AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿ ಜೊತೆ ಪ್ರವಾಸಕ್ಕೆ ಹೊರಟ ಗಂಡ! 8 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗೃಹಿಣಿ ಮನನೊಂದು ನೇಣಿಗೆ ಶರಣು

ಹೆಣ್ಣೂರು ಕದಿರೇನಹಳ್ಳಿ ಗ್ರಾಮದ ಮುನಿರಾಜು-ದೇವಮ್ಮ ದಂಪತಿಗೆ ಮೋನಿಕಾ ಸೇರಿ ಮೂವರು ಹೆಣ್ಣು ಮಕ್ಕಳು ಇದ್ದಾರೆ. ಅದರಲ್ಲಿ ಮೋನಿಕಾ ದೊಡ್ಡವಳು. ಕಷ್ಟಪಟ್ಟು ಡಿಗ್ರಿ ಓದಿಸಿದ್ದೆವು. ದೊಡ್ಡವಳ ಬಾಳನ್ನು ಅಳಿಯ ಹಾಳು ಮಾಡಿದ್ದಾನೆ ಅಂತಾ ಮೃತಳ ತಂದೆ ತಾಯಿ ಗೋಳಾಡಿದ್ದಾರೆ.

ಪ್ರೇಯಸಿ ಜೊತೆ ಪ್ರವಾಸಕ್ಕೆ ಹೊರಟ ಗಂಡ! 8 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗೃಹಿಣಿ ಮನನೊಂದು ನೇಣಿಗೆ ಶರಣು
ಪ್ರೇಯಸಿ ಜೊತೆ ಗಂಡ ಪ್ರವಾಸ ಮಾಡಿದ ಆರೋಪ -ಮನನೊಂದ ನವವಿವಾಹಿತೆ ಆತ್ಮಹತ್ಯೆ
TV9 Web
| Edited By: |

Updated on:Oct 12, 2022 | 6:00 PM

Share

ಅವರು ಒಬ್ಬರಿಗೊಬ್ಬರು ಇಷ್ಟಪಟ್ಟು ಮದುವೆಯಾಗಿದ್ದರು. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅವರ ತಂದೆ ತಾಯಿ ಅದ್ದೂರಿ ಮದುವೆ ಮಾಡಿದ್ದರು. ಮದುವೆಯಾಗಿ ಕೇವಲ 8 ತಿಂಗಳು ಆಗಿತ್ತು. ಕೈಹಿಡಿದ ಮನದನ್ನೆ ಸುಂದರಿಯಾಗಿದ್ರೂ… ಆಕೆಯ ಗಂಡ ಆಕೆಯನ್ನು ತವರು ಮನೆಗೆ ಕಳುಹಿಸಿ ಪ್ರೇಯಸಿಯ ಜೊತೆ ಸುತ್ತಾಡ್ತಿದ್ದ, ಸಾಲದು ಅಂತ ತಾನು ಪ್ರೇಯಸಿ ಜೊತೆ ಸುತ್ತಾಡ್ತಿರುವ ಹಾಗೂ ಮೋಜು ಮಸ್ತಿ ಮಾಡ್ತಿರುವ ಫೋಟೊಗಳನ್ನು, ತನ್ನ ನವ ಪತ್ನಿಗೆ ಕಳುಹಿಸಿದ್ದ. ಇದ್ರಿಂದ ಮನನೊಂದ ನವವಿವಾಹಿತೆ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಷ್ಟಕ್ಕೂ ಅದೆಲ್ಲಿ ಅಂತೀರಾ? ಈ ವರದಿ ನೋಡಿ.

ಚಿಕ್ಕಬಳ್ಳಾಪುರ ತಾಲೂಕಿನ ಹೆಣ್ಣೂರು ಕದಿರೇನಹಳ್ಳಿ ಗ್ರಾಮದ 20 ವರ್ಷದ ಮೋನಿಕಾ ಹಾಗೂ ಚಿಕ್ಕಬಳ್ಳಾಪುರ ನಗರ ಪ್ರಶಾಂತ್ ನಗರ ನಿವಾಸಿ 25 ವರ್ಷದ ಭಾರ್ಗವ್, ಕೇವಲ 8 ತಿಂಗಳ ಹಿಂದೆಯಷ್ಟೇ ಚಿಕ್ಕಬಳ್ಳಾಪುರ ನಗರದ ಕೆ.ಇ.ಬಿ ಸಮುದಾಯ ಭವನದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು. ಮದುವೆಯಾಗಿ ಸುಖ ಸಂಸಾರದಲ್ಲಿ ತೇಲಾಡುತ್ತಿದ್ದಾಗ ಅದೇನ್ ಆಯಿತೊ ಏನೊ… ಇತ್ತೀಚೆಗೆ ಇಬ್ಬರ ಮಧ್ಯೆ ಮನಸ್ತಾಪ ಇತ್ತಂತೆ. ಇದ್ರಿಂದ ಮೋನಿಕಾ ಗಂಡ ಭಾರ್ಗವ, ವಿಜಯದಶಮಿ ಹಬ್ಬದ ಪ್ರಯುಕ್ತ ಪತ್ನಿಯನ್ನು ತವರು ಮನೆಗೆ ಕಳುಹಿಸಿದ್ದ. ಅದಾದಮೇಲೆ ವಾಪಸ್ ಪತ್ನಿಯನ್ನು ಕರೆದುಕೊಂಡು ಹೋಗಲು ಬಂದಿಲ್ಲ. ಇದ್ರಿಂದ ಅನುಮಾನಗೊಂಡ ಪತ್ನಿ, ಕರೆದುಕೊಂಡು ಹೋಗಲು ಹೇಳಿದಾಗ… ಬೇರೆಯದ್ದೆ ಕತೆ ಹೇಳಿದ್ದ ಗಂಡ ಭಾರ್ಗವ. ಇಂದು ಬುಧವಾರ ಗಂಡ ಬರುವುದರ ಬದಲು ಆತನು ಕಳುಹಿಸಿದ್ದ ಕೆಲವು ಫೊಟೊಗಳು ಮೋನಿಕಾ ವಾಟ್ಸಪ್ ಗೆ ಬಂದಿದ್ದವು! ಅದನ್ನು ನೋಡಿ ದಂಗಾದ ಮೋನಿಕಾ…, ತವರು ಮನೆಯಲ್ಲೆ ನೇಣು ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾಳೆ.

ಗಂಡ ಭಾರ್ಗವ… ತವರು ಮನೆಯಲ್ಲಿದ್ದ ಪತ್ನಿಯನ್ನು ಕರೆದುಕೊಂಡು ಹೋಗುವುದರ ಬದಲು… ತಾನು ಬೇರೆ ಯುವತಿಯನ್ನು ಪ್ರೀತಿ ಮಾಡ್ತಿದ್ದೀನಿ, ಆಕೆಯೂ ತನ್ನನ್ನು ಪ್ರೀತಿ ಮಾಡ್ತಿದ್ದಾಳೆ, ಇಬ್ಬರೂ ಸೇರಿ ಪ್ರವಾಸದಲ್ಲಿ ಇದ್ದೇವೆ ಅಂತ ಹೇಳಿದ್ದ. ಜೊತೆಗೆ, ಲವ್ವರ್ ಜೊತೆ ಇರುವ ಕೆಲವು ಪೋಟೊಗಳನ್ನು ವಾಟ್ಸಪ್ ಗೆ ಪೋಸ್ಟ್ ಮಾಡಿದ್ದಾನಂತೆ. ಇದ್ರಿಂದ ಮನನೊಂದ ಮೋನಿಕಾ, ತನ್ನ ಸಾವಿಗೆ ತನ್ನ ಗಂಡ ಭಾರ್ಗವನೇ ಕಾರಣ ಅಂತಾ ಡೆತ್ ನೋಟ್ ಬರೆದಿಟ್ಟು, ತಂದೆಯ ಮನೆ ಮೇಲೆ ಇರುವ ಕೊಠಡಿಯಲ್ಲೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ.

ಇನ್ನು ಹೆಣ್ಣೂರು ಕದಿರೇನಹಳ್ಳಿ ಗ್ರಾಮದ ಮುನಿರಾಜು-ದೇವಮ್ಮ ದಂಪತಿಗೆ ಮೋನಿಕಾ ಸೇರಿ ಮೂವರು ಹೆಣ್ಣು ಮಕ್ಕಳು ಇದ್ದಾರೆ. ಅದರಲ್ಲಿ ಮೋನಿಕಾ ದೊಡ್ಡವಳು. ಕಷ್ಟಪಟ್ಟು ಡಿಗ್ರಿ ಓದಿಸಿದ್ದೆವು. ದೊಡ್ಡವಳ ಬಾಳನ್ನು ತನ್ನ ಅಳಿಯ ಹಾಳು ಮಾಡಿದ್ದಾನೆ. ಯಾವ ಪೋಷಕರಿಗೂ ಇಂಥ ಗತಿ ಬರಬಾರದು. ಯಾರೂ ಕೂಡ ಈ ರೀತಿ ಮಾಡಬಾರದು ಅಂತಾ ಮೃತಳ ತಂದೆ ತಾಯಿ ಗೋಳಾಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. (ಭೀಮಪ್ಪ ಪಾಟೀಲ ಟಿವಿ9 ಚಿಕ್ಕಬಳ್ಳಾಪುರ)

Published On - 5:58 pm, Wed, 12 October 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?