AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ನವಜಾತ ಶಿಶು ಬಿಟ್ಟು ಎಸ್ಕೇಪ್: ತನಿಖೆಯಲ್ಲಿ ತಾಯಿ ಅವಿವಾಹಿತೆ ಎನ್ನುವುದು ಪತ್ತೆ

ಆಸ್ಪತ್ರೆಯಲ್ಲಿ ಹೆರಿಗೆಯಾದ ತಕ್ಷಣವೇ ನವಜಾತ ಶಿಶುವನ್ನು ತೊರೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತಾಯಿ ಪ್ರತ್ಯಕ್ಷವಾಗಿದ್ದಾರೆ. ‘ತಾನು ಅವಿವಾಹಿತೆ, ಹಾಗಾಗಿ ಮಗು ಬೇಡ’ ಎಂದು ಬಿಟ್ಟುಹೋಗಿದ್ದಾಗಿ ಚಿಕ್ಕಬಳ್ಳಾಪುರ ಮಕ್ಕಳ ರಕ್ಷಣಾಧಿಕಾರಿಗೆ ಹೇಳಿಕೆ ನೀಡಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ದೇವನಹಳ್ಳಿಯ ನಕ್ಷತ್ರಾ ಖಾಸಗಿ ಆಸ್ಪತ್ರೆ ವೈದ್ಯರು ಎಡವಟ್ಟು ಬೆಳಕಿಗೆ ಬಂದಿದೆ.

ಆಸ್ಪತ್ರೆಯಲ್ಲಿ ನವಜಾತ ಶಿಶು ಬಿಟ್ಟು ಎಸ್ಕೇಪ್: ತನಿಖೆಯಲ್ಲಿ ತಾಯಿ ಅವಿವಾಹಿತೆ ಎನ್ನುವುದು ಪತ್ತೆ
ಪ್ರಾತಿನಿಧಿಕ ಚಿತ್ರImage Credit source: tv9 kannada
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 29, 2026 | 6:44 PM

Share

ಚಿಕ್ಕಬಳ್ಳಾಪುರ, ಜುಲೈ 29: ಆಸ್ಪತ್ರೆಯಲ್ಲಿ ನವಜಾತ ಶಿಶು (Newborn baby) ಬಿಟ್ಟು ಎಸ್ಕೇಪ್​ ಆಗಿದ್ದ ತಾಯಿ ಅವಿವಾಹಿತೆ ಎನ್ನುವುದು ಇದೀಗ ತನಿಖೆಯಲ್ಲಿ ಪತ್ತೆ ಆಗಿದೆ. ಮಗು ಬಿಟ್ಟು ಹೋಗಿದ್ದ ತಾಯಿ ಇದೀಗ ಚಿಕ್ಕಬಳ್ಳಾಪುರ (chikkaballapur) ಮಕ್ಕಳ ರಕ್ಷಣಾಧಿಕಾರಿ ಮುಂದೆ ಪ್ರತ್ಯಕ್ಷವಾಗಿದ್ದಾರೆ. ಇನ್ನೊಂದೆಡರ ತಾಯಿ ಮಗು ಬಿಟ್ಟು ಹೋದ ದಿನ ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡದೆ ದೇವನಹಳ್ಳಿಯ ನಕ್ಷತ್ರಾ ಖಾಸಗಿ ಆಸ್ಪತ್ರೆ ವೈದ್ಯರಿಂದ ಲೂ ಎಡವಟ್ಟಾಗಿದೆ.

ಈಗಲೂ ಮಗು ಬೇಡ ಎನ್ನುತ್ತಿರುವ ತಾಯಿ

ಹಾವೇರಿ ಮೂಲದ 21 ವರ್ಷದ ಈ ಯುವತಿ ತಾನು ಅವಿವಾಹಿತೆಯಾಗಿದ್ದು, ಮಗು ಬೇಡವೆಂದು ದೇವನಹಳ್ಳಿಯ ನಕ್ಷತ್ರ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿರುವುದಾಗಿ ಮಾಹಿತಿ ನೀಡಿದ್ದಾರೆ. ಕಳೆದ ಶುಕ್ರವಾರ ಈ ಗಂಡು ಶಿಶು ಜನಿಸಿದ್ದು, ಆಸ್ಪತ್ರೆಯ ಸಂಪೂರ್ಣ ಬಿಲ್ ಪಾವತಿಸಿದ ನಂತರವೇ ತಾನು ಮಗುವನ್ನು ಬಿಟ್ಟು ತೆರಳಿದ್ದಾಗಿ ಯುವತಿ ಹೇಳಿದ್ದಾರೆ. ಸದ್ಯ ಮಕ್ಕಳ ಕಲ್ಯಾಣ ಸಮಿತಿ ಪದಾಧಿಕಾರಿಗಳು ಯುವತಿಗೆ ಆಪ್ತ ಸಮಾಲೋಚನೆ ನಡೆಸಿದ್ದು, ಆಕೆ ಈಗಲೂ ಮಗು ತನಗೆ ಬೇಡ ಎಂದೇ ಹೇಳಿದ್ದಾರೆ.

ದೇವನಹಳ್ಳಿಯ ನಕ್ಷತ್ರಾ ಖಾಸಗಿ ಆಸ್ಪತ್ರೆ ವೈದ್ಯರಿಂದ ಎಡವಟ್ಟು

ಇನ್ನು ಪ್ರಕರಣದ ಆರಂಭದಲ್ಲಿ ದೇವನಹಳ್ಳಿಯ ನಕ್ಷತ್ರಾ ಖಾಸಗಿ ಆಸ್ಪತ್ರೆಯ ವೈದ್ಯರಿಂದ ದೊಡ್ಡ ಎಡವಟ್ಟಾಗಿರುವುದು ಕಂಡುಬಂದಿದೆ. ಯುವತಿ ಮಗುವನ್ನು ಬಿಟ್ಟು ಹೋದ ತಕ್ಷಣವೇ ಈ ಬಗ್ಗೆ ಪೊಲೀಸರಿಗಾಗಲಿ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಾಗಲಿ ಯಾವುದೇ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: ಸಿದ್ದರಬೆಟ್ಟದಲ್ಲಿ ಎಣ್ಣೆ ಪಾರ್ಟಿ: ಒಂದೇ ಬಾರಿಗೆ 6 ಪಿಡಿಒ, ಇಬ್ಬರು ಕಾರ್ಯದರ್ಶಿಗಳು ಸಸ್ಪೆಂಡ್

ತದನಂತರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಗುವನ್ನು ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಈ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿತ್ತು. ಸದ್ಯ ಗಂಡು ಶಿಶುವನ್ನು ಚಿಕ್ಕಬಳ್ಳಾಪುರದ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

ಪ್ರಕರಣ ಹಿನ್ನೆಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ನಕ್ಷತ್ರ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಶುಕ್ರವಾರ ಹಾವೇರಿ ಮೂಲದ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಮಗು ಕಡಿಮೆ ತೂಕ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ನಗರದ ಮಾನಸ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿನ ಜೊತೆ ಕೇರ್‌ಟೇಕರ್ ಬಂದಿದ್ದರೂ, ಮಗುವಿನ ತಾಯಿ ಆಸ್ಪತ್ರೆಯಲ್ಲಿ ಇಲ್ಲ ಎಂಬ ಮಾಹಿತಿ ವೈದ್ಯರಿಗೆ ಅನುಮಾನ ಹುಟ್ಟಿಸಿತ್ತು.

ತಾಯಿ ಕಾಣಿಸದ ಹಿನ್ನೆಲೆ ಆಸ್ಪತ್ರೆಯ ವೈದ್ಯರು ತಕ್ಷಣವೇ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದರು.

ಇದನ್ನೂ ಓದಿ: ಲೋಕಾಪುರ ಡಿಸಿಸಿ ಬ್ಯಾಂಕ್​​ನಲ್ಲಿ ಗೋಲ್​ಮಾಲ್: ಪರ್ಸನಲ್ ಖಾತೆಗೆ ಹಣ ಹಾಕಿಸಿಕೊಂಡು ಮ್ಯಾನೇಜರ್ ಎಸ್ಕೇಪ್

ಇನ್ನು ಆಸ್ಪತ್ರೆಯಲ್ಲಿ ಯುವತಿ ನೀಡಿದ್ದ ಆಧಾರ್ ಕಾರ್ಡ್ ಪರಿಶೀಲಿಸಿದಾಗ ಆಕೆ ಹಾವೇರಿ ಜಿಲ್ಲೆ ಮೂಲದವಳು ಎಂಬುದು ತಿಳಿದುಬಂದಿತ್ತು. ಯುವತಿಗೆ ವಿವಾಹವಾಗಿರಲಿಲ್ಲ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ