AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯಿಂದ ಕಿರುಕುಳ ಆರೋಪ: ಡೆತ್​ ನೋಟ್​ ಬರೆದು ನವ ವಿವಾಹಿತೆ ಆತ್ಮಹತ್ಯೆ

ಪತಿ ಕಿರುಕುಳಕ್ಕೆ ಬೇಸತ್ತು ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಂಡಾವಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೇರೆ ಯುವತಿ ಜೊತೆ ಗಂಡನಿಗೆ ಸಂಬಂಧವಿದ್ದು, ಮದುವೆ ಬಳಿಕ ಈ ವಿಷಯ ನನಗೆ ಗೊತ್ತಾಗಿದೆ. ಇಬ್ಬರೂ ಯಾವಾಗಲೂ ಫೋನ್​, ಚಾಟಿಂಗ್​ ಮಾಡುತ್ತಿರುತ್ತಾರೆ. ಇದನ್ನು ಪ್ರಶ್ನಿಸಿದರೆ ಗಂಡ ಕೋಪಮಾಡಿಕೊಂಡು ಜಗಳವಾಡುತ್ತಾರೆ. ಅವರ ಕಿರುಕುಳದಿಂದಾಗಿ ಬೇಸತ್ತು ಸೂಸೈಡ್​ ಮಾಡಿಕೊಳ್ಳುತ್ತಿರೋದಾಗಿ ಡೆತ್​ ನೋಟ್​ ನಲ್ಲಿ ಆಕೆ ಆರೋಪಿಸಿದ್ದಾಳೆ.

ಪತಿಯಿಂದ ಕಿರುಕುಳ ಆರೋಪ: ಡೆತ್​ ನೋಟ್​ ಬರೆದು ನವ ವಿವಾಹಿತೆ ಆತ್ಮಹತ್ಯೆ
ನವ ವಿವಾಹಿತೆ ಆತ್ಮಹತ್ಯೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Oct 09, 2025 | 11:36 AM

Share

ಚಿಕ್ಕಬಳ್ಳಾಪುರ, ಅಕ್ಟೋಬರ್​ 09: ಪತಿ ಕಿರುಕುಳಕ್ಕೆ ಬೇಸತ್ತು ನವ ವಿವಾಹಿತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗುಡಿಬಂಡೆ ತಾಲೂಕಿನ ಕೊಂಡಾವಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆ.ಎಸ್. ಜಯಶ್ರೀ (25) ಎಂದು ಗುರುತಿಸಲಾಗಿದ್ದು, 6 ತಿಂಗಳ ಹಿಂದೆಯಷ್ಟೇ ಚಂದ್ರಶೇಖರ್​ ಎಂಬವರ ಜೊತೆ ಈಕೆಯ ವಿವಾಹ ಆಗಿತ್ತು.

ಶಿಡ್ಲಘಟ್ಟ ತಾಲ್ಲೂಕಿನ ಕೊಂಡಪ್ಪನಹಳ್ಳಿ ಗ್ರಾಮದ ಚಂದ್ರಶೇಖರ್​ ಮತ್ತು ಜಯಶ್ರೀ ವಿವಾಹದ ಬಳಿಕ ಎಲ್ಲವೂ ಚೆನ್ನಾಗಿಯೇ ಇತ್ತು. ಆದ್ರೆ ಬಳಿಕ ಪತಿ ಚಂದ್ರಶೇಖರ್​ ಬೇರೆ ಯುವತಿ ಜೊತೆ ಸದಾ ಚಾಟಿಂಗ್​ ಮಾಡ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಜಯಶ್ರೀಗೆ ಗೊತ್ತಾಗಿದೆ. ಇದನ್ನು ಆಕೆ ಪತಿ ಬಳಿ ಪ್ರಶ್ನಿಸಿದ್ದಾಳೆ. ಆ ಬಳಿಕ ಚಂದ್ರಶೇಖರ್​ ಜಯಶ್ರೀಗೆ ಕಿರುಕುಳ ನೀಡಲು ಆರಂಭಿಸಿದ್ದ. ಇದರಿಂದಾಗಿ ಬೇಸತ್ತಿದ್ದ ಜಯಶ್ರೀ ಡೆತ್​ ನೋಟ್​ ಬರೆದಿಟ್ಟು ತನ್ನ ತವರಾದ ಕೊಂಡಾವಲಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರ್ ಬಂಧಿಸುವವರೆಗೆ ಶವ ಸಂಸ್ಕಾರ ಮಾಡಲ್ಲವೆಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದು, ಘಟನಾ ಸ್ಥಳಕ್ಕೆ ಗುಡಿಬಂಡೆ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಇದನ್ನೂ ಓದಿ: 3 ದಿನದ ಹಿಂದೆ ಪತ್ನಿ ಕೊಂದು ಮಂಚದೊಳಗಿಟ್ಟು ಪತಿ ಪರಾರಿ!

ಡೆತ್​ ನೋಟ್​ ನಲ್ಲಿ ಏನಿದೆ?

ಮದುವೆ ಆಗುವಾಗ ಇಷ್ಟ ಪಟ್ಟು ಮಾಡಿಕೊಳ್ಳಬೇಕೇ ಹೊರತು ಕಷ್ಟ ಪಟ್ಟು ಅಲ್ಲ. ಸುಮ್ಮನೆ ನಾನು ಅವರಿಬ್ಬರ ಮಧ್ಯ ದಲ್ಲಿ ಯಾಕೆ ಅಡ್ಡ ಬರಬೇಕು. ಯಾವಾಗಲೂ ಇಬ್ಬರೂ ಫೋನ್, ಮೆಸೇಜ್ ಮಾಡುತ್ತಾ ಇರುತ್ತಾರೆ. ಯಾರ ಮೆಸೇಜ್, ಫೋನ್ ಅಂತ ಕೇಳಿದರೆ ಫ್ರೆಂಡ್ ಅಂತ ಹೇಳ್ತಾರೆ. ಎಷ್ಟೇ ಕ್ಲೋಸ್ ಫ್ರೆಂಡ್ ಆದರೂ ಯಾವಾಗಲು ಫೋನ್, ಮೆಸೇಜ್ ಮಾಡೋದು ಏನು ಇರುತ್ತೋ ನನಗೆ ಗೊತ್ತಿಲ್ಲ. ಏನು ಯಾವಾಗಲೂ ಆಕೆ ಜೊತೆ ಮೆಸೇಜ್ ಎಂದು ಕೇಳಿದರೆ ಕೋಪ ಮಾಡಿಕೊಂಡು ನನ್ನ ಜೊತೆ ಸರಿಯಾಗಿ ಮಾತಾಡಲ್ಲ. ಇವರಿಗೆ ನಾನು ಇಷ್ಟ ಇಲ್ಲವಂತೆ. ಇದು ನನಗೆ ಗೊತ್ತಾಗಿದ್ದು ಮದುವೆ ಬಳಿಕ. ಈ ವಿಷಯ ತಿಳಿದ ಮೇಲೆ ಮಾನಸಿಕವಾಗಿ ತುಂಬಾ ನೊಂದಿದ್ದೇನೆ. ಇವರಿಬ್ಬರ ನಡುವೆ ಇರುವ ಸಂಬಂಧದ ಬಗ್ಗೆ ನಮ್ಮ ತಂದೆ, ತಾಯಿಗೂ ಗೊತ್ತಿಲ್ಲ ಎಂಡು ಡೆತ್​ ನೋಟ್​ನಲ್ಲಿ ಜಯಶ್ರೀ ಬರೆದುಕೊಂಡಿದ್ದಾರೆ.

ಅಪರಿಚಿತ ಬಾಲಕಿ ಶವ ಪತ್ತೆ

ಮೈಸೂರಿನ ವಸ್ತುಪ್ರದರ್ಶನದ ಬಳಿ ಅಂದಾಜು 10-13 ವರ್ಷದ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಮೃತ ಬಾಲಕಿ ಮೈಸೂರು ದಸರಾಗೆ ಗೊಂಬೆ, ಬಲೂನ್ ಮಾರಲು ಬಂದವಳಾಗಿರಬಹುದು ಎಂದು ಅಂದಾಜಿಸಲಾಗಿದ್ದು, ನಜರಬಾದ್ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ಸ್ಥಳದಲ್ಲಿ ಮೊನ್ನೆ ವೆಂಕಟೇಶ್ ಎಂಬುವರ ಹತ್ಯೆಯಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ