೆರೆಯ ನೀರು ನಗರದ ಬಿಬಿ ರಸ್ತೆಯ ಮೇಲೆ ಹರಿಯುತ್ತಿದ್ದು ಮುಂಜಾಗೃತಾ ಕ್ರಮವಾಗಿ ಚಿಕ್ಕಬಳ್ಳಾಪುರ ನಗರಸಭೆ ಬಿಬಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿದೆ. – ಭೀಮಪ್ಪ ಪಾಟೀಲ

Chikkaballapura Lake Flood|ನಿರಂತರ ಮಳೆಯಿಂದ ಅಪಾಯಕ್ಕೆ ಆಹ್ವಾನ ನೀಡ್ತಿದೆ ಕಂದವಾರ ಕೆರೆ|TV9 KANNADA

Published On - 9:36 am, Sat, 20 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್