AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾಗಿದ್ದರೂ ಬಾಡದ ಹಳೇ ಪ್ರೀತಿ.. ಆಷಾಢ ಮಾಸಕ್ಕೆಂದು ತವರಿಗೆ ಬಂದು ಪ್ರಿಯಕರನ ಜೊತೆ ಸಾವಿಗ ಶರಣು

ಆಷಾಢಕ್ಕೆ ತವರು ಮನೆಗೆ ಬಂದ ನವವಿವಾಹಿತೆಯೊಬ್ಬಳು ಪ್ರಿಯಕರನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಅನುಷಾ( 19) ಮತ್ತು ಆಕೆಯ ಪ್ರಿಯಕರ ವೇಣು (21) ಆತ್ಮಹತ್ಯೆ ಮಾಡಿಕೊಂಡವರು. ಸೊಂಟಕ್ಕೆ ವೇಲ್ ಬಿಗಿದುಕೊಂಡು ಕೃಷಿ ಹೊಂಡಕ್ಕೆ‌ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮದ್ವೆಯಾಗಿದ್ದರೂ ಬಾಡದ ಹಳೇ ಪ್ರೀತಿ.. ಆಷಾಢ ಮಾಸಕ್ಕೆಂದು ತವರಿಗೆ ಬಂದು ಪ್ರಿಯಕರನ ಜೊತೆ ಸಾವಿಗ ಶರಣು
ವೇಣು(21), ಅನುಷಾ(19)
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 14, 2024 | 3:34 PM

Share

ಚಿಕ್ಕಬಳ್ಳಾಪುರ, (ಜುಲೈ 14): ವೇಲನ್ನು ಟೊಂಕಕ್ಕೆ ಕಟ್ಟಿಕೊಂಡು ಕೃಷಿ ಹೊಂಡದ ನೀರಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಎಂ.ಮುದ್ದಲಹಳ್ಳಿ ಗ್ರಾಮದ ಯುವಕ ವೇಣು (21) ಹಾಗೂ ಕಾಚಹಳ್ಳಿ ಗ್ರಾಮದ ಯುವತಿ ಅನುಷಾ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಅನುಷಾ ಮತ್ತು ವೇಣು 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಅನುಷಾ ಮನೆಯವರು ಈ ಪ್ರೀತಿಗೆ ಒಪ್ಪಿಗೆ ನೀಡದೆ ಆಕೆಗೆ ಒಂದು ತಿಂಗಳ ಹಿಂದೆ ಅಷ್ಟೇ ಬೇರೆ ಯುವಕನ ಜತೆಗೆ ಮದುವೆ ಮಾಡಿದ್ದರು. ಆದ್ರೆ, ಇದೀಗ ಆಷಾಡ ಮಾಸವೆಂದು ತವರು ಮನೆ ಬಂದು ಪ್ರಿಯರನ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇವರು ಕಳೆದ ಎರಡು ವರ್ಷದಿಂದ ಪ್ರೀತಿ ಮಾಡುತ್ತಿದ್ದರು. ಈ ಬಗ್ಗೆ ಯುವತಿ ಮನೆಯಲ್ಲಿ ಜಾತಿ ನೆಪವೊಡ್ಡಿ ವಿರೋಧ ವ್ಯಕ್ತಪಡಿಸಿದ್ದರು. ಹೇಗಾದರೂ ಮಾಡಿ ಇಬ್ಬರನ್ನು ಬೇರೆ ಬೇರೆ ಮಾಡಬೇಕೆಂದು ಒಂದು ತಿಂಗಳ ಹಿಂದೆ ಬೇರೊಬ್ಬನ ಜೊತೆ ಯುವತಿಯ ಮದುವೆ ಮಾಡಲಾಗಿತ್ತು. ಅದರಂತೆ ಅನುಷಾ ದಾಬಸ್ ಪೇಟೆಯಲ್ಲಿ ಗಂಡನೊಂದಿಗೆ ಸಂಸಾರ ಮಾಡಿಕೊಂಡಿದ್ದಳು.

ಇದನ್ನೂ ಓದಿ: ಮಗಳ ವೀಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್: ಉಡುಪಿಯ ಆಪತ್ಭಾಂದವ ಆಸೀಫನ ಅಸಲಿ ಮುಖ ಬಯಲು

ಆದ್ರೆ, ಆಷಾಡ ಮಾಸ ಇರುವುದರಿಂದ ಅತ್ತೆ ಸೊಸೆ ಒಂದೇ ಕಡೆ ಇರಬಾರದು ಎನ್ನುವ ನಂಬಿಕೆ ಇದೆ. ಹೀಗಾಗಿ ಅನುಷಾ ಗಂಡನ ಮನೆಯಿಂದ ತವರು ಮನೆಗೆ ಬಂದಿದ್ದಳು. ಬಳಿಕ ಅಜ್ಜಿ ಮನೆ ಎಂ ಮುದ್ದಲಹಳ್ಳಿಗೆ ಬಂದು ತನ್ನ ಪ್ರಿಯಕರನ್ನು ಭೇಟಿ ಮಾಡಿದ್ದಾಳೆ. ಆ ವೇಳೆ ಇಬ್ಬರೂ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ನಿರ್ಧರಿಸಿ, ಮುದ್ದಲಹಳ್ಳಿ ಗ್ರಾಮ ಹೊರವಲಯದ ಕಾಡಿನಂಚಿನ ಕೃಷಿ ಹೊಂಡಕ್ಕೆ ಹೋಗಿ ಇಬ್ಬರೂ ಸೊಂಟಕ್ಕೆ ವೇಲ್ ಕಟ್ಟಿಕೊಂಡು ನೀರಿಗೆ ಹಾರಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಈ ಬಗ್ಗೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?