ರಾಜೀವ್​​ ಗೌಡ ವಿರುದ್ಧ ಮತ್ತೊಂದು ಆರೋಪ: ತಹಶೀಲ್ದಾರ್​​ಗೂ ನಿಂದಿಸಿದ್ದನಾ ‘ಕೈ’ ಮುಖಂಡ?

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ತಹಶೀಲ್ದಾರ್ ಅವರಿಗೂ ನಿಂದಿಸಲಾಗಿದೆ ಎನ್ನಲಾಗಿದ್ದು, ಈ ಬಗ್ಗೆ ತಾನು ಆಡಿಯೋ ರೆಕಾರ್ಡ್​​ ಮಾಡಿಕೊಂಡಿಲ್ಲ ಎಂದು ಅಧಿಕಾರಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿ ಹಲವರ ಬಳಿ ಅಲವತ್ತುಕೊಂಡಿದ್ದಾರಂತೆ. ಇನ್ನು ರಾಜೀವ್​ ಗೌಡ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, 3 ತಂಡಗಳು ಹುಡುಕಾಟ ನಡೆಸುತ್ತಿವೆ.

ರಾಜೀವ್​​ ಗೌಡ ವಿರುದ್ಧ ಮತ್ತೊಂದು ಆರೋಪ: ತಹಶೀಲ್ದಾರ್​​ಗೂ ನಿಂದಿಸಿದ್ದನಾ ಕೈ ಮುಖಂಡ?
ರಾಜೀವ್​​ ಗೌಡ
Edited By:

Updated on: Jan 15, 2026 | 12:18 PM

ಚಿಕ್ಕಬಳ್ಳಾಪುರ, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡ ವಿರುದ್ಧ ಇಂತಹುದ್ದೇ ಮತ್ತೊಂದು ಆರೋಪ ಕೇಳಿಬಂದಿದೆ. ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ನಿಂದಿಸಿದ್ದ ಎನ್ನಲಾಗಿದ್ದು, ಆದರೆ ತಾನು ಆಡಿಯೋ ರೆಕಾರ್ಡ್​​ ಮಾಡಿಕೊಂಡಿಲ್ಲ ಎಂದವರು ತಿಳಿಸಿದ್ದಾರೆ. ಈ ಬಗ್ಗೆ ನಗರಸಭೆ ಆಯುಕ್ತೆ ಅಮೃತಾ, ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ.

ಆರೋಪಿಗಾಗಿ 3 ತಂಡಗಳಿಂದ ಹುಡುಕಾಟ

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ವಿಚಾರವಾಗಿ ತಲೆಮರೆಸಿಕೊಂಡಿರುವ ರಾಜೀವ್​ಗೌಡಗೆ 3 ತಂಡಗಳಿಂದ ಹುಡುಕಾಟ ನಡೆಸಲಾಗುತ್ತಿದೆ. ಶಿಡ್ಲಘಟ್ಟ ಠಾಣೆಯ ಸರ್ಕಲ್ ಇನ್ಸ್​ಪೆಕ್ಟರ್ ಆನಂದಕುಮಾರ್, ಚಿಂತಾಮಣಿ ಗ್ರಾಮಾಂತರ ಠಾಣೆಯ ಇನ್ಸ್​ಪೆಕ್ಟರ್​ ಶಿವರಾಜ್ ಮತ್ತು ಸೈಬರ್ ಪೊಲೀಸ್ ಠಾಣೆ ಪಿಐ ಸೂರ್ಯಪ್ರಕಾಶ್ ನೇತೃತ್ವದಲ್ಲಿ ಶೋಧ ನಡೆಯುತ್ತಿದೆ. ಬಂಧನ ಭೀತಿಯಿಂದ ನಿನ್ನೆ ರಾತ್ರಿ ರಾಜೀವ್ ಗೌಡ ಪರಾರಿಯಾಗಿದ್ದು, ಆತನ 2 ಮೊಬೈಲ್​ಗಳು ಕೂಡ​ ಸ್ವಿಚ್​ಆಫ್ ಆಗಿವೆ. ಹೀಗಾಗಿ ಬೆಂಗಳೂರಿನ ಇಂದಿರಾನಗರದಲ್ಲಿ 1 ತಂಡ, ಸಂಜಯ್ ನಗರದಲ್ಲಿ 1 ತಂಡ ಮತ್ತು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಒಂದು ತಂಡದಿಂದ ಆರೋಪಿಗೆ ಹುಡುಕಾಟ ನಡೆಯುತ್ತಿದೆ. ಮತ್ತೊಂದೆಡೆ ರಾಜೀವ್ ಗೌಡನನ್ನು ಬಂಧಿಸದಿದ್ರೆ ಶಿಡ್ಲಘಟ್ಟ ಬಂದ್ ಮಾಡುವುದಾಗಿ ಎನ್​​ಡಿಎ ಮುಖಂಡರು ಪೊಲೀಸರಿಗೆ ಎಚ್ಚರಿಕೆ ಕೂಡ ನೀಡಿರುವ ಕಾರಣ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದನ್ನೂ ಓದಿ: ಶಿಡ್ಲಘಟ್ಟ ಕಮಿಷನರ್​​ಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ; ಕಾಂಗ್ರೆಸ್ ಮುಖಂಡನಿಗೆ ಶುರುವಾಯ್ತು ಬಂಧನದ ಭೀತಿ

ಮತ್ತೊಂದೆಡೆ ಪ್ರಾಣ ಬೆದರಿಕೆ ಆಡಿಯೋ ವೈರಲ್​​ ಆಗುತ್ತಿದ್ದಂತೆ, ಸಂಬಂಧಿಕರು ಹಾಗೂ ಪ್ರಭಾವಿ ಗುತ್ತಿಗೆದಾರನ ಮೂಲಕ ಪೌರಾಯುಕ್ತೆ ಅಮೃತಾರನ್ನು ರಾಜೀವ್​​ ಗೌಡ ಪರೋಕ್ಷವಾಗಿ ಸಂಪರ್ಕಿಸಿದ್ದ. ರಾಜಕಾರಣಿಗಳ ವಿರೋಧ ಕಟ್ಟಿಕೊಂಡರೆ ಮುಂದೆ ಪೋಸ್ಟಿಂಗ್ ಸಿಗಲ್ಲ. ಇದೆಲ್ಲ ಯಾಕೆ ಬೇಕು ಬಿಟ್ಟು ಬಿಡು ಎಂದು ರಾಜೀವ್​​ ಗೌಡ ಅಣಿತಿಯಂತೆ ಗುತ್ತಿಗೆದಾರರೊಬ್ಬರು ನಗರಸಭೆ ಪೌರಾಯುಕ್ತೆಗೆ ತಿಳಿಸಿದ್ದರು. ಆದರೆ ಹುದ್ದೆಗಿಂತ ಆತ್ಮಗೌರವ ಮುಖ್ಯ, ಬೇಕಾದರೆ ಮತ್ತೆ ಸ್ವಾಫ್ಟ್​​ವೇರ್​​ ಕೆಲಸಕ್ಕೆ ಸೇರುತ್ತೇನೆ ಎಂದು ಅಮೃತಾ ಅವರು ಈ ವೇಳೆ ಹೇಳಿದ್ದಾರೆ. ಸರ್ಕಾರಿ ಕೆಲಸಕ್ಕೆ ಸೇರುವ ಮುನ್ನ ಮಾಸಿಕ 3 ಲಕ್ಷ ರೂಪಾಯಿ ಸಂಬಳ ಪಡೆಯುತ್ತಿದ್ದೆ. ರಾಜೀವ್ ಗೌಡ ಮಾತಿನಿಂದ ಮನೆಯವರು ಬೇಸರಗೊಂಡಿದ್ದಾರೆ ಎಂದು ಅಮೃತಾ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us